Homeಕರ್ನಾಟಕಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ - ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

- Advertisement -
- Advertisement -

ಕೊಪ್ಪಳದ ಹಿರೇಬಗನಾಳ ಸುತ್ತ ಮುತ್ತಲಿನ ಗ್ರಾಮಗಳಿಗೆ ಹತ್ತಿರದ ಕಾರ್ಖಾನೆಗಳಿಂದ ಭಾರೀ ಸಂಕಷ್ಟ ಬಂದೊದಗಿದೆ. ಕಾರ್ಖಾನೆಗಳ ಹಾರುಬೂದಿ ಮತ್ತು ತ್ಯಾಜ್ಯದಿಂದ ಸುತ್ತಲಿನ ಪರಿಸರ ತೀವ್ರರೀತಿಯಲ್ಲಿ ಕಲುಷಿತಗೊಂಡಿದ್ದು ಜನ – ಜಾನುವಾರಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದರೆ ಕಾರ್ಖಾನೆಗಳ ಆಡಳಿತ ಮಂಡಳಿಯಾಗಲಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲದ್ದರಿಂದ ಅಲ್ಲಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರೇಬಗನಾಳದಲ್ಲಿ ಹರೇಕೃಷ್ಣ ಮೆಟಲಿಕ್ಸ್ ಪ್ರೈ.ಲಿ ಎಂಬ ಸ್ಟೀಲ್ ಕಂಪನಿಯಿದ್ದು ಅದು ಬಳಸುವ ಕಲ್ಲಿದ್ದಲು ಮತ್ತಿತರ ಉರುವಲುಗಳಿಂದ ಪ್ರತಿನಿತ್ಯ ದೊಡ್ಡ ಪ್ರಮಾಣದ ಹಾರುಬೂದಿ ಸುತ್ತಮುತ್ತಲಿನ ಪ್ರದೇಶಗಳನ್ನು ಕಲುಷಿತಗೊಳಿಸಿದೆ. ಹಾರುಬೂದಿಯ ದಾಳಿಗೆ ಸಂಪೂರ್ಣ ಬೆಳೆ ನಾಶವಾಗುತ್ತಿದ್ದು, ಜಾನುವಾರುಗಳ ಸಹ ಮೇವು ತಿನ್ನುತ್ತಿಲ್ಲ. ಮನುಷ್ಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು ವಾಂತಿ-ಬೇಧಿಯಂತಹ ಕಾಯಿಲೆಗಳು ಸಾಮಾನ್ಯವಾಗಿವೆ ಎಂದು ರೈತರು ದೂರಿದ್ದಾರೆ.

 

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಸಂತ್ರಸ್ತ ರೈತ ಹನುಮಂತ ಕಡ್ಲಿ “ನಮ್ಮದು ಮತ್ತು ನಮ್ಮ ಸಂಬಂಧಿಕರ ಸುಮಾರು 16 ಎಕರೆ ಜಮೀನಿನ ಪಕ್ಕದಲ್ಲೇ ಈ ಕಾರ್ಖಾನೆ ಇದೆ. ಕಾರ್ಖಾನೆಯ ಹಾರುಬೂದಿ ಮತ್ತು ತ್ಯಾಜ್ಯಗಳಿಂದ ಕಳೆದ 10-12 ವರ್ಷಗಳಿಂದ ನಾವು ಸಮರ್ಪಕವಾಗಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಪ್ರತಿ ವರ್ಷವೂ ನಾವು ಬೆಳೆಯುವ ಸೀಬೆಕಾಯಿ, ಮೆಕ್ಕೆಜೋಳ ಹಾಳಾಗುತ್ತಿದೆ. ಈ ಕುರಿತು 5 ವರ್ಷದ ಹಿಂದೆಯೇ ಲೋಕಾಯುಕ್ತರಲ್ಲಿ ದೂರು ಸಲ್ಲಿಸಿದ್ದೇವೆ” ಎನ್ನುತ್ತಾರೆ.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ, ತೋಟಗಾರಿಗೆ ಇಲಾಖೆ ಮತ್ತು ಹಲವು ವೈದ್ಯರು ಮತ್ತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಹಾರುಬೂದಿಯಿಂದಾಗುತ್ತಿರುವ ಅಪಾಯಗಳ ಕುರಿತು ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ಕಾರ್ಖಾನೆಯು ಪರಿಸರ ಸಂರಕ್ಷಣೆಯ ನಿಯಮಗಳನ್ನು ಮೀರಿರುವುದು ಈ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. ಈ ಸಮಯದಲ್ಲಿ ಲೋಕಾಯುಕ್ತ ನೋಟಿಸ್‌ಗೆ ಪ್ರತಿಕ್ರಿಯಿಸಿದ ಕಾರ್ಖಾನೆಯು 16 ಎಕರೆಗೆ 12 ಲಕ್ಷದಂತೆ 2017ರಿಂದ ಬೆಳೆನಷ್ಟ ಪರಿಹಾರ ಕೊಡುವುದಾಗಿ ಹೇಳಿ ಕಾರ್ಖಾನೆ ಮುಚ್ಚಿಹೋಗುವುದಿರಿಂದ ತಪ್ಪಿಸಿಕೊಂಡಿತು. ಆದರೆ ಅದರ ದುಷ್ಪರಿಣಾಮಗಳು ಮಾತ್ರ ದಿನೇ ದಿನೇ ಹೆಚ್ಚಾಗುತ್ತಿವೆ ಎಂದು ಹನುಮಂತ ಕಡ್ಲಿ ದೂರಿದ್ದಾರೆ.

ಪ್ರತಿನಿತ್ಯ ನಮ್ಮ ಮೇಲೆ ಧೂಳು ಬೀಳುತ್ತಿದ್ದು, ಗಾಳಿ-ನೀರಿನೊಂದಿಗೆ ದೇಹ ಸೇರುತ್ತಿದೆ. ಸುಸ್ತು-ವಾಂತಿ-ಬೇಧಿಯಂತಹ ರೋಗಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಜಾನುವಾರು ಮೇವು ತಿನ್ನುತ್ತಿಲ್ಲ. ಬೆಲೆಗಳೆಲ್ಲ ನಾಶವಾಗುತ್ತಿದೆ. ಹಾಗಾಗಿ ನಮಗೆ ಕಾರ್ಖಾನೆಯ ಯಾವುದೇ ಪರಿಹಾರ ಹಣ ಬೇಡ. ನಮಗೆ ಶಾಶ್ವತ ಪರಿಹಾರ ಬೇಕಾಗಿದೆ. ಕಾರ್ಖಾನೆಯು ಹಾರುಬೂದಿ ಹರಡುವುದನ್ನು ತಡೆಗಟ್ಟಬೇಕು. ಸಾಧ್ಯವಾಗದಿದ್ದರೆ ನಮಗೆ ಬೇರೆ ಕಡೆ ಜಮೀನು ನೀಡಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಯನ್ನು ಮುಚ್ಚಬೇಕು. ಇದಕ್ಕೆ ಲೋಕಾಯುಕ್ತ ನ್ಯಾಯಾಲಯವು ಸಹಮತ ವ್ಯಕ್ತಪಡಿಸಿದೆ. ಆದರೆ ಜಿಲ್ಲಾಧಿಕಾರಿಗಳು ಪಟ್ಟು ಹಿಡಿದು ಜಾರಿಗೊಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆಗಾಗಿ ಕೊಪ್ಪಳ ಜಿಲ್ಲಾಧಿಕಾರಿ ಸುರಲ್ಕರ್ ವಿಕಾಸ್ ಕಿಶೋರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...