Homeಚಳವಳಿಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಜಿಲ್ಲೆಯಲ್ಲಿ ಪದೇ ಪದೇ ಜಾತಿ ದೌರ್ಜನ್ಯದ ಘಟನೆಗಳು ವರದಿಯಾಗುತ್ತಿದ್ದರೂ ಜಿಲ್ಲಾಡಳಿತವಾಗಲಿ, ಸಮಾಜ ಕಲ್ಯಾಣ ಇಲಾಖೆಯಾಗಲಿ ಯಾವುದೇ ಮುಂಜಾಗ್ರತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೋರಾಟಗಾರ ಕರಿಯಪ್ಪ ಗುಡಿಮನಿಯವರು ಕಿಡಿಕಾರಿದ್ದಾರೆ.

- Advertisement -
- Advertisement -

ಒಂದೆಡೆ ಜಾತಿಯೆಂಬುದಿಲ್ಲ, ಮೀಸಲಾತಿ ತೆಗೆಯಬೇಕು ಇತ್ಯಾದಿ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಜಾತಿ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಸಾಂಕ್ರಾಮಿಕ ಕಾಲದಲ್ಲಿಯೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಲೇ ಇವೆ. ಪದೇ ಪದೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ವರದಿಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ಅಮಾನುಷ ಘಟನೆ ವರದಿಯಾಗಿದ್ದು, ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೂನ್ 22 ರಾತ್ರಿ ಜರುಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ಕುರುಬ ಸಮುದಾಯದ ಯುವತಿಯನ್ನು ಪ್ರೀತಿಸಿದ ಕಾರಣಕ್ಕಾಗಿ ದಲಿತ (ಮಾದಿಗ) ಸಮುದಾಯದ ದಾನಪ್ಪ (23) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಾಗಿದ್ದು ನಾಲ್ಕು ಜನರನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಬರಗೂರು ಗ್ರಾಮದ ಕುರುಬ ಸಮುದಾಯದ ಮರಿಬಸಪ್ಪನವರ ಎರಡನೇ ಮಗಳಾದ ಸುನೀತಾ (20) ಮತ್ತು ಮಾದಿಗ ಸಮುದಾಯದ ಕರಿ ಹನುಮಂತಪ್ಪನವರ ಎರಡನೇ ಮಗ ದಾನಪ್ಪ (23) ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಪೋಷಕರಿಗೆ ತಿಳಿದು ಹುಡುಗಿಯ ತಂದೆ ಮರಿಬಸಪ್ಪ ಈ ಹಿಂದೆಯೇ ಹುಡುಗ ದಾನಪ್ಪನನ್ನು ಕರೆದು ಜಾತಿನಿಂದನೆ ಮಾಡಿದ್ದಲ್ಲದೆ, ಹಲ್ಲೆ ನಡೆಸಿ ಹುಡುಗಿಯ ತಂಟೆಗೆ ಬರಬಾರದೆಂದು ತಾಕೀತು ಮಾಡಿದ್ದರು ಎಂದು ಹುಡುಗನ ತಂದೆ ಕರಿ ಹನುಮಂತಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಮುಂದಿನ ವಾರ ಹುಡುಗಿಯ ಮದುವೆ ನಿಗಧಿಯಾಗಿದ್ದು, ಹಾಗಿದ್ದರೂ ಆಕೆ ದಾನಪ್ಪನೊಡನೆ ಮಾತನಾಡುತ್ತಿದ್ದಳು ಎಂದು ಆಕೆಯ ತಂದೆ ಮರಿಬಸಪ್ಪ ಜೂನ್ 22 ರ ರಾತ್ರಿ ಮಾತನಾಡುವುದಾಗಿ ದಾನಪ್ಪನನ್ನು ಕರೆಸಿಕೊಂಡಿದ್ದಾರೆ. ತದನಂತರ ಆತನನ್ನು ಬೆದರಿಸಿ, ಹೊಲದಲ್ಲೆಲ್ಲ ಅಟ್ಟಾಡಿಸಿಕೊಂಡು ತೀವ್ರ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ಕರಿ ಹನುಮಂತಪ್ಪ ತಿಳಿಸಿದ್ದಾರೆ.

“22 ರ ರಾತ್ರಿ ಮನೆಯಿಂದ ಹೊರಹೋದ ಮಗ ವಾಪಸ್ ಬರುತ್ತಾನೆಂದು ರಾತ್ರಿ 12 ಗಂಟೆವರೆಗೆ ಕಾದೆವು. ಅವನು ಬಾರದಿದ್ದಾಗ ರಾತ್ರಿಯೆಲ್ಲ ಹುಡುಕಿದರೂ ಆತ ಸಿಗಲೇ ಇಲ್ಲ, ಬೆಳಿಗ್ಗೆ ಎದ್ದ ಕೂಡಲೇ ಮಗದ ಶವ ಆತ ಕೆಲಸ ಮಾಡುವ ಮರಿಸ್ವಾಮಿಯೆಂಬುವವರ ಹೊಲದಲ್ಲಿ ಪತ್ತೆಯಾಗಿದೆ ಎಂಬ ಆಘಾತ ಸುದ್ದಿ ಬರಸಿಡಿಲಂತೆ ಬಡಿಯಿತು” ಎಂದು ಮೃತನ ತಂದೆ ಅಳಲು ತೋಡಿಕೊಂಡಿದ್ದಾರೆ.

ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಹುಡುಗಿ ಸುನೀತಾ, ಆಕೆಯ ತಂದೆ ಮರಿಬಸಪ್ಪ, ತಾಯಿ ಲಲಿತಮ್ಮ, ಆಕೆಯ ಅಕ್ಕನ ಗಂಡ ಹುಲುಗಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಸಹಕರಿಸಿದ ಸಂಶಯದಲ್ಲಿ ಗ್ರಾಮಸ್ಥರಾದ ಕೋರಪ್ಪ, ಯಮನಪ್ಪ ಮತ್ತು ನಿಂಗಪ್ಪ ಎಂಬುವವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಹೋರಾಟಕ್ಕೆ ಕರೆ

ದಲಿತ ಯುವಕನ ಕೊಲೆ ನಡೆದ ನಂತರ ಬರಗೂರು ಗ್ರಾಮದಲ್ಲಿ ಭಯಭೀತ ವಾತವಾರಣ ನಿರ್ಮಾಣವಾಗಿದೆ. ಇದು ಮರ್ಯಾದೆಹೀನ ಹತ್ಯೆಯಾಗಿದೆ. ಹಾಗಾಗಿ ಕೂಡಲೇ ಅಲ್ಲಿನ ದಲಿತರಿಗೆ ರಕ್ಷಣೆ ಒದಗಿಸಬೇಕು ಮತ್ತು ಗಲಭೆ ನಡೆಯದಂತೆ ತಡೆಯಲು ಶಾಂತಿ ಸಭೆ ನಡೆಸಬೇಕಿದೆ. ಕ್ಷೇತ್ರದ ಶಾಸಕರಾದ ದಲಿತ ಸಮುದಾಯದ ಬಸವರಾಜ್ ದಡೆಸಗೂರುರವರು ಗ್ರಾಮಕ್ಕೆ ತೆರಳಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಬೇಕು ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ಒತ್ತಾಯಿಸಿದ್ದಾರೆ.

ಗ್ರಾಮಕ್ಕೆ ಭೇಟಿ ಮಾತನಾಡಿರುವ ಅವರು, “ಜಿಲ್ಲೆಯಲ್ಲಿ ಪದೇ ಪದೇ ಜಾತಿ ದೌರ್ಜನ್ಯದ ಘಟನೆಗಳು ವರದಿಯಾಗುತ್ತಿದ್ದರೂ ಜಿಲ್ಲಾಡಳಿತವಾಗಲಿ, ಸಮಾಜ ಕಲ್ಯಾಣ ಇಲಾಖೆಯಾಗಲಿ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಸರ್ಕಾರ ರಾಜ್ಯದಲ್ಲಿ ನಡೆಯುವ ದಲಿತರು ಮತ್ತು ಶೋಷಿತರ ಮೇಲಿನ ಕೊಲೆ, ಶೋಷಣೆ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಘಟನೆ ನಡೆದ ನಂತರದ ಕ್ರಮಗಳಿಗಿಂತ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರಿಯಪ್ಪ ಗುಡಿಮನಿಯವರು, “ಕಕ್ಕರಗೋಳ ಗ್ರಾಮದ ದಲಿತ ಯುವಕ ರಾಘವೇಂದ್ರನ ಬರ್ಬರ ಕೊಲೆ ನಡೆದು ಒಂದು ವರ್ಷವಾಗಿದೆ. ಇತ್ತೀಚೆಗೆ ಜಿಲ್ಲೆಯ ಹೊಸಳ್ಳಿಯಲ್ಲಿ ದಲಿತರಿಗೆ ಕ್ಷೌರ ಮಾಡದೆ ಹಲ್ಲೆ ನಡೆಸಿದ್ದಕ್ಕೆ ಅವರು ನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಇಂತಹ ಹತ್ತಾರು ಘಟನೆಗಳು ನಡೆಯುತ್ತಲೇ ಇವೆ. ಹಾಗಾಗಿ ಸರ್ಕಾರವೇ ಈ ಜಾತಿ ದೌರ್ಜನ್ಯ ಕೊನೆಗೊಳಿಸಲು ಯತ್ನಿಸಬೇಕು. ಪ್ರತಿ ಗ್ರಾಮದಲ್ಲಿ ಸವಿತಾ ಸಮಾಜದ ನಿರುದ್ಯೋಗಿ ಯುವಕರಿಗೆ ಕಟಿಂಗ್-ಶೇವಿಂಗ್ ಅಂಗಡಿಯಿಟ್ಟುಕೊಟ್ಟು ಎಲ್ಲಾ ಜಾತಿಯವರಿಗೆ ಕ್ಷೌರ ಮಾಡುವಂತೆ ಮಾಡಬೇಕು. ಆ ಮೂಲಕ ಶಾಂತಿ -ಸಾಮರಸ್ಯ ಕಾಪಾಡಬೇಕು. ಪ್ರಸ್ತುತ ಪ್ರಕರಣದಲ್ಲಿ ಮೃತ ದಾನಪ್ಪನ ಕುಟುಂಬಕ್ಕೆ ಸೂಕ್ತ ಪರಿಹಾರ, ಭೂಮಿ ಮತ್ತು ಸರ್ಕಾರಿ ಹುದ್ದೆ ಕೊಡಬೇಕು” ಎಂದರು.

ಈ ಕ್ರಮಗಳಿಗೆ ಜಿಲ್ಲಾಡಳಿತ, ಶಾಸಕರು ಮತ್ತು ಸಮಾಜ ಕಲ್ಯಾಣ ಇಲಾಖೆ ಮುಂದಾಗಬೇಕು. ಪೊಲೀಸರು ಉಳಿದ ಆರೋಪಿಗಳನ್ನು ಬಂಧಿಸಿ ಸಮರ್ಪಕ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗುವಂತೆ ಮಾಡಬೇಕು. ಆ ಮೂಲಕ ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಶಕ್ತಿಯ ವತಿಯಿಂದ ತೀವ್ರ ಹೋರಟ ಹಮ್ಮಿಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...