Homeಮುಖಪುಟಕೋಟಾ ಆಸ್ಪತ್ರೆಯ ಮಕ್ಕಳ ಸಾವಿನ ಚರ್ಚೆಯ ಸುತ್ತ ಹೆಣೆದುಕೊಂಡಿದೆಯಾ ರಾಜಕೀಯ ವಿಷಸರ್ಪ!?

ಕೋಟಾ ಆಸ್ಪತ್ರೆಯ ಮಕ್ಕಳ ಸಾವಿನ ಚರ್ಚೆಯ ಸುತ್ತ ಹೆಣೆದುಕೊಂಡಿದೆಯಾ ರಾಜಕೀಯ ವಿಷಸರ್ಪ!?

- Advertisement -
- Advertisement -

ಮಕ್ಕಳ ಸಾವಿನ ಕುರಿತು ಹೇಳಿಕೆ ನೀಡುತ್ತಾ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ “ಮಕ್ಕಳು ಪ್ರತಿ ವರ್ಷ ಸಾಯ್ತಾರೆ. ಅದ್ರಲ್ಲಿ ಹೊಸದೇನೂ ಇಲ್ಲ” ಅಂತ ಹೇಳಿದ್ದು ನಿಜಕ್ಕೂ ಅಕ್ಷಮ್ಯ ಹೊಣೆಗೇಡಿ ಹೇಳಿಕೆ. ಆದ್ರೆ ಆ ಹೊಣೆಗೇಡಿ ಹೇಳಿಕೆಯಲ್ಲೂ ಸಣ್ಣದೊಂದು ಸತ್ಯ ಅಡಗಿರೋದನ್ನು ಆಸ್ಪತ್ರೆಯ ದಾಖಲೆಗಳೇ ರುಜುವಾತು ಮಾಡುತ್ತಿವೆ.

ರಾಜಸ್ತಾನದ ಕೋಟಾದಲ್ಲಿರುವ ಜೆಕೆ ಲೋನ್ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ತಿಂಗಳು ನೂರು ಮಕ್ಕಳು ಅಸುನೀಗಿದ್ದು ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‍ರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದರೆ, ರಾಷ್ಟ್ರೀಯ ನ್ಯೂಸ್ ಮೀಡಿಯಾಗಳು ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಚರ್ಚೆಗಳನ್ನು ನಡೆಸುತ್ತಿವೆ. ಹೌದು, ವಿರೋಧ ಪಕ್ಷ ಮತ್ತು ಸಂವಿಧಾನದ ನಾಲ್ಕನೇ ಆಯಾಮವಾದ ಮಾಧ್ಯಮ, ಸರ್ಕಾರವೊಂದರ ವೈಫಲ್ಯವನ್ನು ಹೀಗೆ ಪ್ರಶ್ನಿಸಲೇಬೇಕು. ಜಗತ್ತನ್ನೇ ನೋಡದ ಹಸುಗೂಸುಗಳು ತಾವು ಮಾಡದ ತಪ್ಪಿಗೆ ಕಣ್ಮುಚ್ಚುವಂತೆ ಆದದ್ದು ಅಕ್ಷಮ್ಯ ಅಪರಾಧ. ಹಿಂದೆ ಬಿಜೆಪಿ ಸಿಎಂ ಯೋಗಿ ಆದಿತ್ಯನಾಥರ ಉತ್ತರಪ್ರದೇಶದ ಗೋರಖ್‍ಪುರ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಿಲ್ಲದೆ 71 ನವಜಾತ ಶಿಶುಗಳು ಅಸುನೀಗಿದಾಗ ದೇಶ ತಲ್ಲಣಿಸಿದ್ದು ಇದೇ ಕಾರಣಕ್ಕೆ.

ಆದರೆ ರಾಜಸ್ಥಾನದ ಕೋಟಾ ಆಸ್ಪತ್ರೆಯ ಹಸುಗೂಸುಗಳ ಸಾವು ಚರ್ಚೆಗೆ ಬಂದಿರುವುದು ಇಂಥಾ ನೈಜ ಕಾಳಜಿಗಿಂತಲೂ ಹೆಚ್ಚಾಗಿ ರಾಜಕೀಯಪ್ರೇರಿತ ಕಾರಣಕ್ಕಾ ಎಂಬ ಅನುಮಾನ ಆಸ್ಪತ್ರೆಯ ಹಳೆಯ ರೆಕಾರ್ಡುಗಳನ್ನು ಪರಿಶೀಲಿಸಿದಾಗ ಮೂಡುತ್ತೆ. ಆಸ್ಪತ್ರೆಯ ದಾಖಲಾತಿಯ ಪ್ರಕಾರ 2019ರಲ್ಲಿ 963 ಮಕ್ಕಳು ಅಲ್ಲಿ ಅಸುನೀಗಿದ್ದಾರೆ. ಅವುಗಳಲ್ಲಿ ಬಹುಪಾಲು ನವಜಾತ ಶಿಶುಗಳು. ಅಚ್ಚರಿಯ ಸಂಗತಿಯೆಂದರೆ, ಕಳೆದ ಐದು ವರ್ಷಗಳ ಲೆಕ್ಕ ನೋಡಿದರೆ ಅಲ್ಲಿ ಇದೇ ಅತಿ ಕಡಿಮೆ ಮಕ್ಕಳು ಸತ್ತ ವರ್ಷ! 2014ರಿಂದ ಆ ಆಸ್ಪತ್ರೆಯಲ್ಲಿ ಸರಾಸರಿ ಪ್ರತಿವರ್ಷ 1,100 ಮಕ್ಕಳು ಅಸುನೀಗುತ್ತಲೇ ಬಂದಿದ್ದಾರೆ!

ಇವತ್ತಿನ ದುರ್ಗತಿ ಕಳೆದ ಐದು ವರ್ಷದಿಂದ ಸತತವಾಗಿ, ಅಂದರೆ ಬಿಜೆಪಿಯ ವಸುಂಧರಾ ರಾಜೆ ಸಿಎಂ ಆಗಿದ್ದ ಅವಧಿಯುದ್ದಕ್ಕೂ, ಇತ್ತಿ ಎನ್ನುವುದಾದರೆ ಇಷ್ಟುದಿನ ನ್ಯಾಷನಲ್ (ಗೋದಿ) ಮೀಡಿಯಾಗಳೇಕೆ ಇದರತ್ತ ಕುರುಡಾಗಿದ್ದವು? ಈಗ ಕಾಂಗ್ರೆಸ್ ಅಧಿಕಾರಕ್ಕೇರಿದ ಮೇಲೆಯೇ, ಆ ಆಸ್ಪತ್ರೆಯ ಅವ್ಯವಸ್ಥೆ ಮೀಡಿಯಾಗಳ ಗಮನ ಸೆಳೆದಿರುವುದರ ಹಿಂದೆ ಯಾವ ರಾಜಕೀಯ ಕಾರಣವೂ ಇಲ್ಲ ಎಂದು ನಂಬುವುದೇಗೆ?

ವಿವಾದವನ್ನು ಚರ್ಚಿಸುತ್ತಿರುವ ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಲೇಬೇಕಾದ ಸಂಗತಿ ಏನೆಂದರೆ, ಕಾಂಗ್ರೆಸ್‍ನ ಅಶೋಕ್ ಗೆಹ್ಲೋಟ್ ಮತ್ತು ಬಿಜೆಪಿಯ ವಸುಂಧರಾ ರಾಜೆ ಇಬ್ಬರ ಅವಧಿಯಲ್ಲೂ ಕೋಟಾ ಆಸ್ಪತ್ರೆಯಲ್ಲಿ ಪ್ರತಿವರ್ಷ ಸರಾಸರಿ 1,100 ಹಸುಗೂಸುಗಳು ತಮ್ಮದಲ್ಲದ ತಪ್ಪಿಗೆ ಸಾವನ್ನಪ್ಪುತ್ತಲೇ ಬಂದಿದ್ದಾರೆ. ಹಾಗೆ ನೋಡಿದರೆ ಈ ಅವಧಿಯಲ್ಲಿ ಅತಿಹೆಚ್ಚು, ಅಂದರೆ 1260 ಮಕ್ಕಳು ಸಾವನ್ನಪ್ಪಿದ್ದು 2015ರಲ್ಲಿ. ಆಗ ರಾಜಸ್ತಾನದಲ್ಲಿ ಅಧಿಕಾರದಲ್ಲಿದ್ದುದು ಬಿಜೆಪಿ ಸರ್ಕಾರ! ಆಗ್ಯಾಕೆ ಮೀಡಿಯಾಗಳು ಈ ದುರಂತದತ್ತ ಕಣ್ಣು ತೆರೆಯಲಿಲ್ಲ.

ಹಾಗಂತ ಈ ಸಾವಿನ ದುರಂತ ಇಷ್ಟು ವರ್ಷ ಯಾರ ಗಮನಕ್ಕೂ ಬಾರದ ಗೌಪ್ಯ ವಿದ್ಯಮಾನವಾಗಿರಲಿಲ್ಲ. ಆಸ್ಪತ್ರೆಯ ಮಕ್ಕಳಿಗೆ ಇಂಥಾ ದುಸ್ಥಿತಿ ಎದುರಾದ ಆರಂಭದ ದಿನಗಳಿಂದಲೇ ಇಲ್ಲಿನ ಸ್ಥಳೀಯ ಪತ್ರಕರ್ತರು ಆಸ್ಪತ್ರೆಯಲ್ಲಿರುವ ಮೂಲಸೌಕರ್ಯದ ಕೊರತೆ, ಸಿಬ್ಬಂದಿ ಕೊರತೆ, ನೈರ್ಮಲ್ಯೀಕರಣದ ವೈಫಲ್ಯಗಳ ಕುರಿತಂತೆ ಬೆಳಕು ಚೆಲ್ಲುತ್ತಲೇ ಬಂದಿದ್ದರು. ಕೆಲ ಪತ್ರಕರ್ತರಂತು ಆಸ್ಪತ್ರೆ ದುಸ್ಥಿತಿ ನೋಡಲಾಗದೆ ಎನ್‍ಐಸಿಯುನಲ್ಲಿ ಮಕ್ಕಳನ್ನು ಬೆಚ್ಚಗಿಡುವ ಹೀಟರ್‍ಗಳನ್ನೂ ದಾನ ಮಾಡಿದ್ದುಂಟು. ಬಿಜೆಪಿಯ ವಸುಂಧರಾ ರಾಜೆ ಸಿಎಂ ಆಗಿದ್ದ ಅವಧಿಯಿಂದಲೂ ಇಂಥಾ ವರದಿಗಾರಿಕೆ ನಡೆಯುತ್ತಲೇ ಇತ್ತು. ಆದರೆ ಅವೆಲ್ಲವೂ ಸ್ಥಳೀಯ ಸುದ್ದಿಗಳಾಗಿ ಕಳೆದುಹೋದವೇ ವಿನಃ, ನ್ಯಾಷನಲ್ ಮೀಡಿಯಾಗಳು ಅದರತ್ತ ತಿರುಗಿಯೂ ನೋಡಲಿಲ್ಲ.

ಕೋಟಾದ ಆಸ್ಪತ್ರೆ ಸಿಬ್ಬಂದಿಗಳ ಮತ್ತು ಮೂಲಸೌಕರ್ಯದ ಕೊರತೆಯಿಂದ ನಿರಂತರವಾಗಿ ನರಳುತ್ತಲೇ ಬಂದಿದೆ. ರೋಗಿಗಳಿಗೆ ಚಿಕಿತ್ಸೆ ನೀಡಲು ಮಂಜೂರಾದ 533 ಅಗತ್ಯ ಪರಿಕರಗಳ ಪೈಕಿ 213 ಮಾತ್ರ ಕಾರ್ಯನಿರ್ವಹಣಾ ಸ್ಥಿತಿಯಲ್ಲಿವೆ. ಇನ್ನುಳಿದ 320 ಉಪಕರಣಗಳು ಕೆಟ್ಟುಹೋಗಿಯೋ, ಮುರಿದೋ ಮೂಲೆ ಸೇರಿ ಯಾವುದೋ ಕಾಲವಾಗಿದೆ. ಆಸ್ಪತ್ರೆಯ ಆವರಣದಲ್ಲಿ ಹಂದಿಗಳು ಯಾವ ಎಗ್ಗಿಲ್ಲದೆ ತಿರುಗಾಡುತ್ತವೆ. ಕಿಟಕಿಯ ಗಾಜುಗಳೆಲ್ಲ ಹೊಡೆದು ಚಳಿ, ಗಾಳಿಯಿಂದ ರೋಗಿಗಳಿಗೆ ರಕ್ಷಣೆ ಇಲ್ಲದಾಗಿದೆ. ಒಂದು ಬೆಡ್ ಮೇಲೆ ನಾಲ್ಕು ಮಕ್ಕಳನ್ನು ಮಲಗಿಸಲಾಗುತ್ತಿದೆ. ಒಂದೊಂದು ವೆಂಟಿಲೇಟರನ್ನು ಏಕಕಾಲದಲ್ಲಿ ಇಬ್ಬರು ಮಕ್ಕಳಿಗೆ ಬಳಸಲಾಗುತ್ತಿದೆ. ಆಸ್ಪತ್ರೆಯ ಪರಿಸ್ಥಿತಿ ಇಂಥಾ ಕರುಣಾಜನಕವಾಗಿರುವುದರಿಂದಲೇ 2014ರಿಂದ ನಿರಂತರವಾಗಿ ಇಲ್ಲಿ ಮಕ್ಕಳು ಪ್ರತಿವರ್ಷ ಸಾವಿರಕ್ಕೂ ಮೇಲ್ಪಟ್ಟು ಅಸುನೀಗುತ್ತಲೇ ಇದ್ದಾರೆ. ಆದರೆ ಆಗೆಲ್ಲ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದುದರಿಂದ ತೆಪ್ಪಗಿದ್ದ ನ್ಯಾಷನಲ್ ಗೋದಿ ಮೀಡಿಯಾಗಳು, ಈಗ ಎಚ್ಚೆತ್ತು ಬೊಬ್ಬೆ ಹೊಡೆದುಕೊಳ್ಳುತ್ತಿವೆಯೆಂದರೆ, ಅದಕ್ಕೆ ಕಾರಣ ಅಸುನೀಗುತ್ತಿರುವ ಮಕ್ಕಳ ಮೇಲಿನ ಕಾಳಜಿಯಲ್ಲ, ಅಧಿಕಾರದಲ್ಲಿರೋದು ಕಾಂಗ್ರೆಸ್ ಸರ್ಕಾರ ಎಂಬ ಸಂಕಟ!

ಮಕ್ಕಳ ಸಾವಿನ ಕುರಿತು ಹೇಳಿಕೆ ನೀಡುತ್ತಾ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ “ಮಕ್ಕಳು ಪ್ರತಿ ವರ್ಷ ಸಾಯ್ತಾರೆ. ಅದ್ರಲ್ಲಿ ಹೊಸದೇನೂ ಇಲ್ಲ” ಅಂತ ಹೇಳಿದ್ದು ನಿಜಕ್ಕೂ ಅಕ್ಷಮ್ಯ ಹೊಣೆಗೇಡಿ ಹೇಳಿಕೆ. ಆದ್ರೆ ಆ ಹೊಣೆಗೇಡಿ ಹೇಳಿಕೆಯಲ್ಲೂ ಸಣ್ಣದೊಂದು ಸತ್ಯ ಅಡಗಿರೋದನ್ನು ಆಸ್ಪತ್ರೆಯ ದಾಖಲೆಗಳೇ ರುಜುವಾತು ಮಾಡುತ್ತಿವೆ.

ಅದೇನೇ ಇರಲಿ, ಅಕ್ಕಪಕ್ಕದ ಮೂರ್ನಾಲ್ಕು ಜಿಲ್ಲೆಗಳ ಬಡರೋಗಿಗಳಿಗೆ ಏಕಮಾತ್ರ ಆಸರೆಯಾಗಿ ಉಳಿದಿರುವ ಜೆಕೆ ಲೋನ್ ಆಸ್ಪತ್ರೆ ಇನ್ಮುಂದಾದರು ಸುಧಾರಿಸುವಂತಾದರೆ ಅಷ್ಟುಸಾಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...