Homeಮುಖಪುಟಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

ಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

- Advertisement -
- Advertisement -

ದಲಿತರ ಸ್ವಾಭಿಮಾನ ಮತ್ತು ಅಸ್ಮಿತೆಯ 1818ರ ಭೀಮಾ-ಕೋರೆಗಾಂವ್ ಯುದ್ದದ ನೆನಪಿನಲ್ಲಿ ಬುಧವಾರ (ಜ.1) ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕೋರೆಗಾಂವ್‌ ಭೀಮಾ ಗ್ರಾಮದಲ್ಲಿ 207ನೇ ‘ಶೌರ್ಯ ದಿನ’ ಆಚರಣೆ ನಡೆಯಿತು.

ರಾಜಕೀಯ ನಾಯಕರು, ಸಮುದಾಯದ ಮುಖಂಡರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಭೀಮಾ-ಕೋರೆಗಾಂವ್ ‘ವಿಜಯಸ್ತಂಭ’ದ ಬಳಿ ಜಮಾಯಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ‘ವಿಜಯಸ್ತಂಭ’ದ ಪ್ರದೇಶದ ಅಭಿವೃದ್ದಿ ಮತ್ತು ವಿಸ್ತರಣೆಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆಯಿಟ್ಟರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಠವಳೆ, “ಈ ದಿನ, ನಮ್ಮ ಜನರು ಪೇಶ್ವೆಗಳೊಂದಿಗೆ ಹೋರಾಡಿದರು. ಈ ಕಂಬವು ಅವರ ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಪ್ರತಿ ವರ್ಷ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಈ ಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಈಗ ದೇಶದ ವಿವಿಧ ಭಾಗಗಳ ಜನರು ಇಲ್ಲಿಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ವಿಜಯಸ್ತಂಭದ ಸುತ್ತ ಬೃಹತ್ ಸ್ಮಾರಕ ನಿರ್ಮಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಆದರೆ, ಕಾಮಗಾರಿ ಪೂರ್ಣಗೊಂಡಿಲ್ಲ. ನಾನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಸ್ಮಾರಕಕ್ಕೆ 200 ಕೋಟಿ ರೂ. ಮಂಜೂರಾತಿ ಪಡೆಯುತ್ತೇನೆ” ಎಂದರು.

ಜನವರಿ 1, 1818 ರಂದು ನಡೆದ ಕೋರೆಗಾಂವ್ ಕದನವನ್ನು ಸ್ಮರಿಸಲು ಕೋರೆಗಾಂವ್ ಭೀಮಾದಲ್ಲಿ ಪ್ರತಿವರ್ಷ ಶೌರ್ಯ ದಿನ ಆಚರಣೆ ಮಾಡಲಾಗುತ್ತದೆ. ಭೀಮಾ-ಕೋರೆಗಾಂವ್ ಯುದ್ದದಲ್ಲಿ 500 ಮಹಾರ್ ಸೈನಿಕರು ಸೇರಿದಂತೆ 834 ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಯೋಧರು ಪೇಶ್ವೆಯ 28,000 ಶಕ್ತಿಶಾಲಿ ಯೋಧರನ್ನು ಸೋಲಿಸಿದ್ದರು. ಈ ವಿಜಯದ ನೆನಪಿಗೆ ಬ್ರಿಟಿಷರು ವಿಜಯ ಸ್ತಂಭವನ್ನು ಸ್ಥಾಪಿಸಿದರು. ಅದು ಇಂದು ದಲಿತರ ಹೆಮ್ಮೆಯ ಸಂಕೇತವಾಗಿ ನಿಂತಿದೆ.

ವಂಚಿತ್ ಬಹುಜನ ಅಗಾಧಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್, ಸಚಿವರಾದ ದತ್ತಾತ್ರಯ ಭರ್ನೆ, ಆನಂದರಾಜ್ ಅಂಬೇಡ್ಕರ್, ರಾಜ್ಯ ಸಚಿವೆ ಮಾಧುರಿ ಮಿಸಾಲ್ ಮತ್ತು ಇತರ ಮುಖಂಡರು ಕೋರೆಗಾಂವ್ ಭೀಮಾದಲ್ಲಿ ಬುಧವಾರ (ಜ.1) ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ವಿಜಯಸ್ತಂಭದ ಬಳಿಗೆ ಆಗಮಿಸಿದ್ದಕ್ಕೆ ಆನಂದರಾಜ್ ಅಂಬೇಡ್ಕರ್ ಬೇಸರ ವ್ಯಕ್ತಪಡಿಸಿದರು. “ಜನರು ಮತ ಹಾಕಿದ್ದರಿಂದ ಅವರು ಈಗ ಉನ್ನತ ಹುದ್ದೆಗೇರಿದ್ದಾರೆ. ಅವರಿಗೆ ಈ ದಿನ ಮತ್ತು ಜಾಗ ಮಹತ್ವದ್ದಾಗಿದ್ದರೆ ಇಲ್ಲಿಗೆ ಬರುತ್ತಿದ್ದರು. ಸಾಮಾನ್ಯ ಜನರು ಕರೆಯದೆ ಪ್ರತಿವರ್ಷ ಇಲ್ಲಿಗೆ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.

ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗನಾಗಿರುವ ಆನಂದರಾಜ್ ಅಂಬೇಡ್ಕರ್ ಅವರು ಅಂಬೇಡ್ಕರ್‌ವಾದಿ ಸಂಘಟನೆ ರಿಪಬ್ಲಿಕನ್ ಸೇನೆಯ ಸ್ಥಾಪಕರಾಗಿದ್ದಾರೆ.

ಬಿಗಿ ಭದ್ರತೆ, ಅಗತ್ಯ ವ್ಯವಸ್ಥೆ 

ಪ್ರತಿ ವರ್ಷ ಜನವರಿ 1 ರಂದು ಕೋರೆಗಾಂವ್ ಭೀಮಾಗೆ ಕನಿಷ್ಠ ಎಂಟರಿಂದ 10 ಲಕ್ಷ ಜನರು ಆಗಮಿಸುತ್ತಾರೆ. ಬುಧವಾರ ವಿಶೇಷ ವ್ಯವಸ್ಥೆಗಳ ಭಾಗವಾಗಿ 5000 ಪೊಲೀಸ್ ಸಿಬ್ಬಂದಿ 2,000 ಗೃಹರಕ್ಷಕ ಸಿಬ್ಬಂದಿ, ರಾಜ್ಯ ಮೀಸಲು ಪೊಲೀಸ್ ಪಡೆ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BBDS)ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಇದರ ಜೊತೆಗೆ ಸಿಸಿಟಿವಿ ಕ್ಯಾಮರಾ ಮತ್ತು ಮುಖ ಗುರುತಿಸುವಿಕೆಯ ಕ್ಯಾಮಾರಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಮೂಲಕ ಜನಸಂದಣಿ ಮೇಲೆ ಕಣ್ಣಿಡಲಾಗಿತ್ತು. ವಾಹನ ಪಾರ್ಕಿಗ್‌ಗೆ ಜಾಗದ ವ್ಯವಸ್ಥೆ ಮಾಡಲಾಗಿತ್ತು. ತುರ್ತು ಸಂದರ್ಭಗಳಿಗೆ ಆಂಬ್ಯುಲೆನ್ಸ್, ಅಗ್ನಿಶಾಮಕ ತಂಡ ಸ್ಥಳದಲ್ಲಿತ್ತು.

ಇದನ್ನೂ ಓದಿ : ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...