Homeಚಳವಳಿಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಜಿಲ್ಲೆಯಲ್ಲಿ ಪದೇ ಪದೇ ಜಾತಿ ದೌರ್ಜನ್ಯದ ಘಟನೆಗಳು ವರದಿಯಾಗುತ್ತಿದ್ದರೂ ಜಿಲ್ಲಾಡಳಿತವಾಗಲಿ, ಸಮಾಜ ಕಲ್ಯಾಣ ಇಲಾಖೆಯಾಗಲಿ ಯಾವುದೇ ಮುಂಜಾಗ್ರತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೋರಾಟಗಾರ ಕರಿಯಪ್ಪ ಗುಡಿಮನಿಯವರು ಕಿಡಿಕಾರಿದ್ದಾರೆ.

- Advertisement -
- Advertisement -

ಒಂದೆಡೆ ಜಾತಿಯೆಂಬುದಿಲ್ಲ, ಮೀಸಲಾತಿ ತೆಗೆಯಬೇಕು ಇತ್ಯಾದಿ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಜಾತಿ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಸಾಂಕ್ರಾಮಿಕ ಕಾಲದಲ್ಲಿಯೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಲೇ ಇವೆ. ಪದೇ ಪದೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ವರದಿಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ಅಮಾನುಷ ಘಟನೆ ವರದಿಯಾಗಿದ್ದು, ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೂನ್ 22 ರಾತ್ರಿ ಜರುಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ಕುರುಬ ಸಮುದಾಯದ ಯುವತಿಯನ್ನು ಪ್ರೀತಿಸಿದ ಕಾರಣಕ್ಕಾಗಿ ದಲಿತ (ಮಾದಿಗ) ಸಮುದಾಯದ ದಾನಪ್ಪ (23) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಾಗಿದ್ದು ನಾಲ್ಕು ಜನರನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಬರಗೂರು ಗ್ರಾಮದ ಕುರುಬ ಸಮುದಾಯದ ಮರಿಬಸಪ್ಪನವರ ಎರಡನೇ ಮಗಳಾದ ಸುನೀತಾ (20) ಮತ್ತು ಮಾದಿಗ ಸಮುದಾಯದ ಕರಿ ಹನುಮಂತಪ್ಪನವರ ಎರಡನೇ ಮಗ ದಾನಪ್ಪ (23) ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಪೋಷಕರಿಗೆ ತಿಳಿದು ಹುಡುಗಿಯ ತಂದೆ ಮರಿಬಸಪ್ಪ ಈ ಹಿಂದೆಯೇ ಹುಡುಗ ದಾನಪ್ಪನನ್ನು ಕರೆದು ಜಾತಿನಿಂದನೆ ಮಾಡಿದ್ದಲ್ಲದೆ, ಹಲ್ಲೆ ನಡೆಸಿ ಹುಡುಗಿಯ ತಂಟೆಗೆ ಬರಬಾರದೆಂದು ತಾಕೀತು ಮಾಡಿದ್ದರು ಎಂದು ಹುಡುಗನ ತಂದೆ ಕರಿ ಹನುಮಂತಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಮುಂದಿನ ವಾರ ಹುಡುಗಿಯ ಮದುವೆ ನಿಗಧಿಯಾಗಿದ್ದು, ಹಾಗಿದ್ದರೂ ಆಕೆ ದಾನಪ್ಪನೊಡನೆ ಮಾತನಾಡುತ್ತಿದ್ದಳು ಎಂದು ಆಕೆಯ ತಂದೆ ಮರಿಬಸಪ್ಪ ಜೂನ್ 22 ರ ರಾತ್ರಿ ಮಾತನಾಡುವುದಾಗಿ ದಾನಪ್ಪನನ್ನು ಕರೆಸಿಕೊಂಡಿದ್ದಾರೆ. ತದನಂತರ ಆತನನ್ನು ಬೆದರಿಸಿ, ಹೊಲದಲ್ಲೆಲ್ಲ ಅಟ್ಟಾಡಿಸಿಕೊಂಡು ತೀವ್ರ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ಕರಿ ಹನುಮಂತಪ್ಪ ತಿಳಿಸಿದ್ದಾರೆ.

“22 ರ ರಾತ್ರಿ ಮನೆಯಿಂದ ಹೊರಹೋದ ಮಗ ವಾಪಸ್ ಬರುತ್ತಾನೆಂದು ರಾತ್ರಿ 12 ಗಂಟೆವರೆಗೆ ಕಾದೆವು. ಅವನು ಬಾರದಿದ್ದಾಗ ರಾತ್ರಿಯೆಲ್ಲ ಹುಡುಕಿದರೂ ಆತ ಸಿಗಲೇ ಇಲ್ಲ, ಬೆಳಿಗ್ಗೆ ಎದ್ದ ಕೂಡಲೇ ಮಗದ ಶವ ಆತ ಕೆಲಸ ಮಾಡುವ ಮರಿಸ್ವಾಮಿಯೆಂಬುವವರ ಹೊಲದಲ್ಲಿ ಪತ್ತೆಯಾಗಿದೆ ಎಂಬ ಆಘಾತ ಸುದ್ದಿ ಬರಸಿಡಿಲಂತೆ ಬಡಿಯಿತು” ಎಂದು ಮೃತನ ತಂದೆ ಅಳಲು ತೋಡಿಕೊಂಡಿದ್ದಾರೆ.

ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಹುಡುಗಿ ಸುನೀತಾ, ಆಕೆಯ ತಂದೆ ಮರಿಬಸಪ್ಪ, ತಾಯಿ ಲಲಿತಮ್ಮ, ಆಕೆಯ ಅಕ್ಕನ ಗಂಡ ಹುಲುಗಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಸಹಕರಿಸಿದ ಸಂಶಯದಲ್ಲಿ ಗ್ರಾಮಸ್ಥರಾದ ಕೋರಪ್ಪ, ಯಮನಪ್ಪ ಮತ್ತು ನಿಂಗಪ್ಪ ಎಂಬುವವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಹೋರಾಟಕ್ಕೆ ಕರೆ

ದಲಿತ ಯುವಕನ ಕೊಲೆ ನಡೆದ ನಂತರ ಬರಗೂರು ಗ್ರಾಮದಲ್ಲಿ ಭಯಭೀತ ವಾತವಾರಣ ನಿರ್ಮಾಣವಾಗಿದೆ. ಇದು ಮರ್ಯಾದೆಹೀನ ಹತ್ಯೆಯಾಗಿದೆ. ಹಾಗಾಗಿ ಕೂಡಲೇ ಅಲ್ಲಿನ ದಲಿತರಿಗೆ ರಕ್ಷಣೆ ಒದಗಿಸಬೇಕು ಮತ್ತು ಗಲಭೆ ನಡೆಯದಂತೆ ತಡೆಯಲು ಶಾಂತಿ ಸಭೆ ನಡೆಸಬೇಕಿದೆ. ಕ್ಷೇತ್ರದ ಶಾಸಕರಾದ ದಲಿತ ಸಮುದಾಯದ ಬಸವರಾಜ್ ದಡೆಸಗೂರುರವರು ಗ್ರಾಮಕ್ಕೆ ತೆರಳಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಬೇಕು ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ಒತ್ತಾಯಿಸಿದ್ದಾರೆ.

ಗ್ರಾಮಕ್ಕೆ ಭೇಟಿ ಮಾತನಾಡಿರುವ ಅವರು, “ಜಿಲ್ಲೆಯಲ್ಲಿ ಪದೇ ಪದೇ ಜಾತಿ ದೌರ್ಜನ್ಯದ ಘಟನೆಗಳು ವರದಿಯಾಗುತ್ತಿದ್ದರೂ ಜಿಲ್ಲಾಡಳಿತವಾಗಲಿ, ಸಮಾಜ ಕಲ್ಯಾಣ ಇಲಾಖೆಯಾಗಲಿ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಸರ್ಕಾರ ರಾಜ್ಯದಲ್ಲಿ ನಡೆಯುವ ದಲಿತರು ಮತ್ತು ಶೋಷಿತರ ಮೇಲಿನ ಕೊಲೆ, ಶೋಷಣೆ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಘಟನೆ ನಡೆದ ನಂತರದ ಕ್ರಮಗಳಿಗಿಂತ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರಿಯಪ್ಪ ಗುಡಿಮನಿಯವರು, “ಕಕ್ಕರಗೋಳ ಗ್ರಾಮದ ದಲಿತ ಯುವಕ ರಾಘವೇಂದ್ರನ ಬರ್ಬರ ಕೊಲೆ ನಡೆದು ಒಂದು ವರ್ಷವಾಗಿದೆ. ಇತ್ತೀಚೆಗೆ ಜಿಲ್ಲೆಯ ಹೊಸಳ್ಳಿಯಲ್ಲಿ ದಲಿತರಿಗೆ ಕ್ಷೌರ ಮಾಡದೆ ಹಲ್ಲೆ ನಡೆಸಿದ್ದಕ್ಕೆ ಅವರು ನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಇಂತಹ ಹತ್ತಾರು ಘಟನೆಗಳು ನಡೆಯುತ್ತಲೇ ಇವೆ. ಹಾಗಾಗಿ ಸರ್ಕಾರವೇ ಈ ಜಾತಿ ದೌರ್ಜನ್ಯ ಕೊನೆಗೊಳಿಸಲು ಯತ್ನಿಸಬೇಕು. ಪ್ರತಿ ಗ್ರಾಮದಲ್ಲಿ ಸವಿತಾ ಸಮಾಜದ ನಿರುದ್ಯೋಗಿ ಯುವಕರಿಗೆ ಕಟಿಂಗ್-ಶೇವಿಂಗ್ ಅಂಗಡಿಯಿಟ್ಟುಕೊಟ್ಟು ಎಲ್ಲಾ ಜಾತಿಯವರಿಗೆ ಕ್ಷೌರ ಮಾಡುವಂತೆ ಮಾಡಬೇಕು. ಆ ಮೂಲಕ ಶಾಂತಿ -ಸಾಮರಸ್ಯ ಕಾಪಾಡಬೇಕು. ಪ್ರಸ್ತುತ ಪ್ರಕರಣದಲ್ಲಿ ಮೃತ ದಾನಪ್ಪನ ಕುಟುಂಬಕ್ಕೆ ಸೂಕ್ತ ಪರಿಹಾರ, ಭೂಮಿ ಮತ್ತು ಸರ್ಕಾರಿ ಹುದ್ದೆ ಕೊಡಬೇಕು” ಎಂದರು.

ಈ ಕ್ರಮಗಳಿಗೆ ಜಿಲ್ಲಾಡಳಿತ, ಶಾಸಕರು ಮತ್ತು ಸಮಾಜ ಕಲ್ಯಾಣ ಇಲಾಖೆ ಮುಂದಾಗಬೇಕು. ಪೊಲೀಸರು ಉಳಿದ ಆರೋಪಿಗಳನ್ನು ಬಂಧಿಸಿ ಸಮರ್ಪಕ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗುವಂತೆ ಮಾಡಬೇಕು. ಆ ಮೂಲಕ ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಶಕ್ತಿಯ ವತಿಯಿಂದ ತೀವ್ರ ಹೋರಟ ಹಮ್ಮಿಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...