Homeಕರ್ನಾಟಕಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

ಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

"ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು"

- Advertisement -
- Advertisement -

ಕೊರಗ ತನಿಯನಿಗೆ ಸಂಬಂಧಿಸದೆ ಇರುವ ವೇಷವನ್ನು ಕೊರಗ ತನಿಯನ ವೇಷವೆಂದು ಬಣ್ಣಿಸಿ ಜನರ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಪದೇ ಪದೇ ಕೊರಗಜ್ಜ ಮತ್ತು ಕೊರಗ ಸಮುದಾಯವನ್ನು ಅಪಮಾನ ಮಾಡಲಾಗುತ್ತಿದೆ ಎಂದು ಕೊರಗ ಸಮುದಾಯದ ಮುಖಂಡ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರಾವಳಿ ಜಿಲ್ಲೆಗಳ ಮೂಲನಿವಾಸಿಗಳಾದ ಕೊರಗ ಸಮುದಾಯ ಮತ್ತು ನಮ್ಮ ಗುರಿಕಾರ ಕೊರಗ ತನಿಯನ ಮೇಲೆ ಇತ್ತೀಚೆಗೆ ಪ್ರೀತಿ, ಅಭಿಮಾನ ಉಕ್ಕಿಹರಿದಂತೆ ಕಾಣುತ್ತಿದೆ. ಕೊರಗ ಸಮುದಾಯದ ನಾವು ಹೇಳುತ್ತೇವೆ- ಕೊರಗ ತನಿಯ ದೇವರು ಅಲ್ಲಾ, ದೈವವು ಅಲ್ಲಾ, ನಮ್ಮ ಸಮುದಾಯದ ಒಬ್ಬ ಗುರಿಕಾರ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಮಡಿವಂತಿಕೆಯ ಮೋಸ ಕುತಂತ್ರಕ್ಕೆ ಬಲ್ಲಿಯಾದ ಕೊರಗ ತನಿಯನು ಸಾಮಾಜಿಕ ನ್ಯಾಯದ ಪ್ರತೀಕ. ಹುಭಾಶಿಕನ್ನು ನೇರವಾಗಿ ಎದುರಿಸಲು ಸಾಧ್ಯವಾಗದೆ ಮೋಸದಿಂದ ಸಾಯಿಸಿ ಇಡೀ ಸಮುದಾಯವನ್ನು ನಿರ್ಗತಿಕ ಪರಿಸ್ಥಿತಿಗೆ ದೂಡಿದಿರಿ. ಹಾಗೆಯೇ ಕೊರಗ ತನಿಯನ ಬದುಕು ಸಹ ದುರಂತ ಕಥೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ಪಾಡ್ದಾನದ ಪ್ರಕಾರ ಮೈರಕ್ಕನ ಆಶ್ರಮದಲ್ಲಿ ಬೆಳೆದ ತನಿಯ ದೊಡ್ಡವನಾದ ಬಳಿಕ ಎಣಸೂರು ಬಾಳಿಕೆಯ ರಾಜ ದೈವಗಳ ನೇಮಕ್ಕೆ ತೆಂಗಿನ ಎಳೆ ಗರಿ, ಸೀಯಾಳ, ಬಾಳೆದಿಂಡು, ಸಿಂಗಾರ ಇತ್ಯಾದಿ ಹೊರೆಯನ್ನು ಹೊರಲು ಏಳು ಮಂದಿ ಕೆಲಸದವರು ಬರದೆ ಇದ್ದಾಗ ತನಿಯ ಒಬ್ಬನೇ ತಂದು ಕೊಡುತ್ತಾನೆ. ಆದರೆ ಕಾಡು ಕೊರಗ ಎನ್ನುವ ಕಾರಣಕ್ಕೆ ಅವನನ್ನು ದೇವಸ್ಥಾನದ ಒಳಗೆ ಬರಲು ನಿರಾಕರಿಸಲಾಗಿದೆ. ಇದನ್ನು ತನಿಯ ಪ್ರತಿಭಟಿಸುತ್ತಾನೆ. ತಾನು ತಂದ ವಸ್ತುಗಳು ಆಗುತ್ತದೆ, ಆದರೆ ನಾನು ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾನೆ. ಅಲ್ಲೇ ಪಕ್ಕದಲ್ಲಿ ಇರುವ ಮರದಿಂದ ತನ್ನ ಹೆಂಡತಿಗೆ ಮಾಪಲ ಹಣ್ಣು ಕೊಯ್ದು ತರುತ್ತಾನೆ. ಆಗ ಅಲ್ಲಿನ ಮೈಸಂದಾ ಮತ್ತು ಕೊಡಂಗೆನಾರ್ ದೈವಗಳ ಕೆಂಗಣ್ಣಿಗೆ ಗುರಿಯಾಗಿ ಮಾಯವಾದನು. ಈಗಲೂ ಆ ದೈವಗಳು ಶ್ರೇಣೀಕಣದಲ್ಲಿ ಕೊರಗ ತನಿಯನಿಗಿಂತ ಮೇಲಿವೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಇನ್ನೊಂದು ಪಾಡ್ದಾನದಲ್ಲಿ ದೇವಸ್ಥಾನದ ಪ್ರಾಂಗಣದಲ್ಲಿ ಇರುವ ಮಾಫಲ ಹುಳಿ ಕೊಯ್ಯಲು ಹೋಗುವಾಗ ಆತನನ್ನು ಬ್ರಾಹ್ಮಣರು ಕಡಿದು ಕೊಲ್ಲುತ್ತಾರೆ. ಕೊರಗ ತನಿಯ ಯಾವತ್ತೂ ಹಿಂದೂ ಧರ್ಮದ ಸಂಕೇತವಲ್ಲ. ಆತ ಕರಾವಳಿ ಜಿಲ್ಲೆಗಳ ಕೊರಗ ಸಮುದಾಯ ಮತ್ತು ಆದಿಮ ಸಂಸ್ಕೃತಿಯ ಪ್ರತೀಕ. ಕೊರಗ ತನಿಯನ ಕುರಿತು ಮಾತನಾಡುವ ಮೊದಲು ನಿಮ್ಮವರು ಹಾಗೂ ನೀವು ಮಾಡಿದ, ಮಾಡುತ್ತಿರುವ ಮಹಾ ಮೋಸಗಳ ಬಗ್ಗೆ ಒಮ್ಮೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿಂದೂ ಇರಲಿ ಮುಸ್ಲಿಂ ಇರಲಿ ಮದುವೆ, ಜಾತ್ರೆ, ತಂಬಿಲದಲ್ಲಿ ನಮ್ಮ ಗುರಿಕಾರ ಕೊರಗ ತನಿಯನ ವೇಷ ಹಾಕಲು ನಿಮಗೆ ಒಪ್ಪಿಗೆ ಕೊಟ್ಟವರು ಯಾರು? ಕೊರಗರ ವೇಷದಲ್ಲಿ ಕೊರಗ ಸಮುದಾಯದ ಘನತೆ ಗೌರವದ ಬದುಕಿಗೆ ಅವಮಾನ ಮಾಡಿ ಪದ ಪ್ರಯೋಗ ಮಾಡುವುದು ಎಷ್ಟು ಸರಿ? ಯಕ್ಷಗಾನದಲ್ಲಿ ಬ್ರಾಹ್ಮಣ ವೇಷ, ಮುಸ್ಲಿಂ ವೇಷ ಹಾಕಿದಕ್ಕೆ ತಾವೇಲ್ಲರೂ ಬಹಳ ಪ್ರತಿಕ್ರಿಯೆ ನೀಡುವವರು, ವಿರೋಧಿಸುವವರು, ಕೊರಗರ ವೇಷ ಹಾಕಿ ನಮ್ಮನ್ನು ಹೀಯಾಳಿಸುವಿರಲ್ಲ ಆಗ ನಿಮ್ಮ ಹಿಂದೂ ಧರ್ಮದಲ್ಲಿ ಮತ್ತು ಈ ಪ್ರಜಾಪ್ರಭುತ್ವದ ನ್ಯಾಯಯುತ ಸಮಾಜದಲ್ಲಿ ಕೊರಗರು ಇರುವುದಿಲ್ಲವೇ? ಎಂದು ಶ್ರೀಧರ್‌ ನಾಡಾ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ವಿನಾಶದಂಚಿಗೆ ಬಂದಿರುವ ಕೊರಗ ಸಮುದಾಯದ ಉಳಿಯುವಿಗೆ ನಿಮ್ಮ ಕೊಡುಗೆ ಏನು ತಿಳಿಸಿ. ಕೊರಗ ತನಿಯ ಮತ್ತು ಕೊರಗ ಸಮುದಾಯವನ್ನು ರಾಜಕೀಯಕ್ಕೆ ಬಳಸಿ ಅಪಮಾನ ಮಾಡಿರುವುದನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡಿಸುತ್ತದೆ. ಹಾಗೆ ಎಲ್ಲರೂ ಸಾಲೆತ್ತೂರಿನ ಕೊರಗಜ್ಜ ವೇಷದ ವಿವಾದಕ್ಕೆ ಸಂಬಂಧಿಸಿದಂತೆ ದ್ವೇಷ ಹರಡಲು ಮಾಡಿರುವ ಹುನ್ನಾರಗಳನ್ನು ವಿಫಲಗೊಳಿಸಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಅವರು ಕೋರಿದ್ದಾರೆ.


ಇದನ್ನೂ ಓದಿರಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...