Homeಕರ್ನಾಟಕಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

ಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

"ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು"

- Advertisement -
- Advertisement -

ಕೊರಗ ತನಿಯನಿಗೆ ಸಂಬಂಧಿಸದೆ ಇರುವ ವೇಷವನ್ನು ಕೊರಗ ತನಿಯನ ವೇಷವೆಂದು ಬಣ್ಣಿಸಿ ಜನರ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಪದೇ ಪದೇ ಕೊರಗಜ್ಜ ಮತ್ತು ಕೊರಗ ಸಮುದಾಯವನ್ನು ಅಪಮಾನ ಮಾಡಲಾಗುತ್ತಿದೆ ಎಂದು ಕೊರಗ ಸಮುದಾಯದ ಮುಖಂಡ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರಾವಳಿ ಜಿಲ್ಲೆಗಳ ಮೂಲನಿವಾಸಿಗಳಾದ ಕೊರಗ ಸಮುದಾಯ ಮತ್ತು ನಮ್ಮ ಗುರಿಕಾರ ಕೊರಗ ತನಿಯನ ಮೇಲೆ ಇತ್ತೀಚೆಗೆ ಪ್ರೀತಿ, ಅಭಿಮಾನ ಉಕ್ಕಿಹರಿದಂತೆ ಕಾಣುತ್ತಿದೆ. ಕೊರಗ ಸಮುದಾಯದ ನಾವು ಹೇಳುತ್ತೇವೆ- ಕೊರಗ ತನಿಯ ದೇವರು ಅಲ್ಲಾ, ದೈವವು ಅಲ್ಲಾ, ನಮ್ಮ ಸಮುದಾಯದ ಒಬ್ಬ ಗುರಿಕಾರ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಮಡಿವಂತಿಕೆಯ ಮೋಸ ಕುತಂತ್ರಕ್ಕೆ ಬಲ್ಲಿಯಾದ ಕೊರಗ ತನಿಯನು ಸಾಮಾಜಿಕ ನ್ಯಾಯದ ಪ್ರತೀಕ. ಹುಭಾಶಿಕನ್ನು ನೇರವಾಗಿ ಎದುರಿಸಲು ಸಾಧ್ಯವಾಗದೆ ಮೋಸದಿಂದ ಸಾಯಿಸಿ ಇಡೀ ಸಮುದಾಯವನ್ನು ನಿರ್ಗತಿಕ ಪರಿಸ್ಥಿತಿಗೆ ದೂಡಿದಿರಿ. ಹಾಗೆಯೇ ಕೊರಗ ತನಿಯನ ಬದುಕು ಸಹ ದುರಂತ ಕಥೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ಪಾಡ್ದಾನದ ಪ್ರಕಾರ ಮೈರಕ್ಕನ ಆಶ್ರಮದಲ್ಲಿ ಬೆಳೆದ ತನಿಯ ದೊಡ್ಡವನಾದ ಬಳಿಕ ಎಣಸೂರು ಬಾಳಿಕೆಯ ರಾಜ ದೈವಗಳ ನೇಮಕ್ಕೆ ತೆಂಗಿನ ಎಳೆ ಗರಿ, ಸೀಯಾಳ, ಬಾಳೆದಿಂಡು, ಸಿಂಗಾರ ಇತ್ಯಾದಿ ಹೊರೆಯನ್ನು ಹೊರಲು ಏಳು ಮಂದಿ ಕೆಲಸದವರು ಬರದೆ ಇದ್ದಾಗ ತನಿಯ ಒಬ್ಬನೇ ತಂದು ಕೊಡುತ್ತಾನೆ. ಆದರೆ ಕಾಡು ಕೊರಗ ಎನ್ನುವ ಕಾರಣಕ್ಕೆ ಅವನನ್ನು ದೇವಸ್ಥಾನದ ಒಳಗೆ ಬರಲು ನಿರಾಕರಿಸಲಾಗಿದೆ. ಇದನ್ನು ತನಿಯ ಪ್ರತಿಭಟಿಸುತ್ತಾನೆ. ತಾನು ತಂದ ವಸ್ತುಗಳು ಆಗುತ್ತದೆ, ಆದರೆ ನಾನು ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾನೆ. ಅಲ್ಲೇ ಪಕ್ಕದಲ್ಲಿ ಇರುವ ಮರದಿಂದ ತನ್ನ ಹೆಂಡತಿಗೆ ಮಾಪಲ ಹಣ್ಣು ಕೊಯ್ದು ತರುತ್ತಾನೆ. ಆಗ ಅಲ್ಲಿನ ಮೈಸಂದಾ ಮತ್ತು ಕೊಡಂಗೆನಾರ್ ದೈವಗಳ ಕೆಂಗಣ್ಣಿಗೆ ಗುರಿಯಾಗಿ ಮಾಯವಾದನು. ಈಗಲೂ ಆ ದೈವಗಳು ಶ್ರೇಣೀಕಣದಲ್ಲಿ ಕೊರಗ ತನಿಯನಿಗಿಂತ ಮೇಲಿವೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಇನ್ನೊಂದು ಪಾಡ್ದಾನದಲ್ಲಿ ದೇವಸ್ಥಾನದ ಪ್ರಾಂಗಣದಲ್ಲಿ ಇರುವ ಮಾಫಲ ಹುಳಿ ಕೊಯ್ಯಲು ಹೋಗುವಾಗ ಆತನನ್ನು ಬ್ರಾಹ್ಮಣರು ಕಡಿದು ಕೊಲ್ಲುತ್ತಾರೆ. ಕೊರಗ ತನಿಯ ಯಾವತ್ತೂ ಹಿಂದೂ ಧರ್ಮದ ಸಂಕೇತವಲ್ಲ. ಆತ ಕರಾವಳಿ ಜಿಲ್ಲೆಗಳ ಕೊರಗ ಸಮುದಾಯ ಮತ್ತು ಆದಿಮ ಸಂಸ್ಕೃತಿಯ ಪ್ರತೀಕ. ಕೊರಗ ತನಿಯನ ಕುರಿತು ಮಾತನಾಡುವ ಮೊದಲು ನಿಮ್ಮವರು ಹಾಗೂ ನೀವು ಮಾಡಿದ, ಮಾಡುತ್ತಿರುವ ಮಹಾ ಮೋಸಗಳ ಬಗ್ಗೆ ಒಮ್ಮೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿಂದೂ ಇರಲಿ ಮುಸ್ಲಿಂ ಇರಲಿ ಮದುವೆ, ಜಾತ್ರೆ, ತಂಬಿಲದಲ್ಲಿ ನಮ್ಮ ಗುರಿಕಾರ ಕೊರಗ ತನಿಯನ ವೇಷ ಹಾಕಲು ನಿಮಗೆ ಒಪ್ಪಿಗೆ ಕೊಟ್ಟವರು ಯಾರು? ಕೊರಗರ ವೇಷದಲ್ಲಿ ಕೊರಗ ಸಮುದಾಯದ ಘನತೆ ಗೌರವದ ಬದುಕಿಗೆ ಅವಮಾನ ಮಾಡಿ ಪದ ಪ್ರಯೋಗ ಮಾಡುವುದು ಎಷ್ಟು ಸರಿ? ಯಕ್ಷಗಾನದಲ್ಲಿ ಬ್ರಾಹ್ಮಣ ವೇಷ, ಮುಸ್ಲಿಂ ವೇಷ ಹಾಕಿದಕ್ಕೆ ತಾವೇಲ್ಲರೂ ಬಹಳ ಪ್ರತಿಕ್ರಿಯೆ ನೀಡುವವರು, ವಿರೋಧಿಸುವವರು, ಕೊರಗರ ವೇಷ ಹಾಕಿ ನಮ್ಮನ್ನು ಹೀಯಾಳಿಸುವಿರಲ್ಲ ಆಗ ನಿಮ್ಮ ಹಿಂದೂ ಧರ್ಮದಲ್ಲಿ ಮತ್ತು ಈ ಪ್ರಜಾಪ್ರಭುತ್ವದ ನ್ಯಾಯಯುತ ಸಮಾಜದಲ್ಲಿ ಕೊರಗರು ಇರುವುದಿಲ್ಲವೇ? ಎಂದು ಶ್ರೀಧರ್‌ ನಾಡಾ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ವಿನಾಶದಂಚಿಗೆ ಬಂದಿರುವ ಕೊರಗ ಸಮುದಾಯದ ಉಳಿಯುವಿಗೆ ನಿಮ್ಮ ಕೊಡುಗೆ ಏನು ತಿಳಿಸಿ. ಕೊರಗ ತನಿಯ ಮತ್ತು ಕೊರಗ ಸಮುದಾಯವನ್ನು ರಾಜಕೀಯಕ್ಕೆ ಬಳಸಿ ಅಪಮಾನ ಮಾಡಿರುವುದನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡಿಸುತ್ತದೆ. ಹಾಗೆ ಎಲ್ಲರೂ ಸಾಲೆತ್ತೂರಿನ ಕೊರಗಜ್ಜ ವೇಷದ ವಿವಾದಕ್ಕೆ ಸಂಬಂಧಿಸಿದಂತೆ ದ್ವೇಷ ಹರಡಲು ಮಾಡಿರುವ ಹುನ್ನಾರಗಳನ್ನು ವಿಫಲಗೊಳಿಸಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಅವರು ಕೋರಿದ್ದಾರೆ.


ಇದನ್ನೂ ಓದಿರಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...