Homeಕರ್ನಾಟಕಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

ಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

"ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು"

- Advertisement -
- Advertisement -

ಕೊರಗ ತನಿಯನಿಗೆ ಸಂಬಂಧಿಸದೆ ಇರುವ ವೇಷವನ್ನು ಕೊರಗ ತನಿಯನ ವೇಷವೆಂದು ಬಣ್ಣಿಸಿ ಜನರ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಪದೇ ಪದೇ ಕೊರಗಜ್ಜ ಮತ್ತು ಕೊರಗ ಸಮುದಾಯವನ್ನು ಅಪಮಾನ ಮಾಡಲಾಗುತ್ತಿದೆ ಎಂದು ಕೊರಗ ಸಮುದಾಯದ ಮುಖಂಡ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರಾವಳಿ ಜಿಲ್ಲೆಗಳ ಮೂಲನಿವಾಸಿಗಳಾದ ಕೊರಗ ಸಮುದಾಯ ಮತ್ತು ನಮ್ಮ ಗುರಿಕಾರ ಕೊರಗ ತನಿಯನ ಮೇಲೆ ಇತ್ತೀಚೆಗೆ ಪ್ರೀತಿ, ಅಭಿಮಾನ ಉಕ್ಕಿಹರಿದಂತೆ ಕಾಣುತ್ತಿದೆ. ಕೊರಗ ಸಮುದಾಯದ ನಾವು ಹೇಳುತ್ತೇವೆ- ಕೊರಗ ತನಿಯ ದೇವರು ಅಲ್ಲಾ, ದೈವವು ಅಲ್ಲಾ, ನಮ್ಮ ಸಮುದಾಯದ ಒಬ್ಬ ಗುರಿಕಾರ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಮಡಿವಂತಿಕೆಯ ಮೋಸ ಕುತಂತ್ರಕ್ಕೆ ಬಲ್ಲಿಯಾದ ಕೊರಗ ತನಿಯನು ಸಾಮಾಜಿಕ ನ್ಯಾಯದ ಪ್ರತೀಕ. ಹುಭಾಶಿಕನ್ನು ನೇರವಾಗಿ ಎದುರಿಸಲು ಸಾಧ್ಯವಾಗದೆ ಮೋಸದಿಂದ ಸಾಯಿಸಿ ಇಡೀ ಸಮುದಾಯವನ್ನು ನಿರ್ಗತಿಕ ಪರಿಸ್ಥಿತಿಗೆ ದೂಡಿದಿರಿ. ಹಾಗೆಯೇ ಕೊರಗ ತನಿಯನ ಬದುಕು ಸಹ ದುರಂತ ಕಥೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ಪಾಡ್ದಾನದ ಪ್ರಕಾರ ಮೈರಕ್ಕನ ಆಶ್ರಮದಲ್ಲಿ ಬೆಳೆದ ತನಿಯ ದೊಡ್ಡವನಾದ ಬಳಿಕ ಎಣಸೂರು ಬಾಳಿಕೆಯ ರಾಜ ದೈವಗಳ ನೇಮಕ್ಕೆ ತೆಂಗಿನ ಎಳೆ ಗರಿ, ಸೀಯಾಳ, ಬಾಳೆದಿಂಡು, ಸಿಂಗಾರ ಇತ್ಯಾದಿ ಹೊರೆಯನ್ನು ಹೊರಲು ಏಳು ಮಂದಿ ಕೆಲಸದವರು ಬರದೆ ಇದ್ದಾಗ ತನಿಯ ಒಬ್ಬನೇ ತಂದು ಕೊಡುತ್ತಾನೆ. ಆದರೆ ಕಾಡು ಕೊರಗ ಎನ್ನುವ ಕಾರಣಕ್ಕೆ ಅವನನ್ನು ದೇವಸ್ಥಾನದ ಒಳಗೆ ಬರಲು ನಿರಾಕರಿಸಲಾಗಿದೆ. ಇದನ್ನು ತನಿಯ ಪ್ರತಿಭಟಿಸುತ್ತಾನೆ. ತಾನು ತಂದ ವಸ್ತುಗಳು ಆಗುತ್ತದೆ, ಆದರೆ ನಾನು ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾನೆ. ಅಲ್ಲೇ ಪಕ್ಕದಲ್ಲಿ ಇರುವ ಮರದಿಂದ ತನ್ನ ಹೆಂಡತಿಗೆ ಮಾಪಲ ಹಣ್ಣು ಕೊಯ್ದು ತರುತ್ತಾನೆ. ಆಗ ಅಲ್ಲಿನ ಮೈಸಂದಾ ಮತ್ತು ಕೊಡಂಗೆನಾರ್ ದೈವಗಳ ಕೆಂಗಣ್ಣಿಗೆ ಗುರಿಯಾಗಿ ಮಾಯವಾದನು. ಈಗಲೂ ಆ ದೈವಗಳು ಶ್ರೇಣೀಕಣದಲ್ಲಿ ಕೊರಗ ತನಿಯನಿಗಿಂತ ಮೇಲಿವೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಇನ್ನೊಂದು ಪಾಡ್ದಾನದಲ್ಲಿ ದೇವಸ್ಥಾನದ ಪ್ರಾಂಗಣದಲ್ಲಿ ಇರುವ ಮಾಫಲ ಹುಳಿ ಕೊಯ್ಯಲು ಹೋಗುವಾಗ ಆತನನ್ನು ಬ್ರಾಹ್ಮಣರು ಕಡಿದು ಕೊಲ್ಲುತ್ತಾರೆ. ಕೊರಗ ತನಿಯ ಯಾವತ್ತೂ ಹಿಂದೂ ಧರ್ಮದ ಸಂಕೇತವಲ್ಲ. ಆತ ಕರಾವಳಿ ಜಿಲ್ಲೆಗಳ ಕೊರಗ ಸಮುದಾಯ ಮತ್ತು ಆದಿಮ ಸಂಸ್ಕೃತಿಯ ಪ್ರತೀಕ. ಕೊರಗ ತನಿಯನ ಕುರಿತು ಮಾತನಾಡುವ ಮೊದಲು ನಿಮ್ಮವರು ಹಾಗೂ ನೀವು ಮಾಡಿದ, ಮಾಡುತ್ತಿರುವ ಮಹಾ ಮೋಸಗಳ ಬಗ್ಗೆ ಒಮ್ಮೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿಂದೂ ಇರಲಿ ಮುಸ್ಲಿಂ ಇರಲಿ ಮದುವೆ, ಜಾತ್ರೆ, ತಂಬಿಲದಲ್ಲಿ ನಮ್ಮ ಗುರಿಕಾರ ಕೊರಗ ತನಿಯನ ವೇಷ ಹಾಕಲು ನಿಮಗೆ ಒಪ್ಪಿಗೆ ಕೊಟ್ಟವರು ಯಾರು? ಕೊರಗರ ವೇಷದಲ್ಲಿ ಕೊರಗ ಸಮುದಾಯದ ಘನತೆ ಗೌರವದ ಬದುಕಿಗೆ ಅವಮಾನ ಮಾಡಿ ಪದ ಪ್ರಯೋಗ ಮಾಡುವುದು ಎಷ್ಟು ಸರಿ? ಯಕ್ಷಗಾನದಲ್ಲಿ ಬ್ರಾಹ್ಮಣ ವೇಷ, ಮುಸ್ಲಿಂ ವೇಷ ಹಾಕಿದಕ್ಕೆ ತಾವೇಲ್ಲರೂ ಬಹಳ ಪ್ರತಿಕ್ರಿಯೆ ನೀಡುವವರು, ವಿರೋಧಿಸುವವರು, ಕೊರಗರ ವೇಷ ಹಾಕಿ ನಮ್ಮನ್ನು ಹೀಯಾಳಿಸುವಿರಲ್ಲ ಆಗ ನಿಮ್ಮ ಹಿಂದೂ ಧರ್ಮದಲ್ಲಿ ಮತ್ತು ಈ ಪ್ರಜಾಪ್ರಭುತ್ವದ ನ್ಯಾಯಯುತ ಸಮಾಜದಲ್ಲಿ ಕೊರಗರು ಇರುವುದಿಲ್ಲವೇ? ಎಂದು ಶ್ರೀಧರ್‌ ನಾಡಾ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ವಿನಾಶದಂಚಿಗೆ ಬಂದಿರುವ ಕೊರಗ ಸಮುದಾಯದ ಉಳಿಯುವಿಗೆ ನಿಮ್ಮ ಕೊಡುಗೆ ಏನು ತಿಳಿಸಿ. ಕೊರಗ ತನಿಯ ಮತ್ತು ಕೊರಗ ಸಮುದಾಯವನ್ನು ರಾಜಕೀಯಕ್ಕೆ ಬಳಸಿ ಅಪಮಾನ ಮಾಡಿರುವುದನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡಿಸುತ್ತದೆ. ಹಾಗೆ ಎಲ್ಲರೂ ಸಾಲೆತ್ತೂರಿನ ಕೊರಗಜ್ಜ ವೇಷದ ವಿವಾದಕ್ಕೆ ಸಂಬಂಧಿಸಿದಂತೆ ದ್ವೇಷ ಹರಡಲು ಮಾಡಿರುವ ಹುನ್ನಾರಗಳನ್ನು ವಿಫಲಗೊಳಿಸಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಅವರು ಕೋರಿದ್ದಾರೆ.


ಇದನ್ನೂ ಓದಿರಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...