Homeಕರ್ನಾಟಕಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

ಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

"ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು"

- Advertisement -
- Advertisement -

ಕೊರಗ ತನಿಯನಿಗೆ ಸಂಬಂಧಿಸದೆ ಇರುವ ವೇಷವನ್ನು ಕೊರಗ ತನಿಯನ ವೇಷವೆಂದು ಬಣ್ಣಿಸಿ ಜನರ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಪದೇ ಪದೇ ಕೊರಗಜ್ಜ ಮತ್ತು ಕೊರಗ ಸಮುದಾಯವನ್ನು ಅಪಮಾನ ಮಾಡಲಾಗುತ್ತಿದೆ ಎಂದು ಕೊರಗ ಸಮುದಾಯದ ಮುಖಂಡ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರಾವಳಿ ಜಿಲ್ಲೆಗಳ ಮೂಲನಿವಾಸಿಗಳಾದ ಕೊರಗ ಸಮುದಾಯ ಮತ್ತು ನಮ್ಮ ಗುರಿಕಾರ ಕೊರಗ ತನಿಯನ ಮೇಲೆ ಇತ್ತೀಚೆಗೆ ಪ್ರೀತಿ, ಅಭಿಮಾನ ಉಕ್ಕಿಹರಿದಂತೆ ಕಾಣುತ್ತಿದೆ. ಕೊರಗ ಸಮುದಾಯದ ನಾವು ಹೇಳುತ್ತೇವೆ- ಕೊರಗ ತನಿಯ ದೇವರು ಅಲ್ಲಾ, ದೈವವು ಅಲ್ಲಾ, ನಮ್ಮ ಸಮುದಾಯದ ಒಬ್ಬ ಗುರಿಕಾರ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಮಡಿವಂತಿಕೆಯ ಮೋಸ ಕುತಂತ್ರಕ್ಕೆ ಬಲ್ಲಿಯಾದ ಕೊರಗ ತನಿಯನು ಸಾಮಾಜಿಕ ನ್ಯಾಯದ ಪ್ರತೀಕ. ಹುಭಾಶಿಕನ್ನು ನೇರವಾಗಿ ಎದುರಿಸಲು ಸಾಧ್ಯವಾಗದೆ ಮೋಸದಿಂದ ಸಾಯಿಸಿ ಇಡೀ ಸಮುದಾಯವನ್ನು ನಿರ್ಗತಿಕ ಪರಿಸ್ಥಿತಿಗೆ ದೂಡಿದಿರಿ. ಹಾಗೆಯೇ ಕೊರಗ ತನಿಯನ ಬದುಕು ಸಹ ದುರಂತ ಕಥೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ಪಾಡ್ದಾನದ ಪ್ರಕಾರ ಮೈರಕ್ಕನ ಆಶ್ರಮದಲ್ಲಿ ಬೆಳೆದ ತನಿಯ ದೊಡ್ಡವನಾದ ಬಳಿಕ ಎಣಸೂರು ಬಾಳಿಕೆಯ ರಾಜ ದೈವಗಳ ನೇಮಕ್ಕೆ ತೆಂಗಿನ ಎಳೆ ಗರಿ, ಸೀಯಾಳ, ಬಾಳೆದಿಂಡು, ಸಿಂಗಾರ ಇತ್ಯಾದಿ ಹೊರೆಯನ್ನು ಹೊರಲು ಏಳು ಮಂದಿ ಕೆಲಸದವರು ಬರದೆ ಇದ್ದಾಗ ತನಿಯ ಒಬ್ಬನೇ ತಂದು ಕೊಡುತ್ತಾನೆ. ಆದರೆ ಕಾಡು ಕೊರಗ ಎನ್ನುವ ಕಾರಣಕ್ಕೆ ಅವನನ್ನು ದೇವಸ್ಥಾನದ ಒಳಗೆ ಬರಲು ನಿರಾಕರಿಸಲಾಗಿದೆ. ಇದನ್ನು ತನಿಯ ಪ್ರತಿಭಟಿಸುತ್ತಾನೆ. ತಾನು ತಂದ ವಸ್ತುಗಳು ಆಗುತ್ತದೆ, ಆದರೆ ನಾನು ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾನೆ. ಅಲ್ಲೇ ಪಕ್ಕದಲ್ಲಿ ಇರುವ ಮರದಿಂದ ತನ್ನ ಹೆಂಡತಿಗೆ ಮಾಪಲ ಹಣ್ಣು ಕೊಯ್ದು ತರುತ್ತಾನೆ. ಆಗ ಅಲ್ಲಿನ ಮೈಸಂದಾ ಮತ್ತು ಕೊಡಂಗೆನಾರ್ ದೈವಗಳ ಕೆಂಗಣ್ಣಿಗೆ ಗುರಿಯಾಗಿ ಮಾಯವಾದನು. ಈಗಲೂ ಆ ದೈವಗಳು ಶ್ರೇಣೀಕಣದಲ್ಲಿ ಕೊರಗ ತನಿಯನಿಗಿಂತ ಮೇಲಿವೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಇನ್ನೊಂದು ಪಾಡ್ದಾನದಲ್ಲಿ ದೇವಸ್ಥಾನದ ಪ್ರಾಂಗಣದಲ್ಲಿ ಇರುವ ಮಾಫಲ ಹುಳಿ ಕೊಯ್ಯಲು ಹೋಗುವಾಗ ಆತನನ್ನು ಬ್ರಾಹ್ಮಣರು ಕಡಿದು ಕೊಲ್ಲುತ್ತಾರೆ. ಕೊರಗ ತನಿಯ ಯಾವತ್ತೂ ಹಿಂದೂ ಧರ್ಮದ ಸಂಕೇತವಲ್ಲ. ಆತ ಕರಾವಳಿ ಜಿಲ್ಲೆಗಳ ಕೊರಗ ಸಮುದಾಯ ಮತ್ತು ಆದಿಮ ಸಂಸ್ಕೃತಿಯ ಪ್ರತೀಕ. ಕೊರಗ ತನಿಯನ ಕುರಿತು ಮಾತನಾಡುವ ಮೊದಲು ನಿಮ್ಮವರು ಹಾಗೂ ನೀವು ಮಾಡಿದ, ಮಾಡುತ್ತಿರುವ ಮಹಾ ಮೋಸಗಳ ಬಗ್ಗೆ ಒಮ್ಮೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿಂದೂ ಇರಲಿ ಮುಸ್ಲಿಂ ಇರಲಿ ಮದುವೆ, ಜಾತ್ರೆ, ತಂಬಿಲದಲ್ಲಿ ನಮ್ಮ ಗುರಿಕಾರ ಕೊರಗ ತನಿಯನ ವೇಷ ಹಾಕಲು ನಿಮಗೆ ಒಪ್ಪಿಗೆ ಕೊಟ್ಟವರು ಯಾರು? ಕೊರಗರ ವೇಷದಲ್ಲಿ ಕೊರಗ ಸಮುದಾಯದ ಘನತೆ ಗೌರವದ ಬದುಕಿಗೆ ಅವಮಾನ ಮಾಡಿ ಪದ ಪ್ರಯೋಗ ಮಾಡುವುದು ಎಷ್ಟು ಸರಿ? ಯಕ್ಷಗಾನದಲ್ಲಿ ಬ್ರಾಹ್ಮಣ ವೇಷ, ಮುಸ್ಲಿಂ ವೇಷ ಹಾಕಿದಕ್ಕೆ ತಾವೇಲ್ಲರೂ ಬಹಳ ಪ್ರತಿಕ್ರಿಯೆ ನೀಡುವವರು, ವಿರೋಧಿಸುವವರು, ಕೊರಗರ ವೇಷ ಹಾಕಿ ನಮ್ಮನ್ನು ಹೀಯಾಳಿಸುವಿರಲ್ಲ ಆಗ ನಿಮ್ಮ ಹಿಂದೂ ಧರ್ಮದಲ್ಲಿ ಮತ್ತು ಈ ಪ್ರಜಾಪ್ರಭುತ್ವದ ನ್ಯಾಯಯುತ ಸಮಾಜದಲ್ಲಿ ಕೊರಗರು ಇರುವುದಿಲ್ಲವೇ? ಎಂದು ಶ್ರೀಧರ್‌ ನಾಡಾ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ವಿನಾಶದಂಚಿಗೆ ಬಂದಿರುವ ಕೊರಗ ಸಮುದಾಯದ ಉಳಿಯುವಿಗೆ ನಿಮ್ಮ ಕೊಡುಗೆ ಏನು ತಿಳಿಸಿ. ಕೊರಗ ತನಿಯ ಮತ್ತು ಕೊರಗ ಸಮುದಾಯವನ್ನು ರಾಜಕೀಯಕ್ಕೆ ಬಳಸಿ ಅಪಮಾನ ಮಾಡಿರುವುದನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡಿಸುತ್ತದೆ. ಹಾಗೆ ಎಲ್ಲರೂ ಸಾಲೆತ್ತೂರಿನ ಕೊರಗಜ್ಜ ವೇಷದ ವಿವಾದಕ್ಕೆ ಸಂಬಂಧಿಸಿದಂತೆ ದ್ವೇಷ ಹರಡಲು ಮಾಡಿರುವ ಹುನ್ನಾರಗಳನ್ನು ವಿಫಲಗೊಳಿಸಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಅವರು ಕೋರಿದ್ದಾರೆ.


ಇದನ್ನೂ ಓದಿರಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...