Homeಮುಖಪುಟಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

ಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

- Advertisement -
- Advertisement -

ದಲಿತರ ಸ್ವಾಭಿಮಾನ ಮತ್ತು ಅಸ್ಮಿತೆಯ 1818ರ ಭೀಮಾ-ಕೋರೆಗಾಂವ್ ಯುದ್ದದ ನೆನಪಿನಲ್ಲಿ ಬುಧವಾರ (ಜ.1) ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕೋರೆಗಾಂವ್‌ ಭೀಮಾ ಗ್ರಾಮದಲ್ಲಿ 207ನೇ ‘ಶೌರ್ಯ ದಿನ’ ಆಚರಣೆ ನಡೆಯಿತು.

ರಾಜಕೀಯ ನಾಯಕರು, ಸಮುದಾಯದ ಮುಖಂಡರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಭೀಮಾ-ಕೋರೆಗಾಂವ್ ‘ವಿಜಯಸ್ತಂಭ’ದ ಬಳಿ ಜಮಾಯಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ‘ವಿಜಯಸ್ತಂಭ’ದ ಪ್ರದೇಶದ ಅಭಿವೃದ್ದಿ ಮತ್ತು ವಿಸ್ತರಣೆಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆಯಿಟ್ಟರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಠವಳೆ, “ಈ ದಿನ, ನಮ್ಮ ಜನರು ಪೇಶ್ವೆಗಳೊಂದಿಗೆ ಹೋರಾಡಿದರು. ಈ ಕಂಬವು ಅವರ ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಪ್ರತಿ ವರ್ಷ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಈ ಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಈಗ ದೇಶದ ವಿವಿಧ ಭಾಗಗಳ ಜನರು ಇಲ್ಲಿಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ವಿಜಯಸ್ತಂಭದ ಸುತ್ತ ಬೃಹತ್ ಸ್ಮಾರಕ ನಿರ್ಮಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಆದರೆ, ಕಾಮಗಾರಿ ಪೂರ್ಣಗೊಂಡಿಲ್ಲ. ನಾನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಸ್ಮಾರಕಕ್ಕೆ 200 ಕೋಟಿ ರೂ. ಮಂಜೂರಾತಿ ಪಡೆಯುತ್ತೇನೆ” ಎಂದರು.

ಜನವರಿ 1, 1818 ರಂದು ನಡೆದ ಕೋರೆಗಾಂವ್ ಕದನವನ್ನು ಸ್ಮರಿಸಲು ಕೋರೆಗಾಂವ್ ಭೀಮಾದಲ್ಲಿ ಪ್ರತಿವರ್ಷ ಶೌರ್ಯ ದಿನ ಆಚರಣೆ ಮಾಡಲಾಗುತ್ತದೆ. ಭೀಮಾ-ಕೋರೆಗಾಂವ್ ಯುದ್ದದಲ್ಲಿ 500 ಮಹಾರ್ ಸೈನಿಕರು ಸೇರಿದಂತೆ 834 ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಯೋಧರು ಪೇಶ್ವೆಯ 28,000 ಶಕ್ತಿಶಾಲಿ ಯೋಧರನ್ನು ಸೋಲಿಸಿದ್ದರು. ಈ ವಿಜಯದ ನೆನಪಿಗೆ ಬ್ರಿಟಿಷರು ವಿಜಯ ಸ್ತಂಭವನ್ನು ಸ್ಥಾಪಿಸಿದರು. ಅದು ಇಂದು ದಲಿತರ ಹೆಮ್ಮೆಯ ಸಂಕೇತವಾಗಿ ನಿಂತಿದೆ.

ವಂಚಿತ್ ಬಹುಜನ ಅಗಾಧಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್, ಸಚಿವರಾದ ದತ್ತಾತ್ರಯ ಭರ್ನೆ, ಆನಂದರಾಜ್ ಅಂಬೇಡ್ಕರ್, ರಾಜ್ಯ ಸಚಿವೆ ಮಾಧುರಿ ಮಿಸಾಲ್ ಮತ್ತು ಇತರ ಮುಖಂಡರು ಕೋರೆಗಾಂವ್ ಭೀಮಾದಲ್ಲಿ ಬುಧವಾರ (ಜ.1) ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ವಿಜಯಸ್ತಂಭದ ಬಳಿಗೆ ಆಗಮಿಸಿದ್ದಕ್ಕೆ ಆನಂದರಾಜ್ ಅಂಬೇಡ್ಕರ್ ಬೇಸರ ವ್ಯಕ್ತಪಡಿಸಿದರು. “ಜನರು ಮತ ಹಾಕಿದ್ದರಿಂದ ಅವರು ಈಗ ಉನ್ನತ ಹುದ್ದೆಗೇರಿದ್ದಾರೆ. ಅವರಿಗೆ ಈ ದಿನ ಮತ್ತು ಜಾಗ ಮಹತ್ವದ್ದಾಗಿದ್ದರೆ ಇಲ್ಲಿಗೆ ಬರುತ್ತಿದ್ದರು. ಸಾಮಾನ್ಯ ಜನರು ಕರೆಯದೆ ಪ್ರತಿವರ್ಷ ಇಲ್ಲಿಗೆ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.

ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗನಾಗಿರುವ ಆನಂದರಾಜ್ ಅಂಬೇಡ್ಕರ್ ಅವರು ಅಂಬೇಡ್ಕರ್‌ವಾದಿ ಸಂಘಟನೆ ರಿಪಬ್ಲಿಕನ್ ಸೇನೆಯ ಸ್ಥಾಪಕರಾಗಿದ್ದಾರೆ.

ಬಿಗಿ ಭದ್ರತೆ, ಅಗತ್ಯ ವ್ಯವಸ್ಥೆ 

ಪ್ರತಿ ವರ್ಷ ಜನವರಿ 1 ರಂದು ಕೋರೆಗಾಂವ್ ಭೀಮಾಗೆ ಕನಿಷ್ಠ ಎಂಟರಿಂದ 10 ಲಕ್ಷ ಜನರು ಆಗಮಿಸುತ್ತಾರೆ. ಬುಧವಾರ ವಿಶೇಷ ವ್ಯವಸ್ಥೆಗಳ ಭಾಗವಾಗಿ 5000 ಪೊಲೀಸ್ ಸಿಬ್ಬಂದಿ 2,000 ಗೃಹರಕ್ಷಕ ಸಿಬ್ಬಂದಿ, ರಾಜ್ಯ ಮೀಸಲು ಪೊಲೀಸ್ ಪಡೆ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BBDS)ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಇದರ ಜೊತೆಗೆ ಸಿಸಿಟಿವಿ ಕ್ಯಾಮರಾ ಮತ್ತು ಮುಖ ಗುರುತಿಸುವಿಕೆಯ ಕ್ಯಾಮಾರಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಮೂಲಕ ಜನಸಂದಣಿ ಮೇಲೆ ಕಣ್ಣಿಡಲಾಗಿತ್ತು. ವಾಹನ ಪಾರ್ಕಿಗ್‌ಗೆ ಜಾಗದ ವ್ಯವಸ್ಥೆ ಮಾಡಲಾಗಿತ್ತು. ತುರ್ತು ಸಂದರ್ಭಗಳಿಗೆ ಆಂಬ್ಯುಲೆನ್ಸ್, ಅಗ್ನಿಶಾಮಕ ತಂಡ ಸ್ಥಳದಲ್ಲಿತ್ತು.

ಇದನ್ನೂ ಓದಿ : ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...