Homeಚಳವಳಿರೈತರ ಗುಣ ಅವಳಡಿಸಿಕೊಳ್ಳೋಣ: ತೇಜಸ್ವಿ ಓದು ಅಭಿಯಾನದಲ್ಲಿ ಡಾ. ನರೇಂದ್ರ ರೈ ದೇರ್ಲ ಕರೆ

ರೈತರ ಗುಣ ಅವಳಡಿಸಿಕೊಳ್ಳೋಣ: ತೇಜಸ್ವಿ ಓದು ಅಭಿಯಾನದಲ್ಲಿ ಡಾ. ನರೇಂದ್ರ ರೈ ದೇರ್ಲ ಕರೆ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ರೈತರ ಹೋರಾಟವು ಕೇವಲ ರೈತರ ಅಸ್ತಿತ್ವದ ಪ್ರಶ್ನೆಯಲ್ಲ ಇದು ಭೂಮಿಯ ಅಸ್ತಿತ್ವದ ಪ್ರಶ್ನೆ ಎಂದು ಪ್ರಾಧ್ಯಾಪಕ, ಲೇಖಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು.

ಕೋಶ ಓದು ದೇಶ ನೋಡು ಬಳಗ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ (ರಿ), ಸಹಮತ, ಸಹಯಾನದ ಸಹಭಾಗಿತ್ವದಲ್ಲಿ ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ‘ತೇಜಸ್ವಿ ಓದು’ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ರೈತ ಗುಣವಿರುವ ಕೊನೆಯ ತಲೆಮಾರು ಇದೆ ಎಂಬುದು ನನ್ನ ಭಾವನೆ. ನಾವು ರೈತರ ಗುಣ ಅವಳಡಿಸಿಕೊಳ್ಳಬೇಕಾದರೆ ನೇಗಿಲು ಹಿಡಿದು, ಹೊಲ ಹೊತ್ತು ಜೀವನ ನಡೆಸಬೇಕಾಗಿಲ್ಲ. ರೈತರ ದಾರಿಯ ಅನ್ವೇಷಣೆಯೇ ರೈತ ಗುಣ ಎಂದರು.

ಮುಖದ ಎದುರು ಮುಖ ಕೊಟ್ಟು ಮಾತನಾಡಲಾಗದ, ಸತ್ಯವನ್ನು ಸುಳ್ಳಾಗಿಸುವ, ಸುಳ್ಳನ್ನು ಸತ್ಯವಾಗಿಸುವ ಈ ಕಾಲದಲ್ಲಿ ಓದುವವರು ಇದ್ದಾರೆ, ಅದರಲ್ಲೂ ತೇಜಸ್ವಿಯವರನ್ನು ಓದುವ ಯುವಪೀಳಿಗೆಯಿದೆ ಎಂಬುದು ಸಂತಸದ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು.

ತೇಜಸ್ವಿಯವರು ಇಲ್ಲದ ಲೋಕದಲ್ಲಿ ನಾನು ಇರಲಾರೆ ಎಂಬ ಅನಂತಮೂರ್ತಿಯವರ ಮಾತನ್ನು ನೆನಪಿಸಿಕೊಂಡ ಅವರು, ಪ್ರಸ್ತುತ ಅನಂತಮೂರ್ತಿ, ಲಂಕೇಶ್, ಸುಬ್ಬಣ್ಣ, ರಾಮ್‍ದಾಸ್, ತೇಜಸ್ವಿಯವರಂತಹ ಯುವ ಪೀಳಿಗೆಯನ್ನು ತಿದ್ದುವ, ರಿಪೇರಿ ಮಾಡುವ ಸಂಸ್ಕೃತಿ ಇಲ್ಲದೆ ನಮ್ಮ ಪ್ರಶ್ನೆ, ತಕರಾರು ಇಂಗಿ ಹೋಗುತ್ತಿದೆ ಎಂದರು.

ನಾವೀಗ ನಮ್ಮ ದೇಶದಲ್ಲಿ ಎಷ್ಟು ಅಣು ಬಾಂಬ್‍ಗಳಿವೆ, ಎಷ್ಟು ಯುದ್ಧ ವಿಮಾನಗಳಿವೆ. ಬೇರೆ ದೇಶದಲ್ಲಿ ಎಷ್ಟಿವೆ ಎಂಬುದನ್ನು ಲೆಕ್ಕ ಹಾಕಿಕೊಂಡು ಖುಷಿ ಪಡುತ್ತೇವೆ. ಆದರೆ, ನಾವು ನಮ್ಮ ಭೂಮಿಗೆ ಬೇಕಾದಷ್ಟು ನೀರು, ಆಮ್ಲಜನಕ, ಗಾಳಿ ಇದೆಯೇ ಎಂಬುದರ ಚಿಂತನೆ ನಡೆಸಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಶ ಓದು ದೇಶ ನೋಡು ಬಳಗದ ಮುನೀರ್ ಕಾಟಿಪಳ್ಳ, “ಯುವ ತಲೆಮಾರು ಓದಿನಿಂದ ವಿಮುಖ ಹೊಂದಿ ಸಾಮಾಜಿಕ ಜಾಲತಾಣದ ವಿಚಾರವನ್ನೇ ತಲೆಗೆ ತುಂಬಿಕೊಳ್ಳುತ್ತಿದ್ದಾರೆ. ನಾವು ಅದೇ ಸಾಮಾಜಿಕ ಜಾಲತಾಣವನ್ನು ಬಳಸಿ ಓದು ಅಭಿಯಾನ ಆರಂಭಿಸಿದ್ದು ಯುವ ಜನರಲ್ಲಿ ಓದಿನ ಹವ್ಯಾಸ ಮೂಡಿಸುವ ಬೆಳೆಸುವ ಪ್ರಯತ್ನ ನಡೆಸುತ್ತಿದ್ದೇವೆ. ಈಗಾಗಲೇ ಈ ಓದು ಅಭಿಯಾನ ಹಲವಾರು ಜನರನ್ನು ಸೆಳೆದಿದ್ದು, ಚರ್ಚೆಗಳು ನಡೆದಿದೆ” ಎಂದರು.

ತೇಜಸ್ವಿಯವರು ಪ್ರಸ್ತುತ ನಡೆಯುತ್ತಿರುವ ಕೋಮುಸಂಘರ್ಷ ಮೊದಲಾದವುಗಳನ್ನು ತಮ್ಮ ಕೃತಿಯ ಮೂಲಕ ಈ ಹಿಂದೆಯೇ ತಿಳಿಸಿದ್ದಾರೆ. ಓದಿನಿಂದ ನಾವು ಸೈದ್ಧಾಂತಿಕ ಸ್ಪಷ್ಟತೆ ಪಡೆದು ದೇಶದ ಪ್ರಸ್ತುತ ಚಳುವಳಿಯಲ್ಲಿ ಕೈ ಜೋಡಿಸೋಣ ಎಂದರು.

ಕಾರ್ಯಕ್ರಮದಲ್ಲಿ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿ, ಲೇಖಕ ಕೆ.ಪಿ. ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಡಾ. ರಮೇಶ್, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ಆರ್. ರಾಘವೇಂದ್ರ ಉಪಸ್ಥಿತರಿದ್ದರು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...