Homeಕರ್ನಾಟಕಕೊಪ್ಪಳ: ದಲಿತ ಯುವಕನಿಗೆ ದಂಡ ಹಾಕಿದ್ದ ಪ್ರಕರಣ ಬಯಲಿಗೆಳೆದ ವರದಿಗಾರನಿಗೆ ಜೀವಭಯ

ಕೊಪ್ಪಳ: ದಲಿತ ಯುವಕನಿಗೆ ದಂಡ ಹಾಕಿದ್ದ ಪ್ರಕರಣ ಬಯಲಿಗೆಳೆದ ವರದಿಗಾರನಿಗೆ ಜೀವಭಯ

- Advertisement -
- Advertisement -

ಕೊಪ್ಪಳದ ಕಾರಟಗಿ ತಾಲೂಕಿನ ನಾಗನಕಲ್ಲ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ದೇವಾಸ್ಥಾನ ಪ್ರವೇಶಿಸಿದಕ್ಕೆ ದಂಡ ಹಾಕಿದ್ದ ಪ್ರಕರಣವನ್ನು ಬಯಲಿಗೆಳೆದ ವರದಿಗಾರನಿಗೆ ಜೀವಭಯ ಇದ್ದು, ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ಸ್ಥಳೀಯ ಸುದ್ದಿವಾಹಿನಿ ಜಿಬಿ ನ್ಯೂಸ್ ವರದಿಗಾರ ಸುಂದರರಾಜ್, ತಮಗೆ ಜೀವ ಭಯ ಇದೆ ಎಂದು ರಕ್ಷಣೆ ನೀಡುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಸುದ್ದಿವಾಹಿನಿಯ ಸುದ್ದಿ ಸಂಪಾದಕರು ಮತ್ತು ದಲಿತ ಮುಖಂಡರ ಜೊತೆಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ದಲಿತ ಯುವಕ ದೇವಸ್ಥಾನಕ್ಕೆ ತೆರಳಿದ್ದಕ್ಕೆ ದೇವಸ್ಥಾನದ ಆಡಳಿತ ಮಂಡಳಿ 11 ಸಾವಿರ ರೂಪಾಯಿ ದಂಡ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇದನ್ನು ಸೆ.24 ರಂದು ಜಿಬಿ ನ್ಯೂಸ್ ವರದಿಗಾರ ಸುಂದರರಾಜ್ ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಸ್ಥಳೀಯರಿಂದ ದೂರವಾಣಿ ಕರೆ ಮೂಲಕ ಮಾಹಿತಿ ಪಡೆದಿದ್ದ ಸುಂದರರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳಿಯರನ್ನು ಮಾತಾಡಿಸಿ, ವಿವರಗಳನ್ನು ವಿಡಿಯೋ ಮೂಲಕ ದಾಖಲು ಮಾಡಿಕೊಂಡು ಈ ಬಗ್ಗೆ ಸುದ್ದಿ ಮಾಡಿದ್ದರು. ಇದರಿಂದ ಮುಖ್ಯವಾಹಿನಿಯ ಮಾಧ್ಯಮಗಳು ಗಮನ ಕೊಟ್ಟವು. ಇದರ ಜೊತೆಗೆ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಅಸ್ಪೃಶ್ಯತೆ ಆಚರಣೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡಿರುವ ಜಿಬಿ ನ್ಯೂಸ್ ವರದಿಗಾರ ಸುಂದರರಾಜ್, ’ನಾನು ನಾಗನಕಲ್ ಪ್ರಕರಣವನ್ನು ಹೊರಗೆಳೆದ ಬಳಿಕ, ಕಳೆದೆರಡು ದಿನಗಳಿಂದ ಅಪರಿಚಿತ ವಾಹನಗಳು ನನ್ನ ವಾಹನವನ್ನು ಹಿಂಬಾಲಿಸುತ್ತಿವೆ. ಹೀಗಾಗಿ ನಾನು ಆತಂಕಗೊಂಡು ಪೊಲೀಸರಿಗೆ ಮನವಿ ಸಲ್ಲಿಸಿದ್ದೇನೆ. ನನಗೆ ಯಾರು ಕರೆ ಮಾಡಿ ಅಥವಾ ಎದುರು ಬಂದು ಬೆದರಿಕೆ ಹಾಕಿಲ್ಲ. ಆದರೆ, ನಾನು ಓಡಾಡುವಾಗ ಬೈಕ್‌ನಲ್ಲಿ ಹಿಂಬಾಲಿಸಿದ ಅನುಭವ ಆಯಿತು. ಮುನ್ನೆಚ್ಚರಿಕೆಯಾಗಿ ನಾನು ದೂರು ನೀಡಿದ್ದೇನೆ” ಎಂದಿದ್ದಾರೆ.

ಇನ್ನು ವರದಿಗಾರನಿಗೆ ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಮಹಿಳಾ ಮುನ್ನಡೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಕೋಮು ಸೌಹಾರ್ದತೆ ವೇದಿಕೆ ಬೆಂಬಲ ನೀಡಿವೆ.

“ಸಾಮಾಜಿಕ ಅವ್ಯವಸ್ಥೆ ಬಗ್ಗೆ ವರದಿ ಮಾಡಿದ ಜಿಬಿ ನ್ಯೂಸ್ ಟೀಮ್‌ಗೆ ರಕ್ಷಣೆ ನೀಡುವುದು ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮೆಲ್ಲರ ಜವಾಬ್ದಾರಿ ಕೂಡ. ಪ್ರಾಮಾಣಿಕ ಮಾಧ್ಯಮ ಮಿತ್ರರ ಜೊತೆಗೆ ನಾವಿದ್ದೇವೆ” ಎಂದು
ಹೋರಾಟಗಾರ ಕರಿಯಪ್ಪ ಗುಡಿಮನಿ ಹೇಳಿದ್ದಾರೆ.

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ದೇವಸ್ಥಾನಕ್ಕೆ ಹೋಗಿ ತಾನೇ ಪೂಜೆ ಸಲ್ಲಿಸಿ ಬಂದಿದ್ದರಿಂದ ದೇವಸ್ಥಾನ ಮೈಲಿಯಾಗಿದೆ ಎಂದು ದೇವಾಲಯ ಆಡಳಿತ ಮಂಡಳಿಯ ಪ್ರಮುಖರು ಮೈಲಿಗೆ ನಿವಾರಣೆ, ಶುದ್ಧೀಕರಣ ಮತ್ತು ಪಶ್ಚಾತಾಪ ಸೇರಿ ಒಟ್ಟು 5 ಲಕ್ಷ ದಂಡ ಕಟ್ಟುವಂತೆ ಆದೇಶಿಸಿದ್ದರು ಎನ್ನಲಾಗಿದೆ. ದಂಡದ ಮೊತ್ತ ಹೆಚ್ಚಾಗಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದರಿಂದ ಕೊನೆಗೆ 11 ಸಾವಿರ ದಂಡ ಕಟ್ಟಿ ಇಡೀ ಪ್ರಕರಣವನ್ನು ಮುಚ್ಚಿ ಹಾಕಲಾಗಿತ್ತು ಎಂದು ವರದಿಯಾಗಿದೆ. ಈ ಸಂಬಂಧ ದೇವಸ್ಥಾನದ ಪೂಜಾರಿ ಸೇರಿದಂತೆ ಆಡಳಿತ ಮಂಡಳಿಯ ಒಟ್ಟು 8 ಜನರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...