Homeಚಳವಳಿಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಜಿಲ್ಲೆಯಲ್ಲಿ ಪದೇ ಪದೇ ಜಾತಿ ದೌರ್ಜನ್ಯದ ಘಟನೆಗಳು ವರದಿಯಾಗುತ್ತಿದ್ದರೂ ಜಿಲ್ಲಾಡಳಿತವಾಗಲಿ, ಸಮಾಜ ಕಲ್ಯಾಣ ಇಲಾಖೆಯಾಗಲಿ ಯಾವುದೇ ಮುಂಜಾಗ್ರತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೋರಾಟಗಾರ ಕರಿಯಪ್ಪ ಗುಡಿಮನಿಯವರು ಕಿಡಿಕಾರಿದ್ದಾರೆ.

- Advertisement -
- Advertisement -

ಒಂದೆಡೆ ಜಾತಿಯೆಂಬುದಿಲ್ಲ, ಮೀಸಲಾತಿ ತೆಗೆಯಬೇಕು ಇತ್ಯಾದಿ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಜಾತಿ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಸಾಂಕ್ರಾಮಿಕ ಕಾಲದಲ್ಲಿಯೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಲೇ ಇವೆ. ಪದೇ ಪದೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ವರದಿಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ಅಮಾನುಷ ಘಟನೆ ವರದಿಯಾಗಿದ್ದು, ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೂನ್ 22 ರಾತ್ರಿ ಜರುಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ಕುರುಬ ಸಮುದಾಯದ ಯುವತಿಯನ್ನು ಪ್ರೀತಿಸಿದ ಕಾರಣಕ್ಕಾಗಿ ದಲಿತ (ಮಾದಿಗ) ಸಮುದಾಯದ ದಾನಪ್ಪ (23) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಾಗಿದ್ದು ನಾಲ್ಕು ಜನರನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಬರಗೂರು ಗ್ರಾಮದ ಕುರುಬ ಸಮುದಾಯದ ಮರಿಬಸಪ್ಪನವರ ಎರಡನೇ ಮಗಳಾದ ಸುನೀತಾ (20) ಮತ್ತು ಮಾದಿಗ ಸಮುದಾಯದ ಕರಿ ಹನುಮಂತಪ್ಪನವರ ಎರಡನೇ ಮಗ ದಾನಪ್ಪ (23) ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಪೋಷಕರಿಗೆ ತಿಳಿದು ಹುಡುಗಿಯ ತಂದೆ ಮರಿಬಸಪ್ಪ ಈ ಹಿಂದೆಯೇ ಹುಡುಗ ದಾನಪ್ಪನನ್ನು ಕರೆದು ಜಾತಿನಿಂದನೆ ಮಾಡಿದ್ದಲ್ಲದೆ, ಹಲ್ಲೆ ನಡೆಸಿ ಹುಡುಗಿಯ ತಂಟೆಗೆ ಬರಬಾರದೆಂದು ತಾಕೀತು ಮಾಡಿದ್ದರು ಎಂದು ಹುಡುಗನ ತಂದೆ ಕರಿ ಹನುಮಂತಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಮುಂದಿನ ವಾರ ಹುಡುಗಿಯ ಮದುವೆ ನಿಗಧಿಯಾಗಿದ್ದು, ಹಾಗಿದ್ದರೂ ಆಕೆ ದಾನಪ್ಪನೊಡನೆ ಮಾತನಾಡುತ್ತಿದ್ದಳು ಎಂದು ಆಕೆಯ ತಂದೆ ಮರಿಬಸಪ್ಪ ಜೂನ್ 22 ರ ರಾತ್ರಿ ಮಾತನಾಡುವುದಾಗಿ ದಾನಪ್ಪನನ್ನು ಕರೆಸಿಕೊಂಡಿದ್ದಾರೆ. ತದನಂತರ ಆತನನ್ನು ಬೆದರಿಸಿ, ಹೊಲದಲ್ಲೆಲ್ಲ ಅಟ್ಟಾಡಿಸಿಕೊಂಡು ತೀವ್ರ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ಕರಿ ಹನುಮಂತಪ್ಪ ತಿಳಿಸಿದ್ದಾರೆ.

“22 ರ ರಾತ್ರಿ ಮನೆಯಿಂದ ಹೊರಹೋದ ಮಗ ವಾಪಸ್ ಬರುತ್ತಾನೆಂದು ರಾತ್ರಿ 12 ಗಂಟೆವರೆಗೆ ಕಾದೆವು. ಅವನು ಬಾರದಿದ್ದಾಗ ರಾತ್ರಿಯೆಲ್ಲ ಹುಡುಕಿದರೂ ಆತ ಸಿಗಲೇ ಇಲ್ಲ, ಬೆಳಿಗ್ಗೆ ಎದ್ದ ಕೂಡಲೇ ಮಗದ ಶವ ಆತ ಕೆಲಸ ಮಾಡುವ ಮರಿಸ್ವಾಮಿಯೆಂಬುವವರ ಹೊಲದಲ್ಲಿ ಪತ್ತೆಯಾಗಿದೆ ಎಂಬ ಆಘಾತ ಸುದ್ದಿ ಬರಸಿಡಿಲಂತೆ ಬಡಿಯಿತು” ಎಂದು ಮೃತನ ತಂದೆ ಅಳಲು ತೋಡಿಕೊಂಡಿದ್ದಾರೆ.

ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಹುಡುಗಿ ಸುನೀತಾ, ಆಕೆಯ ತಂದೆ ಮರಿಬಸಪ್ಪ, ತಾಯಿ ಲಲಿತಮ್ಮ, ಆಕೆಯ ಅಕ್ಕನ ಗಂಡ ಹುಲುಗಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಸಹಕರಿಸಿದ ಸಂಶಯದಲ್ಲಿ ಗ್ರಾಮಸ್ಥರಾದ ಕೋರಪ್ಪ, ಯಮನಪ್ಪ ಮತ್ತು ನಿಂಗಪ್ಪ ಎಂಬುವವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಹೋರಾಟಕ್ಕೆ ಕರೆ

ದಲಿತ ಯುವಕನ ಕೊಲೆ ನಡೆದ ನಂತರ ಬರಗೂರು ಗ್ರಾಮದಲ್ಲಿ ಭಯಭೀತ ವಾತವಾರಣ ನಿರ್ಮಾಣವಾಗಿದೆ. ಇದು ಮರ್ಯಾದೆಹೀನ ಹತ್ಯೆಯಾಗಿದೆ. ಹಾಗಾಗಿ ಕೂಡಲೇ ಅಲ್ಲಿನ ದಲಿತರಿಗೆ ರಕ್ಷಣೆ ಒದಗಿಸಬೇಕು ಮತ್ತು ಗಲಭೆ ನಡೆಯದಂತೆ ತಡೆಯಲು ಶಾಂತಿ ಸಭೆ ನಡೆಸಬೇಕಿದೆ. ಕ್ಷೇತ್ರದ ಶಾಸಕರಾದ ದಲಿತ ಸಮುದಾಯದ ಬಸವರಾಜ್ ದಡೆಸಗೂರುರವರು ಗ್ರಾಮಕ್ಕೆ ತೆರಳಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಬೇಕು ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ಒತ್ತಾಯಿಸಿದ್ದಾರೆ.

ಗ್ರಾಮಕ್ಕೆ ಭೇಟಿ ಮಾತನಾಡಿರುವ ಅವರು, “ಜಿಲ್ಲೆಯಲ್ಲಿ ಪದೇ ಪದೇ ಜಾತಿ ದೌರ್ಜನ್ಯದ ಘಟನೆಗಳು ವರದಿಯಾಗುತ್ತಿದ್ದರೂ ಜಿಲ್ಲಾಡಳಿತವಾಗಲಿ, ಸಮಾಜ ಕಲ್ಯಾಣ ಇಲಾಖೆಯಾಗಲಿ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಸರ್ಕಾರ ರಾಜ್ಯದಲ್ಲಿ ನಡೆಯುವ ದಲಿತರು ಮತ್ತು ಶೋಷಿತರ ಮೇಲಿನ ಕೊಲೆ, ಶೋಷಣೆ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಘಟನೆ ನಡೆದ ನಂತರದ ಕ್ರಮಗಳಿಗಿಂತ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರಿಯಪ್ಪ ಗುಡಿಮನಿಯವರು, “ಕಕ್ಕರಗೋಳ ಗ್ರಾಮದ ದಲಿತ ಯುವಕ ರಾಘವೇಂದ್ರನ ಬರ್ಬರ ಕೊಲೆ ನಡೆದು ಒಂದು ವರ್ಷವಾಗಿದೆ. ಇತ್ತೀಚೆಗೆ ಜಿಲ್ಲೆಯ ಹೊಸಳ್ಳಿಯಲ್ಲಿ ದಲಿತರಿಗೆ ಕ್ಷೌರ ಮಾಡದೆ ಹಲ್ಲೆ ನಡೆಸಿದ್ದಕ್ಕೆ ಅವರು ನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಇಂತಹ ಹತ್ತಾರು ಘಟನೆಗಳು ನಡೆಯುತ್ತಲೇ ಇವೆ. ಹಾಗಾಗಿ ಸರ್ಕಾರವೇ ಈ ಜಾತಿ ದೌರ್ಜನ್ಯ ಕೊನೆಗೊಳಿಸಲು ಯತ್ನಿಸಬೇಕು. ಪ್ರತಿ ಗ್ರಾಮದಲ್ಲಿ ಸವಿತಾ ಸಮಾಜದ ನಿರುದ್ಯೋಗಿ ಯುವಕರಿಗೆ ಕಟಿಂಗ್-ಶೇವಿಂಗ್ ಅಂಗಡಿಯಿಟ್ಟುಕೊಟ್ಟು ಎಲ್ಲಾ ಜಾತಿಯವರಿಗೆ ಕ್ಷೌರ ಮಾಡುವಂತೆ ಮಾಡಬೇಕು. ಆ ಮೂಲಕ ಶಾಂತಿ -ಸಾಮರಸ್ಯ ಕಾಪಾಡಬೇಕು. ಪ್ರಸ್ತುತ ಪ್ರಕರಣದಲ್ಲಿ ಮೃತ ದಾನಪ್ಪನ ಕುಟುಂಬಕ್ಕೆ ಸೂಕ್ತ ಪರಿಹಾರ, ಭೂಮಿ ಮತ್ತು ಸರ್ಕಾರಿ ಹುದ್ದೆ ಕೊಡಬೇಕು” ಎಂದರು.

ಈ ಕ್ರಮಗಳಿಗೆ ಜಿಲ್ಲಾಡಳಿತ, ಶಾಸಕರು ಮತ್ತು ಸಮಾಜ ಕಲ್ಯಾಣ ಇಲಾಖೆ ಮುಂದಾಗಬೇಕು. ಪೊಲೀಸರು ಉಳಿದ ಆರೋಪಿಗಳನ್ನು ಬಂಧಿಸಿ ಸಮರ್ಪಕ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗುವಂತೆ ಮಾಡಬೇಕು. ಆ ಮೂಲಕ ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಶಕ್ತಿಯ ವತಿಯಿಂದ ತೀವ್ರ ಹೋರಟ ಹಮ್ಮಿಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...