Homeಅಂತರಾಷ್ಟ್ರೀಯಕೊಸೊವೊ ಚುನಾವಣೆ: ಎಡಪಕ್ಷ ವೆಟೆವೆಂಡೋಸ್ಜೆಗೆ ಭರ್ಜರಿ ಜಯ

ಕೊಸೊವೊ ಚುನಾವಣೆ: ಎಡಪಕ್ಷ ವೆಟೆವೆಂಡೋಸ್ಜೆಗೆ ಭರ್ಜರಿ ಜಯ

ನಮ್ಮ ಆದ್ಯತೆ "ನ್ಯಾಯ ಮತ್ತು ಉದ್ಯೋಗಗಳು" ಎಂದು ಪ್ರಧಾನಿಯಾಗಲಿರುವ ಅಲ್ಬಿನ್ ಕುರ್ತಿ ಹೇಳಿದ್ದಾರೆ.

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ, ಆರ್ಥಿಕ ಹಿಂಜರಿತ ಮತ್ತು ಸೆರ್ಬಿಯಾದೊಂದಿಗೆ ಮಾತುಕತೆಗಳನ್ನು ಸ್ಥಗಿತಗೊಳಿಸಿದ ನಡುವೆ ನಡೆದ ಆರಂಭಿಕ ಚುನಾವಣೆಯಲ್ಲಿ ಕೊಸೊವೊದ ಎಡ ಪಕ್ಷ ವೆಟೆವೆಂಡೋಸ್ಜೆ ಸ್ಪಷ್ಟ ಗೆಲುವು ಸಾಧಿಸಿದೆ. ಪಕ್ಷದ ಮುಖಂಡ ಅಲ್ಬಿನ್ ಕುರ್ತಿ ಪ್ರಧಾನಿಯಾಗಲಿದ್ದಾರೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ಸೋಮವಾರ 98% ಮತ ಎಣಿಕೆ ಮುಗಿದಿದ್ದು, ಎಡಪಂಥೀಯ ನಿರ್ಣಯ ಚಳವಳಿ ಪಕ್ಷ ಎಂದು ಕರೆಯಲ್ಪಡುವ ವೆಟೆವೆಂಡೋಸ್ಜೆ 48% ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಕೊಸೊವೊದ ಸೆಂಟರ್-ರೈಟ್ ಡೆಮಾಕ್ರಟಿಕ್ ಪಾರ್ಟಿ ಅಥವಾ ಪಿಡಿಕೆ ಮತ್ತು ಕನ್ಸರ್ವೇಟಿವ್ ಆಡಳಿತದ ಕೊಸೊವೊದ ಡೆಮಾಕ್ರಟಿಕ್ ಲೀಗ್ ಅಥವಾ ಎಲ್ಡಿಕೆ ಎರಡೂ ಪಕ್ಷಗಳು ಸೋಲು ಅನುಭವಿಸಿವೆ.

ವೆಟೆವೆಂಡೋಸ್ಜೆ ಪಕ್ಷದ ಪ್ರಧಾನ ಮಂತ್ರಿಯಾಗುವ ನಿರೀಕ್ಷೆಯಿರುವ ನಾಯಕ ಅಲ್ಬಿನ್ ಕುರ್ತಿ ಮುಂದೆ “ದೇಶದ ಆರ್ಥಿಕತೆಯನ್ನು ಮೇಲೆತ್ತುವ, ಸಾಂಕ್ರಾಮಿಕ ರೋಗವನ್ನು ಎದುರಿಸುವ, ನಿರುದ್ಯೋಗವನ್ನು ಕಡಿಮೆ ಮಾಡುವ ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸವಾಲು ಇದೆ” ಎಂದು ಅಲ್‌ಜಜೀರಾ ವರದಿ ಮಾಡಿದೆ.

“ರಾಜ್ಯದ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ನ್ಯಾಯ ಮತ್ತು ಉದ್ಯೋಗಗಳಿಗಾಗಿ ನಾವು ಈ ಜನಾಭಿಪ್ರಾಯವನ್ನು ಗೆದ್ದಿದ್ದೇವೆ” ಎಂದು ಅಲ್ಬಿನ್ ಕುರ್ತಿ ಹೇಳಿದ್ದಾರೆ. “ನಮ್ಮ ಆದ್ಯತೆ ನ್ಯಾಯ ಮತ್ತು ಉದ್ಯೋಗಗಳು” ಎಂದು ಅವರು ಸಾರಿದ್ದಾರೆ.

ಕೊಸೊವೊದಾ 120 ಸ್ಥಾನಗಳ ಸಂಸತ್ತಿನಲ್ಲಿ ಅಲ್ಬಿನ್ ಕುರ್ತಿಗೆ ಅಗತ್ಯವಾದ 61 ಸ್ಥಾನಗಳು ದಕ್ಕಿಲ್ಲ. ಆದರೆ ಸೋತ ಮುಖ್ಯ ವಿರೋಧ ಪಕ್ಷಗಳೊಂದಿಗೆ ಯಾವುದೇ ಮೈತ್ರಿ ಇರುವುದಿಲ್ಲ, ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೊಸೊವೊ ದೇಶವು 2008 ರಲ್ಲಿ ಸೆರ್ಬಿಯಾದಿಂದ ಸ್ವಾತಂತ್ರ್ಯವನ್ನು ಘೋಷಿಸಿಕೊಂಡಿತು. ಹೆಚ್ಚಿನ ಪಾಶ್ಚಿಮಾತ್ಯ ರಾಷ್ಟ್ರಗಳು ಕೊಸೊವೊವನ್ನು ರಾಷ್ಟ್ರವೆಂದು ಒಪ್ಪಿಕೊಂಡಿವೆ. ಆದರೆ ಸೆರ್ಬಿಯಾ ಮತ್ತು ಅದರ ಮಿತ್ರ ರಾಷ್ಟ್ರಗಳಾದ ರಷ್ಯಾ ಮತ್ತು ಚೀನಾ ಇದನ್ನು ಒಪ್ಪುವುದಿಲ್ಲ.


ಇದನ್ನೂ ಓದಿ: ಜಗತ್ತಿನ ಎಲ್ಲ ಹೋರಾಟಗಳನ್ನು ಬೆಸೆಯುವ ಡಿಜಿಟಲ್ ಆಕ್ಟಿವಿಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...