Homeಚಳವಳಿರೈತರ ಗುಣ ಅವಳಡಿಸಿಕೊಳ್ಳೋಣ: ತೇಜಸ್ವಿ ಓದು ಅಭಿಯಾನದಲ್ಲಿ ಡಾ. ನರೇಂದ್ರ ರೈ ದೇರ್ಲ ಕರೆ

ರೈತರ ಗುಣ ಅವಳಡಿಸಿಕೊಳ್ಳೋಣ: ತೇಜಸ್ವಿ ಓದು ಅಭಿಯಾನದಲ್ಲಿ ಡಾ. ನರೇಂದ್ರ ರೈ ದೇರ್ಲ ಕರೆ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ರೈತರ ಹೋರಾಟವು ಕೇವಲ ರೈತರ ಅಸ್ತಿತ್ವದ ಪ್ರಶ್ನೆಯಲ್ಲ ಇದು ಭೂಮಿಯ ಅಸ್ತಿತ್ವದ ಪ್ರಶ್ನೆ ಎಂದು ಪ್ರಾಧ್ಯಾಪಕ, ಲೇಖಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು.

ಕೋಶ ಓದು ದೇಶ ನೋಡು ಬಳಗ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ (ರಿ), ಸಹಮತ, ಸಹಯಾನದ ಸಹಭಾಗಿತ್ವದಲ್ಲಿ ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ‘ತೇಜಸ್ವಿ ಓದು’ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ರೈತ ಗುಣವಿರುವ ಕೊನೆಯ ತಲೆಮಾರು ಇದೆ ಎಂಬುದು ನನ್ನ ಭಾವನೆ. ನಾವು ರೈತರ ಗುಣ ಅವಳಡಿಸಿಕೊಳ್ಳಬೇಕಾದರೆ ನೇಗಿಲು ಹಿಡಿದು, ಹೊಲ ಹೊತ್ತು ಜೀವನ ನಡೆಸಬೇಕಾಗಿಲ್ಲ. ರೈತರ ದಾರಿಯ ಅನ್ವೇಷಣೆಯೇ ರೈತ ಗುಣ ಎಂದರು.

ಮುಖದ ಎದುರು ಮುಖ ಕೊಟ್ಟು ಮಾತನಾಡಲಾಗದ, ಸತ್ಯವನ್ನು ಸುಳ್ಳಾಗಿಸುವ, ಸುಳ್ಳನ್ನು ಸತ್ಯವಾಗಿಸುವ ಈ ಕಾಲದಲ್ಲಿ ಓದುವವರು ಇದ್ದಾರೆ, ಅದರಲ್ಲೂ ತೇಜಸ್ವಿಯವರನ್ನು ಓದುವ ಯುವಪೀಳಿಗೆಯಿದೆ ಎಂಬುದು ಸಂತಸದ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು.

ತೇಜಸ್ವಿಯವರು ಇಲ್ಲದ ಲೋಕದಲ್ಲಿ ನಾನು ಇರಲಾರೆ ಎಂಬ ಅನಂತಮೂರ್ತಿಯವರ ಮಾತನ್ನು ನೆನಪಿಸಿಕೊಂಡ ಅವರು, ಪ್ರಸ್ತುತ ಅನಂತಮೂರ್ತಿ, ಲಂಕೇಶ್, ಸುಬ್ಬಣ್ಣ, ರಾಮ್‍ದಾಸ್, ತೇಜಸ್ವಿಯವರಂತಹ ಯುವ ಪೀಳಿಗೆಯನ್ನು ತಿದ್ದುವ, ರಿಪೇರಿ ಮಾಡುವ ಸಂಸ್ಕೃತಿ ಇಲ್ಲದೆ ನಮ್ಮ ಪ್ರಶ್ನೆ, ತಕರಾರು ಇಂಗಿ ಹೋಗುತ್ತಿದೆ ಎಂದರು.

ನಾವೀಗ ನಮ್ಮ ದೇಶದಲ್ಲಿ ಎಷ್ಟು ಅಣು ಬಾಂಬ್‍ಗಳಿವೆ, ಎಷ್ಟು ಯುದ್ಧ ವಿಮಾನಗಳಿವೆ. ಬೇರೆ ದೇಶದಲ್ಲಿ ಎಷ್ಟಿವೆ ಎಂಬುದನ್ನು ಲೆಕ್ಕ ಹಾಕಿಕೊಂಡು ಖುಷಿ ಪಡುತ್ತೇವೆ. ಆದರೆ, ನಾವು ನಮ್ಮ ಭೂಮಿಗೆ ಬೇಕಾದಷ್ಟು ನೀರು, ಆಮ್ಲಜನಕ, ಗಾಳಿ ಇದೆಯೇ ಎಂಬುದರ ಚಿಂತನೆ ನಡೆಸಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಶ ಓದು ದೇಶ ನೋಡು ಬಳಗದ ಮುನೀರ್ ಕಾಟಿಪಳ್ಳ, “ಯುವ ತಲೆಮಾರು ಓದಿನಿಂದ ವಿಮುಖ ಹೊಂದಿ ಸಾಮಾಜಿಕ ಜಾಲತಾಣದ ವಿಚಾರವನ್ನೇ ತಲೆಗೆ ತುಂಬಿಕೊಳ್ಳುತ್ತಿದ್ದಾರೆ. ನಾವು ಅದೇ ಸಾಮಾಜಿಕ ಜಾಲತಾಣವನ್ನು ಬಳಸಿ ಓದು ಅಭಿಯಾನ ಆರಂಭಿಸಿದ್ದು ಯುವ ಜನರಲ್ಲಿ ಓದಿನ ಹವ್ಯಾಸ ಮೂಡಿಸುವ ಬೆಳೆಸುವ ಪ್ರಯತ್ನ ನಡೆಸುತ್ತಿದ್ದೇವೆ. ಈಗಾಗಲೇ ಈ ಓದು ಅಭಿಯಾನ ಹಲವಾರು ಜನರನ್ನು ಸೆಳೆದಿದ್ದು, ಚರ್ಚೆಗಳು ನಡೆದಿದೆ” ಎಂದರು.

ತೇಜಸ್ವಿಯವರು ಪ್ರಸ್ತುತ ನಡೆಯುತ್ತಿರುವ ಕೋಮುಸಂಘರ್ಷ ಮೊದಲಾದವುಗಳನ್ನು ತಮ್ಮ ಕೃತಿಯ ಮೂಲಕ ಈ ಹಿಂದೆಯೇ ತಿಳಿಸಿದ್ದಾರೆ. ಓದಿನಿಂದ ನಾವು ಸೈದ್ಧಾಂತಿಕ ಸ್ಪಷ್ಟತೆ ಪಡೆದು ದೇಶದ ಪ್ರಸ್ತುತ ಚಳುವಳಿಯಲ್ಲಿ ಕೈ ಜೋಡಿಸೋಣ ಎಂದರು.

ಕಾರ್ಯಕ್ರಮದಲ್ಲಿ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿ, ಲೇಖಕ ಕೆ.ಪಿ. ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಡಾ. ರಮೇಶ್, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ಆರ್. ರಾಘವೇಂದ್ರ ಉಪಸ್ಥಿತರಿದ್ದರು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...