Homeಕರ್ನಾಟಕಕೊಪ್ಪಳ: ದಲಿತ ಯುವಕನಿಗೆ ದಂಡ ಹಾಕಿದ್ದ ಪ್ರಕರಣ ಬಯಲಿಗೆಳೆದ ವರದಿಗಾರನಿಗೆ ಜೀವಭಯ

ಕೊಪ್ಪಳ: ದಲಿತ ಯುವಕನಿಗೆ ದಂಡ ಹಾಕಿದ್ದ ಪ್ರಕರಣ ಬಯಲಿಗೆಳೆದ ವರದಿಗಾರನಿಗೆ ಜೀವಭಯ

- Advertisement -
- Advertisement -

ಕೊಪ್ಪಳದ ಕಾರಟಗಿ ತಾಲೂಕಿನ ನಾಗನಕಲ್ಲ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ದೇವಾಸ್ಥಾನ ಪ್ರವೇಶಿಸಿದಕ್ಕೆ ದಂಡ ಹಾಕಿದ್ದ ಪ್ರಕರಣವನ್ನು ಬಯಲಿಗೆಳೆದ ವರದಿಗಾರನಿಗೆ ಜೀವಭಯ ಇದ್ದು, ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ಸ್ಥಳೀಯ ಸುದ್ದಿವಾಹಿನಿ ಜಿಬಿ ನ್ಯೂಸ್ ವರದಿಗಾರ ಸುಂದರರಾಜ್, ತಮಗೆ ಜೀವ ಭಯ ಇದೆ ಎಂದು ರಕ್ಷಣೆ ನೀಡುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಸುದ್ದಿವಾಹಿನಿಯ ಸುದ್ದಿ ಸಂಪಾದಕರು ಮತ್ತು ದಲಿತ ಮುಖಂಡರ ಜೊತೆಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ದಲಿತ ಯುವಕ ದೇವಸ್ಥಾನಕ್ಕೆ ತೆರಳಿದ್ದಕ್ಕೆ ದೇವಸ್ಥಾನದ ಆಡಳಿತ ಮಂಡಳಿ 11 ಸಾವಿರ ರೂಪಾಯಿ ದಂಡ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇದನ್ನು ಸೆ.24 ರಂದು ಜಿಬಿ ನ್ಯೂಸ್ ವರದಿಗಾರ ಸುಂದರರಾಜ್ ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಸ್ಥಳೀಯರಿಂದ ದೂರವಾಣಿ ಕರೆ ಮೂಲಕ ಮಾಹಿತಿ ಪಡೆದಿದ್ದ ಸುಂದರರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳಿಯರನ್ನು ಮಾತಾಡಿಸಿ, ವಿವರಗಳನ್ನು ವಿಡಿಯೋ ಮೂಲಕ ದಾಖಲು ಮಾಡಿಕೊಂಡು ಈ ಬಗ್ಗೆ ಸುದ್ದಿ ಮಾಡಿದ್ದರು. ಇದರಿಂದ ಮುಖ್ಯವಾಹಿನಿಯ ಮಾಧ್ಯಮಗಳು ಗಮನ ಕೊಟ್ಟವು. ಇದರ ಜೊತೆಗೆ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಅಸ್ಪೃಶ್ಯತೆ ಆಚರಣೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡಿರುವ ಜಿಬಿ ನ್ಯೂಸ್ ವರದಿಗಾರ ಸುಂದರರಾಜ್, ’ನಾನು ನಾಗನಕಲ್ ಪ್ರಕರಣವನ್ನು ಹೊರಗೆಳೆದ ಬಳಿಕ, ಕಳೆದೆರಡು ದಿನಗಳಿಂದ ಅಪರಿಚಿತ ವಾಹನಗಳು ನನ್ನ ವಾಹನವನ್ನು ಹಿಂಬಾಲಿಸುತ್ತಿವೆ. ಹೀಗಾಗಿ ನಾನು ಆತಂಕಗೊಂಡು ಪೊಲೀಸರಿಗೆ ಮನವಿ ಸಲ್ಲಿಸಿದ್ದೇನೆ. ನನಗೆ ಯಾರು ಕರೆ ಮಾಡಿ ಅಥವಾ ಎದುರು ಬಂದು ಬೆದರಿಕೆ ಹಾಕಿಲ್ಲ. ಆದರೆ, ನಾನು ಓಡಾಡುವಾಗ ಬೈಕ್‌ನಲ್ಲಿ ಹಿಂಬಾಲಿಸಿದ ಅನುಭವ ಆಯಿತು. ಮುನ್ನೆಚ್ಚರಿಕೆಯಾಗಿ ನಾನು ದೂರು ನೀಡಿದ್ದೇನೆ” ಎಂದಿದ್ದಾರೆ.

ಇನ್ನು ವರದಿಗಾರನಿಗೆ ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಮಹಿಳಾ ಮುನ್ನಡೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಕೋಮು ಸೌಹಾರ್ದತೆ ವೇದಿಕೆ ಬೆಂಬಲ ನೀಡಿವೆ.

“ಸಾಮಾಜಿಕ ಅವ್ಯವಸ್ಥೆ ಬಗ್ಗೆ ವರದಿ ಮಾಡಿದ ಜಿಬಿ ನ್ಯೂಸ್ ಟೀಮ್‌ಗೆ ರಕ್ಷಣೆ ನೀಡುವುದು ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮೆಲ್ಲರ ಜವಾಬ್ದಾರಿ ಕೂಡ. ಪ್ರಾಮಾಣಿಕ ಮಾಧ್ಯಮ ಮಿತ್ರರ ಜೊತೆಗೆ ನಾವಿದ್ದೇವೆ” ಎಂದು
ಹೋರಾಟಗಾರ ಕರಿಯಪ್ಪ ಗುಡಿಮನಿ ಹೇಳಿದ್ದಾರೆ.

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ದೇವಸ್ಥಾನಕ್ಕೆ ಹೋಗಿ ತಾನೇ ಪೂಜೆ ಸಲ್ಲಿಸಿ ಬಂದಿದ್ದರಿಂದ ದೇವಸ್ಥಾನ ಮೈಲಿಯಾಗಿದೆ ಎಂದು ದೇವಾಲಯ ಆಡಳಿತ ಮಂಡಳಿಯ ಪ್ರಮುಖರು ಮೈಲಿಗೆ ನಿವಾರಣೆ, ಶುದ್ಧೀಕರಣ ಮತ್ತು ಪಶ್ಚಾತಾಪ ಸೇರಿ ಒಟ್ಟು 5 ಲಕ್ಷ ದಂಡ ಕಟ್ಟುವಂತೆ ಆದೇಶಿಸಿದ್ದರು ಎನ್ನಲಾಗಿದೆ. ದಂಡದ ಮೊತ್ತ ಹೆಚ್ಚಾಗಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದರಿಂದ ಕೊನೆಗೆ 11 ಸಾವಿರ ದಂಡ ಕಟ್ಟಿ ಇಡೀ ಪ್ರಕರಣವನ್ನು ಮುಚ್ಚಿ ಹಾಕಲಾಗಿತ್ತು ಎಂದು ವರದಿಯಾಗಿದೆ. ಈ ಸಂಬಂಧ ದೇವಸ್ಥಾನದ ಪೂಜಾರಿ ಸೇರಿದಂತೆ ಆಡಳಿತ ಮಂಡಳಿಯ ಒಟ್ಟು 8 ಜನರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...