Homeಮುಖಪುಟಕೋಟಾ ಆಸ್ಪತ್ರೆಯ ಮಕ್ಕಳ ಸಾವಿನ ಚರ್ಚೆಯ ಸುತ್ತ ಹೆಣೆದುಕೊಂಡಿದೆಯಾ ರಾಜಕೀಯ ವಿಷಸರ್ಪ!?

ಕೋಟಾ ಆಸ್ಪತ್ರೆಯ ಮಕ್ಕಳ ಸಾವಿನ ಚರ್ಚೆಯ ಸುತ್ತ ಹೆಣೆದುಕೊಂಡಿದೆಯಾ ರಾಜಕೀಯ ವಿಷಸರ್ಪ!?

- Advertisement -
- Advertisement -

ಮಕ್ಕಳ ಸಾವಿನ ಕುರಿತು ಹೇಳಿಕೆ ನೀಡುತ್ತಾ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ “ಮಕ್ಕಳು ಪ್ರತಿ ವರ್ಷ ಸಾಯ್ತಾರೆ. ಅದ್ರಲ್ಲಿ ಹೊಸದೇನೂ ಇಲ್ಲ” ಅಂತ ಹೇಳಿದ್ದು ನಿಜಕ್ಕೂ ಅಕ್ಷಮ್ಯ ಹೊಣೆಗೇಡಿ ಹೇಳಿಕೆ. ಆದ್ರೆ ಆ ಹೊಣೆಗೇಡಿ ಹೇಳಿಕೆಯಲ್ಲೂ ಸಣ್ಣದೊಂದು ಸತ್ಯ ಅಡಗಿರೋದನ್ನು ಆಸ್ಪತ್ರೆಯ ದಾಖಲೆಗಳೇ ರುಜುವಾತು ಮಾಡುತ್ತಿವೆ.

ರಾಜಸ್ತಾನದ ಕೋಟಾದಲ್ಲಿರುವ ಜೆಕೆ ಲೋನ್ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ತಿಂಗಳು ನೂರು ಮಕ್ಕಳು ಅಸುನೀಗಿದ್ದು ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‍ರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದರೆ, ರಾಷ್ಟ್ರೀಯ ನ್ಯೂಸ್ ಮೀಡಿಯಾಗಳು ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಚರ್ಚೆಗಳನ್ನು ನಡೆಸುತ್ತಿವೆ. ಹೌದು, ವಿರೋಧ ಪಕ್ಷ ಮತ್ತು ಸಂವಿಧಾನದ ನಾಲ್ಕನೇ ಆಯಾಮವಾದ ಮಾಧ್ಯಮ, ಸರ್ಕಾರವೊಂದರ ವೈಫಲ್ಯವನ್ನು ಹೀಗೆ ಪ್ರಶ್ನಿಸಲೇಬೇಕು. ಜಗತ್ತನ್ನೇ ನೋಡದ ಹಸುಗೂಸುಗಳು ತಾವು ಮಾಡದ ತಪ್ಪಿಗೆ ಕಣ್ಮುಚ್ಚುವಂತೆ ಆದದ್ದು ಅಕ್ಷಮ್ಯ ಅಪರಾಧ. ಹಿಂದೆ ಬಿಜೆಪಿ ಸಿಎಂ ಯೋಗಿ ಆದಿತ್ಯನಾಥರ ಉತ್ತರಪ್ರದೇಶದ ಗೋರಖ್‍ಪುರ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಿಲ್ಲದೆ 71 ನವಜಾತ ಶಿಶುಗಳು ಅಸುನೀಗಿದಾಗ ದೇಶ ತಲ್ಲಣಿಸಿದ್ದು ಇದೇ ಕಾರಣಕ್ಕೆ.

ಆದರೆ ರಾಜಸ್ಥಾನದ ಕೋಟಾ ಆಸ್ಪತ್ರೆಯ ಹಸುಗೂಸುಗಳ ಸಾವು ಚರ್ಚೆಗೆ ಬಂದಿರುವುದು ಇಂಥಾ ನೈಜ ಕಾಳಜಿಗಿಂತಲೂ ಹೆಚ್ಚಾಗಿ ರಾಜಕೀಯಪ್ರೇರಿತ ಕಾರಣಕ್ಕಾ ಎಂಬ ಅನುಮಾನ ಆಸ್ಪತ್ರೆಯ ಹಳೆಯ ರೆಕಾರ್ಡುಗಳನ್ನು ಪರಿಶೀಲಿಸಿದಾಗ ಮೂಡುತ್ತೆ. ಆಸ್ಪತ್ರೆಯ ದಾಖಲಾತಿಯ ಪ್ರಕಾರ 2019ರಲ್ಲಿ 963 ಮಕ್ಕಳು ಅಲ್ಲಿ ಅಸುನೀಗಿದ್ದಾರೆ. ಅವುಗಳಲ್ಲಿ ಬಹುಪಾಲು ನವಜಾತ ಶಿಶುಗಳು. ಅಚ್ಚರಿಯ ಸಂಗತಿಯೆಂದರೆ, ಕಳೆದ ಐದು ವರ್ಷಗಳ ಲೆಕ್ಕ ನೋಡಿದರೆ ಅಲ್ಲಿ ಇದೇ ಅತಿ ಕಡಿಮೆ ಮಕ್ಕಳು ಸತ್ತ ವರ್ಷ! 2014ರಿಂದ ಆ ಆಸ್ಪತ್ರೆಯಲ್ಲಿ ಸರಾಸರಿ ಪ್ರತಿವರ್ಷ 1,100 ಮಕ್ಕಳು ಅಸುನೀಗುತ್ತಲೇ ಬಂದಿದ್ದಾರೆ!

ಇವತ್ತಿನ ದುರ್ಗತಿ ಕಳೆದ ಐದು ವರ್ಷದಿಂದ ಸತತವಾಗಿ, ಅಂದರೆ ಬಿಜೆಪಿಯ ವಸುಂಧರಾ ರಾಜೆ ಸಿಎಂ ಆಗಿದ್ದ ಅವಧಿಯುದ್ದಕ್ಕೂ, ಇತ್ತಿ ಎನ್ನುವುದಾದರೆ ಇಷ್ಟುದಿನ ನ್ಯಾಷನಲ್ (ಗೋದಿ) ಮೀಡಿಯಾಗಳೇಕೆ ಇದರತ್ತ ಕುರುಡಾಗಿದ್ದವು? ಈಗ ಕಾಂಗ್ರೆಸ್ ಅಧಿಕಾರಕ್ಕೇರಿದ ಮೇಲೆಯೇ, ಆ ಆಸ್ಪತ್ರೆಯ ಅವ್ಯವಸ್ಥೆ ಮೀಡಿಯಾಗಳ ಗಮನ ಸೆಳೆದಿರುವುದರ ಹಿಂದೆ ಯಾವ ರಾಜಕೀಯ ಕಾರಣವೂ ಇಲ್ಲ ಎಂದು ನಂಬುವುದೇಗೆ?

ವಿವಾದವನ್ನು ಚರ್ಚಿಸುತ್ತಿರುವ ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಲೇಬೇಕಾದ ಸಂಗತಿ ಏನೆಂದರೆ, ಕಾಂಗ್ರೆಸ್‍ನ ಅಶೋಕ್ ಗೆಹ್ಲೋಟ್ ಮತ್ತು ಬಿಜೆಪಿಯ ವಸುಂಧರಾ ರಾಜೆ ಇಬ್ಬರ ಅವಧಿಯಲ್ಲೂ ಕೋಟಾ ಆಸ್ಪತ್ರೆಯಲ್ಲಿ ಪ್ರತಿವರ್ಷ ಸರಾಸರಿ 1,100 ಹಸುಗೂಸುಗಳು ತಮ್ಮದಲ್ಲದ ತಪ್ಪಿಗೆ ಸಾವನ್ನಪ್ಪುತ್ತಲೇ ಬಂದಿದ್ದಾರೆ. ಹಾಗೆ ನೋಡಿದರೆ ಈ ಅವಧಿಯಲ್ಲಿ ಅತಿಹೆಚ್ಚು, ಅಂದರೆ 1260 ಮಕ್ಕಳು ಸಾವನ್ನಪ್ಪಿದ್ದು 2015ರಲ್ಲಿ. ಆಗ ರಾಜಸ್ತಾನದಲ್ಲಿ ಅಧಿಕಾರದಲ್ಲಿದ್ದುದು ಬಿಜೆಪಿ ಸರ್ಕಾರ! ಆಗ್ಯಾಕೆ ಮೀಡಿಯಾಗಳು ಈ ದುರಂತದತ್ತ ಕಣ್ಣು ತೆರೆಯಲಿಲ್ಲ.

ಹಾಗಂತ ಈ ಸಾವಿನ ದುರಂತ ಇಷ್ಟು ವರ್ಷ ಯಾರ ಗಮನಕ್ಕೂ ಬಾರದ ಗೌಪ್ಯ ವಿದ್ಯಮಾನವಾಗಿರಲಿಲ್ಲ. ಆಸ್ಪತ್ರೆಯ ಮಕ್ಕಳಿಗೆ ಇಂಥಾ ದುಸ್ಥಿತಿ ಎದುರಾದ ಆರಂಭದ ದಿನಗಳಿಂದಲೇ ಇಲ್ಲಿನ ಸ್ಥಳೀಯ ಪತ್ರಕರ್ತರು ಆಸ್ಪತ್ರೆಯಲ್ಲಿರುವ ಮೂಲಸೌಕರ್ಯದ ಕೊರತೆ, ಸಿಬ್ಬಂದಿ ಕೊರತೆ, ನೈರ್ಮಲ್ಯೀಕರಣದ ವೈಫಲ್ಯಗಳ ಕುರಿತಂತೆ ಬೆಳಕು ಚೆಲ್ಲುತ್ತಲೇ ಬಂದಿದ್ದರು. ಕೆಲ ಪತ್ರಕರ್ತರಂತು ಆಸ್ಪತ್ರೆ ದುಸ್ಥಿತಿ ನೋಡಲಾಗದೆ ಎನ್‍ಐಸಿಯುನಲ್ಲಿ ಮಕ್ಕಳನ್ನು ಬೆಚ್ಚಗಿಡುವ ಹೀಟರ್‍ಗಳನ್ನೂ ದಾನ ಮಾಡಿದ್ದುಂಟು. ಬಿಜೆಪಿಯ ವಸುಂಧರಾ ರಾಜೆ ಸಿಎಂ ಆಗಿದ್ದ ಅವಧಿಯಿಂದಲೂ ಇಂಥಾ ವರದಿಗಾರಿಕೆ ನಡೆಯುತ್ತಲೇ ಇತ್ತು. ಆದರೆ ಅವೆಲ್ಲವೂ ಸ್ಥಳೀಯ ಸುದ್ದಿಗಳಾಗಿ ಕಳೆದುಹೋದವೇ ವಿನಃ, ನ್ಯಾಷನಲ್ ಮೀಡಿಯಾಗಳು ಅದರತ್ತ ತಿರುಗಿಯೂ ನೋಡಲಿಲ್ಲ.

ಕೋಟಾದ ಆಸ್ಪತ್ರೆ ಸಿಬ್ಬಂದಿಗಳ ಮತ್ತು ಮೂಲಸೌಕರ್ಯದ ಕೊರತೆಯಿಂದ ನಿರಂತರವಾಗಿ ನರಳುತ್ತಲೇ ಬಂದಿದೆ. ರೋಗಿಗಳಿಗೆ ಚಿಕಿತ್ಸೆ ನೀಡಲು ಮಂಜೂರಾದ 533 ಅಗತ್ಯ ಪರಿಕರಗಳ ಪೈಕಿ 213 ಮಾತ್ರ ಕಾರ್ಯನಿರ್ವಹಣಾ ಸ್ಥಿತಿಯಲ್ಲಿವೆ. ಇನ್ನುಳಿದ 320 ಉಪಕರಣಗಳು ಕೆಟ್ಟುಹೋಗಿಯೋ, ಮುರಿದೋ ಮೂಲೆ ಸೇರಿ ಯಾವುದೋ ಕಾಲವಾಗಿದೆ. ಆಸ್ಪತ್ರೆಯ ಆವರಣದಲ್ಲಿ ಹಂದಿಗಳು ಯಾವ ಎಗ್ಗಿಲ್ಲದೆ ತಿರುಗಾಡುತ್ತವೆ. ಕಿಟಕಿಯ ಗಾಜುಗಳೆಲ್ಲ ಹೊಡೆದು ಚಳಿ, ಗಾಳಿಯಿಂದ ರೋಗಿಗಳಿಗೆ ರಕ್ಷಣೆ ಇಲ್ಲದಾಗಿದೆ. ಒಂದು ಬೆಡ್ ಮೇಲೆ ನಾಲ್ಕು ಮಕ್ಕಳನ್ನು ಮಲಗಿಸಲಾಗುತ್ತಿದೆ. ಒಂದೊಂದು ವೆಂಟಿಲೇಟರನ್ನು ಏಕಕಾಲದಲ್ಲಿ ಇಬ್ಬರು ಮಕ್ಕಳಿಗೆ ಬಳಸಲಾಗುತ್ತಿದೆ. ಆಸ್ಪತ್ರೆಯ ಪರಿಸ್ಥಿತಿ ಇಂಥಾ ಕರುಣಾಜನಕವಾಗಿರುವುದರಿಂದಲೇ 2014ರಿಂದ ನಿರಂತರವಾಗಿ ಇಲ್ಲಿ ಮಕ್ಕಳು ಪ್ರತಿವರ್ಷ ಸಾವಿರಕ್ಕೂ ಮೇಲ್ಪಟ್ಟು ಅಸುನೀಗುತ್ತಲೇ ಇದ್ದಾರೆ. ಆದರೆ ಆಗೆಲ್ಲ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದುದರಿಂದ ತೆಪ್ಪಗಿದ್ದ ನ್ಯಾಷನಲ್ ಗೋದಿ ಮೀಡಿಯಾಗಳು, ಈಗ ಎಚ್ಚೆತ್ತು ಬೊಬ್ಬೆ ಹೊಡೆದುಕೊಳ್ಳುತ್ತಿವೆಯೆಂದರೆ, ಅದಕ್ಕೆ ಕಾರಣ ಅಸುನೀಗುತ್ತಿರುವ ಮಕ್ಕಳ ಮೇಲಿನ ಕಾಳಜಿಯಲ್ಲ, ಅಧಿಕಾರದಲ್ಲಿರೋದು ಕಾಂಗ್ರೆಸ್ ಸರ್ಕಾರ ಎಂಬ ಸಂಕಟ!

ಮಕ್ಕಳ ಸಾವಿನ ಕುರಿತು ಹೇಳಿಕೆ ನೀಡುತ್ತಾ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ “ಮಕ್ಕಳು ಪ್ರತಿ ವರ್ಷ ಸಾಯ್ತಾರೆ. ಅದ್ರಲ್ಲಿ ಹೊಸದೇನೂ ಇಲ್ಲ” ಅಂತ ಹೇಳಿದ್ದು ನಿಜಕ್ಕೂ ಅಕ್ಷಮ್ಯ ಹೊಣೆಗೇಡಿ ಹೇಳಿಕೆ. ಆದ್ರೆ ಆ ಹೊಣೆಗೇಡಿ ಹೇಳಿಕೆಯಲ್ಲೂ ಸಣ್ಣದೊಂದು ಸತ್ಯ ಅಡಗಿರೋದನ್ನು ಆಸ್ಪತ್ರೆಯ ದಾಖಲೆಗಳೇ ರುಜುವಾತು ಮಾಡುತ್ತಿವೆ.

ಅದೇನೇ ಇರಲಿ, ಅಕ್ಕಪಕ್ಕದ ಮೂರ್ನಾಲ್ಕು ಜಿಲ್ಲೆಗಳ ಬಡರೋಗಿಗಳಿಗೆ ಏಕಮಾತ್ರ ಆಸರೆಯಾಗಿ ಉಳಿದಿರುವ ಜೆಕೆ ಲೋನ್ ಆಸ್ಪತ್ರೆ ಇನ್ಮುಂದಾದರು ಸುಧಾರಿಸುವಂತಾದರೆ ಅಷ್ಟುಸಾಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...