Homeಮುಖಪುಟಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

ಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

- Advertisement -
- Advertisement -

ದಲಿತರ ಸ್ವಾಭಿಮಾನ ಮತ್ತು ಅಸ್ಮಿತೆಯ 1818ರ ಭೀಮಾ-ಕೋರೆಗಾಂವ್ ಯುದ್ದದ ನೆನಪಿನಲ್ಲಿ ಬುಧವಾರ (ಜ.1) ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕೋರೆಗಾಂವ್‌ ಭೀಮಾ ಗ್ರಾಮದಲ್ಲಿ 207ನೇ ‘ಶೌರ್ಯ ದಿನ’ ಆಚರಣೆ ನಡೆಯಿತು.

ರಾಜಕೀಯ ನಾಯಕರು, ಸಮುದಾಯದ ಮುಖಂಡರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಭೀಮಾ-ಕೋರೆಗಾಂವ್ ‘ವಿಜಯಸ್ತಂಭ’ದ ಬಳಿ ಜಮಾಯಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ‘ವಿಜಯಸ್ತಂಭ’ದ ಪ್ರದೇಶದ ಅಭಿವೃದ್ದಿ ಮತ್ತು ವಿಸ್ತರಣೆಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆಯಿಟ್ಟರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಠವಳೆ, “ಈ ದಿನ, ನಮ್ಮ ಜನರು ಪೇಶ್ವೆಗಳೊಂದಿಗೆ ಹೋರಾಡಿದರು. ಈ ಕಂಬವು ಅವರ ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಪ್ರತಿ ವರ್ಷ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಈ ಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಈಗ ದೇಶದ ವಿವಿಧ ಭಾಗಗಳ ಜನರು ಇಲ್ಲಿಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ವಿಜಯಸ್ತಂಭದ ಸುತ್ತ ಬೃಹತ್ ಸ್ಮಾರಕ ನಿರ್ಮಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಆದರೆ, ಕಾಮಗಾರಿ ಪೂರ್ಣಗೊಂಡಿಲ್ಲ. ನಾನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಸ್ಮಾರಕಕ್ಕೆ 200 ಕೋಟಿ ರೂ. ಮಂಜೂರಾತಿ ಪಡೆಯುತ್ತೇನೆ” ಎಂದರು.

ಜನವರಿ 1, 1818 ರಂದು ನಡೆದ ಕೋರೆಗಾಂವ್ ಕದನವನ್ನು ಸ್ಮರಿಸಲು ಕೋರೆಗಾಂವ್ ಭೀಮಾದಲ್ಲಿ ಪ್ರತಿವರ್ಷ ಶೌರ್ಯ ದಿನ ಆಚರಣೆ ಮಾಡಲಾಗುತ್ತದೆ. ಭೀಮಾ-ಕೋರೆಗಾಂವ್ ಯುದ್ದದಲ್ಲಿ 500 ಮಹಾರ್ ಸೈನಿಕರು ಸೇರಿದಂತೆ 834 ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಯೋಧರು ಪೇಶ್ವೆಯ 28,000 ಶಕ್ತಿಶಾಲಿ ಯೋಧರನ್ನು ಸೋಲಿಸಿದ್ದರು. ಈ ವಿಜಯದ ನೆನಪಿಗೆ ಬ್ರಿಟಿಷರು ವಿಜಯ ಸ್ತಂಭವನ್ನು ಸ್ಥಾಪಿಸಿದರು. ಅದು ಇಂದು ದಲಿತರ ಹೆಮ್ಮೆಯ ಸಂಕೇತವಾಗಿ ನಿಂತಿದೆ.

ವಂಚಿತ್ ಬಹುಜನ ಅಗಾಧಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್, ಸಚಿವರಾದ ದತ್ತಾತ್ರಯ ಭರ್ನೆ, ಆನಂದರಾಜ್ ಅಂಬೇಡ್ಕರ್, ರಾಜ್ಯ ಸಚಿವೆ ಮಾಧುರಿ ಮಿಸಾಲ್ ಮತ್ತು ಇತರ ಮುಖಂಡರು ಕೋರೆಗಾಂವ್ ಭೀಮಾದಲ್ಲಿ ಬುಧವಾರ (ಜ.1) ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ವಿಜಯಸ್ತಂಭದ ಬಳಿಗೆ ಆಗಮಿಸಿದ್ದಕ್ಕೆ ಆನಂದರಾಜ್ ಅಂಬೇಡ್ಕರ್ ಬೇಸರ ವ್ಯಕ್ತಪಡಿಸಿದರು. “ಜನರು ಮತ ಹಾಕಿದ್ದರಿಂದ ಅವರು ಈಗ ಉನ್ನತ ಹುದ್ದೆಗೇರಿದ್ದಾರೆ. ಅವರಿಗೆ ಈ ದಿನ ಮತ್ತು ಜಾಗ ಮಹತ್ವದ್ದಾಗಿದ್ದರೆ ಇಲ್ಲಿಗೆ ಬರುತ್ತಿದ್ದರು. ಸಾಮಾನ್ಯ ಜನರು ಕರೆಯದೆ ಪ್ರತಿವರ್ಷ ಇಲ್ಲಿಗೆ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.

ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗನಾಗಿರುವ ಆನಂದರಾಜ್ ಅಂಬೇಡ್ಕರ್ ಅವರು ಅಂಬೇಡ್ಕರ್‌ವಾದಿ ಸಂಘಟನೆ ರಿಪಬ್ಲಿಕನ್ ಸೇನೆಯ ಸ್ಥಾಪಕರಾಗಿದ್ದಾರೆ.

ಬಿಗಿ ಭದ್ರತೆ, ಅಗತ್ಯ ವ್ಯವಸ್ಥೆ 

ಪ್ರತಿ ವರ್ಷ ಜನವರಿ 1 ರಂದು ಕೋರೆಗಾಂವ್ ಭೀಮಾಗೆ ಕನಿಷ್ಠ ಎಂಟರಿಂದ 10 ಲಕ್ಷ ಜನರು ಆಗಮಿಸುತ್ತಾರೆ. ಬುಧವಾರ ವಿಶೇಷ ವ್ಯವಸ್ಥೆಗಳ ಭಾಗವಾಗಿ 5000 ಪೊಲೀಸ್ ಸಿಬ್ಬಂದಿ 2,000 ಗೃಹರಕ್ಷಕ ಸಿಬ್ಬಂದಿ, ರಾಜ್ಯ ಮೀಸಲು ಪೊಲೀಸ್ ಪಡೆ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BBDS)ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಇದರ ಜೊತೆಗೆ ಸಿಸಿಟಿವಿ ಕ್ಯಾಮರಾ ಮತ್ತು ಮುಖ ಗುರುತಿಸುವಿಕೆಯ ಕ್ಯಾಮಾರಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಮೂಲಕ ಜನಸಂದಣಿ ಮೇಲೆ ಕಣ್ಣಿಡಲಾಗಿತ್ತು. ವಾಹನ ಪಾರ್ಕಿಗ್‌ಗೆ ಜಾಗದ ವ್ಯವಸ್ಥೆ ಮಾಡಲಾಗಿತ್ತು. ತುರ್ತು ಸಂದರ್ಭಗಳಿಗೆ ಆಂಬ್ಯುಲೆನ್ಸ್, ಅಗ್ನಿಶಾಮಕ ತಂಡ ಸ್ಥಳದಲ್ಲಿತ್ತು.

ಇದನ್ನೂ ಓದಿ : ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...