Homeಮುಖಪುಟಕೋಟಾ ಆಸ್ಪತ್ರೆಯ ಮಕ್ಕಳ ಸಾವಿನ ಚರ್ಚೆಯ ಸುತ್ತ ಹೆಣೆದುಕೊಂಡಿದೆಯಾ ರಾಜಕೀಯ ವಿಷಸರ್ಪ!?

ಕೋಟಾ ಆಸ್ಪತ್ರೆಯ ಮಕ್ಕಳ ಸಾವಿನ ಚರ್ಚೆಯ ಸುತ್ತ ಹೆಣೆದುಕೊಂಡಿದೆಯಾ ರಾಜಕೀಯ ವಿಷಸರ್ಪ!?

- Advertisement -
- Advertisement -

ಮಕ್ಕಳ ಸಾವಿನ ಕುರಿತು ಹೇಳಿಕೆ ನೀಡುತ್ತಾ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ “ಮಕ್ಕಳು ಪ್ರತಿ ವರ್ಷ ಸಾಯ್ತಾರೆ. ಅದ್ರಲ್ಲಿ ಹೊಸದೇನೂ ಇಲ್ಲ” ಅಂತ ಹೇಳಿದ್ದು ನಿಜಕ್ಕೂ ಅಕ್ಷಮ್ಯ ಹೊಣೆಗೇಡಿ ಹೇಳಿಕೆ. ಆದ್ರೆ ಆ ಹೊಣೆಗೇಡಿ ಹೇಳಿಕೆಯಲ್ಲೂ ಸಣ್ಣದೊಂದು ಸತ್ಯ ಅಡಗಿರೋದನ್ನು ಆಸ್ಪತ್ರೆಯ ದಾಖಲೆಗಳೇ ರುಜುವಾತು ಮಾಡುತ್ತಿವೆ.

ರಾಜಸ್ತಾನದ ಕೋಟಾದಲ್ಲಿರುವ ಜೆಕೆ ಲೋನ್ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ತಿಂಗಳು ನೂರು ಮಕ್ಕಳು ಅಸುನೀಗಿದ್ದು ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‍ರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದರೆ, ರಾಷ್ಟ್ರೀಯ ನ್ಯೂಸ್ ಮೀಡಿಯಾಗಳು ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಚರ್ಚೆಗಳನ್ನು ನಡೆಸುತ್ತಿವೆ. ಹೌದು, ವಿರೋಧ ಪಕ್ಷ ಮತ್ತು ಸಂವಿಧಾನದ ನಾಲ್ಕನೇ ಆಯಾಮವಾದ ಮಾಧ್ಯಮ, ಸರ್ಕಾರವೊಂದರ ವೈಫಲ್ಯವನ್ನು ಹೀಗೆ ಪ್ರಶ್ನಿಸಲೇಬೇಕು. ಜಗತ್ತನ್ನೇ ನೋಡದ ಹಸುಗೂಸುಗಳು ತಾವು ಮಾಡದ ತಪ್ಪಿಗೆ ಕಣ್ಮುಚ್ಚುವಂತೆ ಆದದ್ದು ಅಕ್ಷಮ್ಯ ಅಪರಾಧ. ಹಿಂದೆ ಬಿಜೆಪಿ ಸಿಎಂ ಯೋಗಿ ಆದಿತ್ಯನಾಥರ ಉತ್ತರಪ್ರದೇಶದ ಗೋರಖ್‍ಪುರ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಿಲ್ಲದೆ 71 ನವಜಾತ ಶಿಶುಗಳು ಅಸುನೀಗಿದಾಗ ದೇಶ ತಲ್ಲಣಿಸಿದ್ದು ಇದೇ ಕಾರಣಕ್ಕೆ.

ಆದರೆ ರಾಜಸ್ಥಾನದ ಕೋಟಾ ಆಸ್ಪತ್ರೆಯ ಹಸುಗೂಸುಗಳ ಸಾವು ಚರ್ಚೆಗೆ ಬಂದಿರುವುದು ಇಂಥಾ ನೈಜ ಕಾಳಜಿಗಿಂತಲೂ ಹೆಚ್ಚಾಗಿ ರಾಜಕೀಯಪ್ರೇರಿತ ಕಾರಣಕ್ಕಾ ಎಂಬ ಅನುಮಾನ ಆಸ್ಪತ್ರೆಯ ಹಳೆಯ ರೆಕಾರ್ಡುಗಳನ್ನು ಪರಿಶೀಲಿಸಿದಾಗ ಮೂಡುತ್ತೆ. ಆಸ್ಪತ್ರೆಯ ದಾಖಲಾತಿಯ ಪ್ರಕಾರ 2019ರಲ್ಲಿ 963 ಮಕ್ಕಳು ಅಲ್ಲಿ ಅಸುನೀಗಿದ್ದಾರೆ. ಅವುಗಳಲ್ಲಿ ಬಹುಪಾಲು ನವಜಾತ ಶಿಶುಗಳು. ಅಚ್ಚರಿಯ ಸಂಗತಿಯೆಂದರೆ, ಕಳೆದ ಐದು ವರ್ಷಗಳ ಲೆಕ್ಕ ನೋಡಿದರೆ ಅಲ್ಲಿ ಇದೇ ಅತಿ ಕಡಿಮೆ ಮಕ್ಕಳು ಸತ್ತ ವರ್ಷ! 2014ರಿಂದ ಆ ಆಸ್ಪತ್ರೆಯಲ್ಲಿ ಸರಾಸರಿ ಪ್ರತಿವರ್ಷ 1,100 ಮಕ್ಕಳು ಅಸುನೀಗುತ್ತಲೇ ಬಂದಿದ್ದಾರೆ!

ಇವತ್ತಿನ ದುರ್ಗತಿ ಕಳೆದ ಐದು ವರ್ಷದಿಂದ ಸತತವಾಗಿ, ಅಂದರೆ ಬಿಜೆಪಿಯ ವಸುಂಧರಾ ರಾಜೆ ಸಿಎಂ ಆಗಿದ್ದ ಅವಧಿಯುದ್ದಕ್ಕೂ, ಇತ್ತಿ ಎನ್ನುವುದಾದರೆ ಇಷ್ಟುದಿನ ನ್ಯಾಷನಲ್ (ಗೋದಿ) ಮೀಡಿಯಾಗಳೇಕೆ ಇದರತ್ತ ಕುರುಡಾಗಿದ್ದವು? ಈಗ ಕಾಂಗ್ರೆಸ್ ಅಧಿಕಾರಕ್ಕೇರಿದ ಮೇಲೆಯೇ, ಆ ಆಸ್ಪತ್ರೆಯ ಅವ್ಯವಸ್ಥೆ ಮೀಡಿಯಾಗಳ ಗಮನ ಸೆಳೆದಿರುವುದರ ಹಿಂದೆ ಯಾವ ರಾಜಕೀಯ ಕಾರಣವೂ ಇಲ್ಲ ಎಂದು ನಂಬುವುದೇಗೆ?

ವಿವಾದವನ್ನು ಚರ್ಚಿಸುತ್ತಿರುವ ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಲೇಬೇಕಾದ ಸಂಗತಿ ಏನೆಂದರೆ, ಕಾಂಗ್ರೆಸ್‍ನ ಅಶೋಕ್ ಗೆಹ್ಲೋಟ್ ಮತ್ತು ಬಿಜೆಪಿಯ ವಸುಂಧರಾ ರಾಜೆ ಇಬ್ಬರ ಅವಧಿಯಲ್ಲೂ ಕೋಟಾ ಆಸ್ಪತ್ರೆಯಲ್ಲಿ ಪ್ರತಿವರ್ಷ ಸರಾಸರಿ 1,100 ಹಸುಗೂಸುಗಳು ತಮ್ಮದಲ್ಲದ ತಪ್ಪಿಗೆ ಸಾವನ್ನಪ್ಪುತ್ತಲೇ ಬಂದಿದ್ದಾರೆ. ಹಾಗೆ ನೋಡಿದರೆ ಈ ಅವಧಿಯಲ್ಲಿ ಅತಿಹೆಚ್ಚು, ಅಂದರೆ 1260 ಮಕ್ಕಳು ಸಾವನ್ನಪ್ಪಿದ್ದು 2015ರಲ್ಲಿ. ಆಗ ರಾಜಸ್ತಾನದಲ್ಲಿ ಅಧಿಕಾರದಲ್ಲಿದ್ದುದು ಬಿಜೆಪಿ ಸರ್ಕಾರ! ಆಗ್ಯಾಕೆ ಮೀಡಿಯಾಗಳು ಈ ದುರಂತದತ್ತ ಕಣ್ಣು ತೆರೆಯಲಿಲ್ಲ.

ಹಾಗಂತ ಈ ಸಾವಿನ ದುರಂತ ಇಷ್ಟು ವರ್ಷ ಯಾರ ಗಮನಕ್ಕೂ ಬಾರದ ಗೌಪ್ಯ ವಿದ್ಯಮಾನವಾಗಿರಲಿಲ್ಲ. ಆಸ್ಪತ್ರೆಯ ಮಕ್ಕಳಿಗೆ ಇಂಥಾ ದುಸ್ಥಿತಿ ಎದುರಾದ ಆರಂಭದ ದಿನಗಳಿಂದಲೇ ಇಲ್ಲಿನ ಸ್ಥಳೀಯ ಪತ್ರಕರ್ತರು ಆಸ್ಪತ್ರೆಯಲ್ಲಿರುವ ಮೂಲಸೌಕರ್ಯದ ಕೊರತೆ, ಸಿಬ್ಬಂದಿ ಕೊರತೆ, ನೈರ್ಮಲ್ಯೀಕರಣದ ವೈಫಲ್ಯಗಳ ಕುರಿತಂತೆ ಬೆಳಕು ಚೆಲ್ಲುತ್ತಲೇ ಬಂದಿದ್ದರು. ಕೆಲ ಪತ್ರಕರ್ತರಂತು ಆಸ್ಪತ್ರೆ ದುಸ್ಥಿತಿ ನೋಡಲಾಗದೆ ಎನ್‍ಐಸಿಯುನಲ್ಲಿ ಮಕ್ಕಳನ್ನು ಬೆಚ್ಚಗಿಡುವ ಹೀಟರ್‍ಗಳನ್ನೂ ದಾನ ಮಾಡಿದ್ದುಂಟು. ಬಿಜೆಪಿಯ ವಸುಂಧರಾ ರಾಜೆ ಸಿಎಂ ಆಗಿದ್ದ ಅವಧಿಯಿಂದಲೂ ಇಂಥಾ ವರದಿಗಾರಿಕೆ ನಡೆಯುತ್ತಲೇ ಇತ್ತು. ಆದರೆ ಅವೆಲ್ಲವೂ ಸ್ಥಳೀಯ ಸುದ್ದಿಗಳಾಗಿ ಕಳೆದುಹೋದವೇ ವಿನಃ, ನ್ಯಾಷನಲ್ ಮೀಡಿಯಾಗಳು ಅದರತ್ತ ತಿರುಗಿಯೂ ನೋಡಲಿಲ್ಲ.

ಕೋಟಾದ ಆಸ್ಪತ್ರೆ ಸಿಬ್ಬಂದಿಗಳ ಮತ್ತು ಮೂಲಸೌಕರ್ಯದ ಕೊರತೆಯಿಂದ ನಿರಂತರವಾಗಿ ನರಳುತ್ತಲೇ ಬಂದಿದೆ. ರೋಗಿಗಳಿಗೆ ಚಿಕಿತ್ಸೆ ನೀಡಲು ಮಂಜೂರಾದ 533 ಅಗತ್ಯ ಪರಿಕರಗಳ ಪೈಕಿ 213 ಮಾತ್ರ ಕಾರ್ಯನಿರ್ವಹಣಾ ಸ್ಥಿತಿಯಲ್ಲಿವೆ. ಇನ್ನುಳಿದ 320 ಉಪಕರಣಗಳು ಕೆಟ್ಟುಹೋಗಿಯೋ, ಮುರಿದೋ ಮೂಲೆ ಸೇರಿ ಯಾವುದೋ ಕಾಲವಾಗಿದೆ. ಆಸ್ಪತ್ರೆಯ ಆವರಣದಲ್ಲಿ ಹಂದಿಗಳು ಯಾವ ಎಗ್ಗಿಲ್ಲದೆ ತಿರುಗಾಡುತ್ತವೆ. ಕಿಟಕಿಯ ಗಾಜುಗಳೆಲ್ಲ ಹೊಡೆದು ಚಳಿ, ಗಾಳಿಯಿಂದ ರೋಗಿಗಳಿಗೆ ರಕ್ಷಣೆ ಇಲ್ಲದಾಗಿದೆ. ಒಂದು ಬೆಡ್ ಮೇಲೆ ನಾಲ್ಕು ಮಕ್ಕಳನ್ನು ಮಲಗಿಸಲಾಗುತ್ತಿದೆ. ಒಂದೊಂದು ವೆಂಟಿಲೇಟರನ್ನು ಏಕಕಾಲದಲ್ಲಿ ಇಬ್ಬರು ಮಕ್ಕಳಿಗೆ ಬಳಸಲಾಗುತ್ತಿದೆ. ಆಸ್ಪತ್ರೆಯ ಪರಿಸ್ಥಿತಿ ಇಂಥಾ ಕರುಣಾಜನಕವಾಗಿರುವುದರಿಂದಲೇ 2014ರಿಂದ ನಿರಂತರವಾಗಿ ಇಲ್ಲಿ ಮಕ್ಕಳು ಪ್ರತಿವರ್ಷ ಸಾವಿರಕ್ಕೂ ಮೇಲ್ಪಟ್ಟು ಅಸುನೀಗುತ್ತಲೇ ಇದ್ದಾರೆ. ಆದರೆ ಆಗೆಲ್ಲ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದುದರಿಂದ ತೆಪ್ಪಗಿದ್ದ ನ್ಯಾಷನಲ್ ಗೋದಿ ಮೀಡಿಯಾಗಳು, ಈಗ ಎಚ್ಚೆತ್ತು ಬೊಬ್ಬೆ ಹೊಡೆದುಕೊಳ್ಳುತ್ತಿವೆಯೆಂದರೆ, ಅದಕ್ಕೆ ಕಾರಣ ಅಸುನೀಗುತ್ತಿರುವ ಮಕ್ಕಳ ಮೇಲಿನ ಕಾಳಜಿಯಲ್ಲ, ಅಧಿಕಾರದಲ್ಲಿರೋದು ಕಾಂಗ್ರೆಸ್ ಸರ್ಕಾರ ಎಂಬ ಸಂಕಟ!

ಮಕ್ಕಳ ಸಾವಿನ ಕುರಿತು ಹೇಳಿಕೆ ನೀಡುತ್ತಾ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ “ಮಕ್ಕಳು ಪ್ರತಿ ವರ್ಷ ಸಾಯ್ತಾರೆ. ಅದ್ರಲ್ಲಿ ಹೊಸದೇನೂ ಇಲ್ಲ” ಅಂತ ಹೇಳಿದ್ದು ನಿಜಕ್ಕೂ ಅಕ್ಷಮ್ಯ ಹೊಣೆಗೇಡಿ ಹೇಳಿಕೆ. ಆದ್ರೆ ಆ ಹೊಣೆಗೇಡಿ ಹೇಳಿಕೆಯಲ್ಲೂ ಸಣ್ಣದೊಂದು ಸತ್ಯ ಅಡಗಿರೋದನ್ನು ಆಸ್ಪತ್ರೆಯ ದಾಖಲೆಗಳೇ ರುಜುವಾತು ಮಾಡುತ್ತಿವೆ.

ಅದೇನೇ ಇರಲಿ, ಅಕ್ಕಪಕ್ಕದ ಮೂರ್ನಾಲ್ಕು ಜಿಲ್ಲೆಗಳ ಬಡರೋಗಿಗಳಿಗೆ ಏಕಮಾತ್ರ ಆಸರೆಯಾಗಿ ಉಳಿದಿರುವ ಜೆಕೆ ಲೋನ್ ಆಸ್ಪತ್ರೆ ಇನ್ಮುಂದಾದರು ಸುಧಾರಿಸುವಂತಾದರೆ ಅಷ್ಟುಸಾಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...