Homeಕರ್ನಾಟಕಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

ಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

"ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು"

- Advertisement -
- Advertisement -

ಕೊರಗ ತನಿಯನಿಗೆ ಸಂಬಂಧಿಸದೆ ಇರುವ ವೇಷವನ್ನು ಕೊರಗ ತನಿಯನ ವೇಷವೆಂದು ಬಣ್ಣಿಸಿ ಜನರ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಪದೇ ಪದೇ ಕೊರಗಜ್ಜ ಮತ್ತು ಕೊರಗ ಸಮುದಾಯವನ್ನು ಅಪಮಾನ ಮಾಡಲಾಗುತ್ತಿದೆ ಎಂದು ಕೊರಗ ಸಮುದಾಯದ ಮುಖಂಡ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರಾವಳಿ ಜಿಲ್ಲೆಗಳ ಮೂಲನಿವಾಸಿಗಳಾದ ಕೊರಗ ಸಮುದಾಯ ಮತ್ತು ನಮ್ಮ ಗುರಿಕಾರ ಕೊರಗ ತನಿಯನ ಮೇಲೆ ಇತ್ತೀಚೆಗೆ ಪ್ರೀತಿ, ಅಭಿಮಾನ ಉಕ್ಕಿಹರಿದಂತೆ ಕಾಣುತ್ತಿದೆ. ಕೊರಗ ಸಮುದಾಯದ ನಾವು ಹೇಳುತ್ತೇವೆ- ಕೊರಗ ತನಿಯ ದೇವರು ಅಲ್ಲಾ, ದೈವವು ಅಲ್ಲಾ, ನಮ್ಮ ಸಮುದಾಯದ ಒಬ್ಬ ಗುರಿಕಾರ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಮಡಿವಂತಿಕೆಯ ಮೋಸ ಕುತಂತ್ರಕ್ಕೆ ಬಲ್ಲಿಯಾದ ಕೊರಗ ತನಿಯನು ಸಾಮಾಜಿಕ ನ್ಯಾಯದ ಪ್ರತೀಕ. ಹುಭಾಶಿಕನ್ನು ನೇರವಾಗಿ ಎದುರಿಸಲು ಸಾಧ್ಯವಾಗದೆ ಮೋಸದಿಂದ ಸಾಯಿಸಿ ಇಡೀ ಸಮುದಾಯವನ್ನು ನಿರ್ಗತಿಕ ಪರಿಸ್ಥಿತಿಗೆ ದೂಡಿದಿರಿ. ಹಾಗೆಯೇ ಕೊರಗ ತನಿಯನ ಬದುಕು ಸಹ ದುರಂತ ಕಥೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ಪಾಡ್ದಾನದ ಪ್ರಕಾರ ಮೈರಕ್ಕನ ಆಶ್ರಮದಲ್ಲಿ ಬೆಳೆದ ತನಿಯ ದೊಡ್ಡವನಾದ ಬಳಿಕ ಎಣಸೂರು ಬಾಳಿಕೆಯ ರಾಜ ದೈವಗಳ ನೇಮಕ್ಕೆ ತೆಂಗಿನ ಎಳೆ ಗರಿ, ಸೀಯಾಳ, ಬಾಳೆದಿಂಡು, ಸಿಂಗಾರ ಇತ್ಯಾದಿ ಹೊರೆಯನ್ನು ಹೊರಲು ಏಳು ಮಂದಿ ಕೆಲಸದವರು ಬರದೆ ಇದ್ದಾಗ ತನಿಯ ಒಬ್ಬನೇ ತಂದು ಕೊಡುತ್ತಾನೆ. ಆದರೆ ಕಾಡು ಕೊರಗ ಎನ್ನುವ ಕಾರಣಕ್ಕೆ ಅವನನ್ನು ದೇವಸ್ಥಾನದ ಒಳಗೆ ಬರಲು ನಿರಾಕರಿಸಲಾಗಿದೆ. ಇದನ್ನು ತನಿಯ ಪ್ರತಿಭಟಿಸುತ್ತಾನೆ. ತಾನು ತಂದ ವಸ್ತುಗಳು ಆಗುತ್ತದೆ, ಆದರೆ ನಾನು ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾನೆ. ಅಲ್ಲೇ ಪಕ್ಕದಲ್ಲಿ ಇರುವ ಮರದಿಂದ ತನ್ನ ಹೆಂಡತಿಗೆ ಮಾಪಲ ಹಣ್ಣು ಕೊಯ್ದು ತರುತ್ತಾನೆ. ಆಗ ಅಲ್ಲಿನ ಮೈಸಂದಾ ಮತ್ತು ಕೊಡಂಗೆನಾರ್ ದೈವಗಳ ಕೆಂಗಣ್ಣಿಗೆ ಗುರಿಯಾಗಿ ಮಾಯವಾದನು. ಈಗಲೂ ಆ ದೈವಗಳು ಶ್ರೇಣೀಕಣದಲ್ಲಿ ಕೊರಗ ತನಿಯನಿಗಿಂತ ಮೇಲಿವೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಇನ್ನೊಂದು ಪಾಡ್ದಾನದಲ್ಲಿ ದೇವಸ್ಥಾನದ ಪ್ರಾಂಗಣದಲ್ಲಿ ಇರುವ ಮಾಫಲ ಹುಳಿ ಕೊಯ್ಯಲು ಹೋಗುವಾಗ ಆತನನ್ನು ಬ್ರಾಹ್ಮಣರು ಕಡಿದು ಕೊಲ್ಲುತ್ತಾರೆ. ಕೊರಗ ತನಿಯ ಯಾವತ್ತೂ ಹಿಂದೂ ಧರ್ಮದ ಸಂಕೇತವಲ್ಲ. ಆತ ಕರಾವಳಿ ಜಿಲ್ಲೆಗಳ ಕೊರಗ ಸಮುದಾಯ ಮತ್ತು ಆದಿಮ ಸಂಸ್ಕೃತಿಯ ಪ್ರತೀಕ. ಕೊರಗ ತನಿಯನ ಕುರಿತು ಮಾತನಾಡುವ ಮೊದಲು ನಿಮ್ಮವರು ಹಾಗೂ ನೀವು ಮಾಡಿದ, ಮಾಡುತ್ತಿರುವ ಮಹಾ ಮೋಸಗಳ ಬಗ್ಗೆ ಒಮ್ಮೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿಂದೂ ಇರಲಿ ಮುಸ್ಲಿಂ ಇರಲಿ ಮದುವೆ, ಜಾತ್ರೆ, ತಂಬಿಲದಲ್ಲಿ ನಮ್ಮ ಗುರಿಕಾರ ಕೊರಗ ತನಿಯನ ವೇಷ ಹಾಕಲು ನಿಮಗೆ ಒಪ್ಪಿಗೆ ಕೊಟ್ಟವರು ಯಾರು? ಕೊರಗರ ವೇಷದಲ್ಲಿ ಕೊರಗ ಸಮುದಾಯದ ಘನತೆ ಗೌರವದ ಬದುಕಿಗೆ ಅವಮಾನ ಮಾಡಿ ಪದ ಪ್ರಯೋಗ ಮಾಡುವುದು ಎಷ್ಟು ಸರಿ? ಯಕ್ಷಗಾನದಲ್ಲಿ ಬ್ರಾಹ್ಮಣ ವೇಷ, ಮುಸ್ಲಿಂ ವೇಷ ಹಾಕಿದಕ್ಕೆ ತಾವೇಲ್ಲರೂ ಬಹಳ ಪ್ರತಿಕ್ರಿಯೆ ನೀಡುವವರು, ವಿರೋಧಿಸುವವರು, ಕೊರಗರ ವೇಷ ಹಾಕಿ ನಮ್ಮನ್ನು ಹೀಯಾಳಿಸುವಿರಲ್ಲ ಆಗ ನಿಮ್ಮ ಹಿಂದೂ ಧರ್ಮದಲ್ಲಿ ಮತ್ತು ಈ ಪ್ರಜಾಪ್ರಭುತ್ವದ ನ್ಯಾಯಯುತ ಸಮಾಜದಲ್ಲಿ ಕೊರಗರು ಇರುವುದಿಲ್ಲವೇ? ಎಂದು ಶ್ರೀಧರ್‌ ನಾಡಾ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ವಿನಾಶದಂಚಿಗೆ ಬಂದಿರುವ ಕೊರಗ ಸಮುದಾಯದ ಉಳಿಯುವಿಗೆ ನಿಮ್ಮ ಕೊಡುಗೆ ಏನು ತಿಳಿಸಿ. ಕೊರಗ ತನಿಯ ಮತ್ತು ಕೊರಗ ಸಮುದಾಯವನ್ನು ರಾಜಕೀಯಕ್ಕೆ ಬಳಸಿ ಅಪಮಾನ ಮಾಡಿರುವುದನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡಿಸುತ್ತದೆ. ಹಾಗೆ ಎಲ್ಲರೂ ಸಾಲೆತ್ತೂರಿನ ಕೊರಗಜ್ಜ ವೇಷದ ವಿವಾದಕ್ಕೆ ಸಂಬಂಧಿಸಿದಂತೆ ದ್ವೇಷ ಹರಡಲು ಮಾಡಿರುವ ಹುನ್ನಾರಗಳನ್ನು ವಿಫಲಗೊಳಿಸಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಅವರು ಕೋರಿದ್ದಾರೆ.


ಇದನ್ನೂ ಓದಿರಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...