Homeಕರ್ನಾಟಕಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

ಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

"ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು"

- Advertisement -
- Advertisement -

ಕೊರಗ ತನಿಯನಿಗೆ ಸಂಬಂಧಿಸದೆ ಇರುವ ವೇಷವನ್ನು ಕೊರಗ ತನಿಯನ ವೇಷವೆಂದು ಬಣ್ಣಿಸಿ ಜನರ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಪದೇ ಪದೇ ಕೊರಗಜ್ಜ ಮತ್ತು ಕೊರಗ ಸಮುದಾಯವನ್ನು ಅಪಮಾನ ಮಾಡಲಾಗುತ್ತಿದೆ ಎಂದು ಕೊರಗ ಸಮುದಾಯದ ಮುಖಂಡ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರಾವಳಿ ಜಿಲ್ಲೆಗಳ ಮೂಲನಿವಾಸಿಗಳಾದ ಕೊರಗ ಸಮುದಾಯ ಮತ್ತು ನಮ್ಮ ಗುರಿಕಾರ ಕೊರಗ ತನಿಯನ ಮೇಲೆ ಇತ್ತೀಚೆಗೆ ಪ್ರೀತಿ, ಅಭಿಮಾನ ಉಕ್ಕಿಹರಿದಂತೆ ಕಾಣುತ್ತಿದೆ. ಕೊರಗ ಸಮುದಾಯದ ನಾವು ಹೇಳುತ್ತೇವೆ- ಕೊರಗ ತನಿಯ ದೇವರು ಅಲ್ಲಾ, ದೈವವು ಅಲ್ಲಾ, ನಮ್ಮ ಸಮುದಾಯದ ಒಬ್ಬ ಗುರಿಕಾರ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಮಡಿವಂತಿಕೆಯ ಮೋಸ ಕುತಂತ್ರಕ್ಕೆ ಬಲ್ಲಿಯಾದ ಕೊರಗ ತನಿಯನು ಸಾಮಾಜಿಕ ನ್ಯಾಯದ ಪ್ರತೀಕ. ಹುಭಾಶಿಕನ್ನು ನೇರವಾಗಿ ಎದುರಿಸಲು ಸಾಧ್ಯವಾಗದೆ ಮೋಸದಿಂದ ಸಾಯಿಸಿ ಇಡೀ ಸಮುದಾಯವನ್ನು ನಿರ್ಗತಿಕ ಪರಿಸ್ಥಿತಿಗೆ ದೂಡಿದಿರಿ. ಹಾಗೆಯೇ ಕೊರಗ ತನಿಯನ ಬದುಕು ಸಹ ದುರಂತ ಕಥೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ಪಾಡ್ದಾನದ ಪ್ರಕಾರ ಮೈರಕ್ಕನ ಆಶ್ರಮದಲ್ಲಿ ಬೆಳೆದ ತನಿಯ ದೊಡ್ಡವನಾದ ಬಳಿಕ ಎಣಸೂರು ಬಾಳಿಕೆಯ ರಾಜ ದೈವಗಳ ನೇಮಕ್ಕೆ ತೆಂಗಿನ ಎಳೆ ಗರಿ, ಸೀಯಾಳ, ಬಾಳೆದಿಂಡು, ಸಿಂಗಾರ ಇತ್ಯಾದಿ ಹೊರೆಯನ್ನು ಹೊರಲು ಏಳು ಮಂದಿ ಕೆಲಸದವರು ಬರದೆ ಇದ್ದಾಗ ತನಿಯ ಒಬ್ಬನೇ ತಂದು ಕೊಡುತ್ತಾನೆ. ಆದರೆ ಕಾಡು ಕೊರಗ ಎನ್ನುವ ಕಾರಣಕ್ಕೆ ಅವನನ್ನು ದೇವಸ್ಥಾನದ ಒಳಗೆ ಬರಲು ನಿರಾಕರಿಸಲಾಗಿದೆ. ಇದನ್ನು ತನಿಯ ಪ್ರತಿಭಟಿಸುತ್ತಾನೆ. ತಾನು ತಂದ ವಸ್ತುಗಳು ಆಗುತ್ತದೆ, ಆದರೆ ನಾನು ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾನೆ. ಅಲ್ಲೇ ಪಕ್ಕದಲ್ಲಿ ಇರುವ ಮರದಿಂದ ತನ್ನ ಹೆಂಡತಿಗೆ ಮಾಪಲ ಹಣ್ಣು ಕೊಯ್ದು ತರುತ್ತಾನೆ. ಆಗ ಅಲ್ಲಿನ ಮೈಸಂದಾ ಮತ್ತು ಕೊಡಂಗೆನಾರ್ ದೈವಗಳ ಕೆಂಗಣ್ಣಿಗೆ ಗುರಿಯಾಗಿ ಮಾಯವಾದನು. ಈಗಲೂ ಆ ದೈವಗಳು ಶ್ರೇಣೀಕಣದಲ್ಲಿ ಕೊರಗ ತನಿಯನಿಗಿಂತ ಮೇಲಿವೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಇನ್ನೊಂದು ಪಾಡ್ದಾನದಲ್ಲಿ ದೇವಸ್ಥಾನದ ಪ್ರಾಂಗಣದಲ್ಲಿ ಇರುವ ಮಾಫಲ ಹುಳಿ ಕೊಯ್ಯಲು ಹೋಗುವಾಗ ಆತನನ್ನು ಬ್ರಾಹ್ಮಣರು ಕಡಿದು ಕೊಲ್ಲುತ್ತಾರೆ. ಕೊರಗ ತನಿಯ ಯಾವತ್ತೂ ಹಿಂದೂ ಧರ್ಮದ ಸಂಕೇತವಲ್ಲ. ಆತ ಕರಾವಳಿ ಜಿಲ್ಲೆಗಳ ಕೊರಗ ಸಮುದಾಯ ಮತ್ತು ಆದಿಮ ಸಂಸ್ಕೃತಿಯ ಪ್ರತೀಕ. ಕೊರಗ ತನಿಯನ ಕುರಿತು ಮಾತನಾಡುವ ಮೊದಲು ನಿಮ್ಮವರು ಹಾಗೂ ನೀವು ಮಾಡಿದ, ಮಾಡುತ್ತಿರುವ ಮಹಾ ಮೋಸಗಳ ಬಗ್ಗೆ ಒಮ್ಮೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿಂದೂ ಇರಲಿ ಮುಸ್ಲಿಂ ಇರಲಿ ಮದುವೆ, ಜಾತ್ರೆ, ತಂಬಿಲದಲ್ಲಿ ನಮ್ಮ ಗುರಿಕಾರ ಕೊರಗ ತನಿಯನ ವೇಷ ಹಾಕಲು ನಿಮಗೆ ಒಪ್ಪಿಗೆ ಕೊಟ್ಟವರು ಯಾರು? ಕೊರಗರ ವೇಷದಲ್ಲಿ ಕೊರಗ ಸಮುದಾಯದ ಘನತೆ ಗೌರವದ ಬದುಕಿಗೆ ಅವಮಾನ ಮಾಡಿ ಪದ ಪ್ರಯೋಗ ಮಾಡುವುದು ಎಷ್ಟು ಸರಿ? ಯಕ್ಷಗಾನದಲ್ಲಿ ಬ್ರಾಹ್ಮಣ ವೇಷ, ಮುಸ್ಲಿಂ ವೇಷ ಹಾಕಿದಕ್ಕೆ ತಾವೇಲ್ಲರೂ ಬಹಳ ಪ್ರತಿಕ್ರಿಯೆ ನೀಡುವವರು, ವಿರೋಧಿಸುವವರು, ಕೊರಗರ ವೇಷ ಹಾಕಿ ನಮ್ಮನ್ನು ಹೀಯಾಳಿಸುವಿರಲ್ಲ ಆಗ ನಿಮ್ಮ ಹಿಂದೂ ಧರ್ಮದಲ್ಲಿ ಮತ್ತು ಈ ಪ್ರಜಾಪ್ರಭುತ್ವದ ನ್ಯಾಯಯುತ ಸಮಾಜದಲ್ಲಿ ಕೊರಗರು ಇರುವುದಿಲ್ಲವೇ? ಎಂದು ಶ್ರೀಧರ್‌ ನಾಡಾ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ವಿನಾಶದಂಚಿಗೆ ಬಂದಿರುವ ಕೊರಗ ಸಮುದಾಯದ ಉಳಿಯುವಿಗೆ ನಿಮ್ಮ ಕೊಡುಗೆ ಏನು ತಿಳಿಸಿ. ಕೊರಗ ತನಿಯ ಮತ್ತು ಕೊರಗ ಸಮುದಾಯವನ್ನು ರಾಜಕೀಯಕ್ಕೆ ಬಳಸಿ ಅಪಮಾನ ಮಾಡಿರುವುದನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡಿಸುತ್ತದೆ. ಹಾಗೆ ಎಲ್ಲರೂ ಸಾಲೆತ್ತೂರಿನ ಕೊರಗಜ್ಜ ವೇಷದ ವಿವಾದಕ್ಕೆ ಸಂಬಂಧಿಸಿದಂತೆ ದ್ವೇಷ ಹರಡಲು ಮಾಡಿರುವ ಹುನ್ನಾರಗಳನ್ನು ವಿಫಲಗೊಳಿಸಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಅವರು ಕೋರಿದ್ದಾರೆ.


ಇದನ್ನೂ ಓದಿರಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...