Homeಮುಖಪುಟಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

ಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

- Advertisement -
- Advertisement -

ದಲಿತರ ಸ್ವಾಭಿಮಾನ ಮತ್ತು ಅಸ್ಮಿತೆಯ 1818ರ ಭೀಮಾ-ಕೋರೆಗಾಂವ್ ಯುದ್ದದ ನೆನಪಿನಲ್ಲಿ ಬುಧವಾರ (ಜ.1) ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕೋರೆಗಾಂವ್‌ ಭೀಮಾ ಗ್ರಾಮದಲ್ಲಿ 207ನೇ ‘ಶೌರ್ಯ ದಿನ’ ಆಚರಣೆ ನಡೆಯಿತು.

ರಾಜಕೀಯ ನಾಯಕರು, ಸಮುದಾಯದ ಮುಖಂಡರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಭೀಮಾ-ಕೋರೆಗಾಂವ್ ‘ವಿಜಯಸ್ತಂಭ’ದ ಬಳಿ ಜಮಾಯಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ‘ವಿಜಯಸ್ತಂಭ’ದ ಪ್ರದೇಶದ ಅಭಿವೃದ್ದಿ ಮತ್ತು ವಿಸ್ತರಣೆಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆಯಿಟ್ಟರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಠವಳೆ, “ಈ ದಿನ, ನಮ್ಮ ಜನರು ಪೇಶ್ವೆಗಳೊಂದಿಗೆ ಹೋರಾಡಿದರು. ಈ ಕಂಬವು ಅವರ ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಪ್ರತಿ ವರ್ಷ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಈ ಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಈಗ ದೇಶದ ವಿವಿಧ ಭಾಗಗಳ ಜನರು ಇಲ್ಲಿಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ವಿಜಯಸ್ತಂಭದ ಸುತ್ತ ಬೃಹತ್ ಸ್ಮಾರಕ ನಿರ್ಮಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಆದರೆ, ಕಾಮಗಾರಿ ಪೂರ್ಣಗೊಂಡಿಲ್ಲ. ನಾನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಸ್ಮಾರಕಕ್ಕೆ 200 ಕೋಟಿ ರೂ. ಮಂಜೂರಾತಿ ಪಡೆಯುತ್ತೇನೆ” ಎಂದರು.

ಜನವರಿ 1, 1818 ರಂದು ನಡೆದ ಕೋರೆಗಾಂವ್ ಕದನವನ್ನು ಸ್ಮರಿಸಲು ಕೋರೆಗಾಂವ್ ಭೀಮಾದಲ್ಲಿ ಪ್ರತಿವರ್ಷ ಶೌರ್ಯ ದಿನ ಆಚರಣೆ ಮಾಡಲಾಗುತ್ತದೆ. ಭೀಮಾ-ಕೋರೆಗಾಂವ್ ಯುದ್ದದಲ್ಲಿ 500 ಮಹಾರ್ ಸೈನಿಕರು ಸೇರಿದಂತೆ 834 ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಯೋಧರು ಪೇಶ್ವೆಯ 28,000 ಶಕ್ತಿಶಾಲಿ ಯೋಧರನ್ನು ಸೋಲಿಸಿದ್ದರು. ಈ ವಿಜಯದ ನೆನಪಿಗೆ ಬ್ರಿಟಿಷರು ವಿಜಯ ಸ್ತಂಭವನ್ನು ಸ್ಥಾಪಿಸಿದರು. ಅದು ಇಂದು ದಲಿತರ ಹೆಮ್ಮೆಯ ಸಂಕೇತವಾಗಿ ನಿಂತಿದೆ.

ವಂಚಿತ್ ಬಹುಜನ ಅಗಾಧಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್, ಸಚಿವರಾದ ದತ್ತಾತ್ರಯ ಭರ್ನೆ, ಆನಂದರಾಜ್ ಅಂಬೇಡ್ಕರ್, ರಾಜ್ಯ ಸಚಿವೆ ಮಾಧುರಿ ಮಿಸಾಲ್ ಮತ್ತು ಇತರ ಮುಖಂಡರು ಕೋರೆಗಾಂವ್ ಭೀಮಾದಲ್ಲಿ ಬುಧವಾರ (ಜ.1) ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ವಿಜಯಸ್ತಂಭದ ಬಳಿಗೆ ಆಗಮಿಸಿದ್ದಕ್ಕೆ ಆನಂದರಾಜ್ ಅಂಬೇಡ್ಕರ್ ಬೇಸರ ವ್ಯಕ್ತಪಡಿಸಿದರು. “ಜನರು ಮತ ಹಾಕಿದ್ದರಿಂದ ಅವರು ಈಗ ಉನ್ನತ ಹುದ್ದೆಗೇರಿದ್ದಾರೆ. ಅವರಿಗೆ ಈ ದಿನ ಮತ್ತು ಜಾಗ ಮಹತ್ವದ್ದಾಗಿದ್ದರೆ ಇಲ್ಲಿಗೆ ಬರುತ್ತಿದ್ದರು. ಸಾಮಾನ್ಯ ಜನರು ಕರೆಯದೆ ಪ್ರತಿವರ್ಷ ಇಲ್ಲಿಗೆ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.

ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗನಾಗಿರುವ ಆನಂದರಾಜ್ ಅಂಬೇಡ್ಕರ್ ಅವರು ಅಂಬೇಡ್ಕರ್‌ವಾದಿ ಸಂಘಟನೆ ರಿಪಬ್ಲಿಕನ್ ಸೇನೆಯ ಸ್ಥಾಪಕರಾಗಿದ್ದಾರೆ.

ಬಿಗಿ ಭದ್ರತೆ, ಅಗತ್ಯ ವ್ಯವಸ್ಥೆ 

ಪ್ರತಿ ವರ್ಷ ಜನವರಿ 1 ರಂದು ಕೋರೆಗಾಂವ್ ಭೀಮಾಗೆ ಕನಿಷ್ಠ ಎಂಟರಿಂದ 10 ಲಕ್ಷ ಜನರು ಆಗಮಿಸುತ್ತಾರೆ. ಬುಧವಾರ ವಿಶೇಷ ವ್ಯವಸ್ಥೆಗಳ ಭಾಗವಾಗಿ 5000 ಪೊಲೀಸ್ ಸಿಬ್ಬಂದಿ 2,000 ಗೃಹರಕ್ಷಕ ಸಿಬ್ಬಂದಿ, ರಾಜ್ಯ ಮೀಸಲು ಪೊಲೀಸ್ ಪಡೆ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BBDS)ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಇದರ ಜೊತೆಗೆ ಸಿಸಿಟಿವಿ ಕ್ಯಾಮರಾ ಮತ್ತು ಮುಖ ಗುರುತಿಸುವಿಕೆಯ ಕ್ಯಾಮಾರಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಮೂಲಕ ಜನಸಂದಣಿ ಮೇಲೆ ಕಣ್ಣಿಡಲಾಗಿತ್ತು. ವಾಹನ ಪಾರ್ಕಿಗ್‌ಗೆ ಜಾಗದ ವ್ಯವಸ್ಥೆ ಮಾಡಲಾಗಿತ್ತು. ತುರ್ತು ಸಂದರ್ಭಗಳಿಗೆ ಆಂಬ್ಯುಲೆನ್ಸ್, ಅಗ್ನಿಶಾಮಕ ತಂಡ ಸ್ಥಳದಲ್ಲಿತ್ತು.

ಇದನ್ನೂ ಓದಿ : ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...