Homeಮುಖಪುಟಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ

ಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಮಂಗಳವಾರ ನಗರದ ಜವಾಹರ್ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ 17 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಕಬ್ಬಿಣದ ರಾಡ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಜನವರಿ 2025 ರಿಂದ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿರುವ ಒಂಬತ್ತನೇ ಪ್ರಕರಣ ಇದಾಗಿದೆ. ಮೃತನನ್ನು ಹರ್ಷರಾಜ್ ಶಂಕರ್ ಎಂದು ಗುರುತಿಸಲಾಗಿದೆ. ಇವರು ಬಿಹಾರದ ನಳಂದ ಜಿಲ್ಲೆಯವರು. ಕಳೆದ ವರ್ಷ ಏಪ್ರಿಲ್‌ನಿಂದ ಇಲ್ಲಿನ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಅವರು ತಯಾರಿ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಬಾಲಕ ಒಳಗಿನಿಂದ ಬಾಗಿಲು ಹಾಕಿದ್ದಾನೆ; ಪ್ರತಿಕ್ರಿಯಿಸುತ್ತಿಲ್ಲ ಎಂದು ಹಾಸ್ಟೆಲ್ ಕೇರ್‌ಟೇಕರ್‌ಗೆ ಸಹಪಾಠಿಗಳು ತಿಳಿಸಿದ್ದರು. ನಂತರ, ಪೊಲೀಸ್ ತಂಡ ಸ್ಥಳಕ್ಕೆ ತಲುಪಿತು. ಜವಾಹರ್ ನಗರ ಎಸ್‌ಎಚ್‌ಒ ರಾಮ್ಲಕ್ಷ್ಮಣ್ ತಂಡವು ಕೋಣೆಯ ಬಾಗಿಲು ಒಡೆದಾಗ ಬಾಲಕ ಕಬ್ಬಿಣದ ರಾಡ್‌ಗೆ ನೇತಾಡುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಹಾಸ್ಟೆಲ್ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ನಲ್ಲಿ ‘ಆತ್ಮಹತ್ಯೆ ವಿರೋಧಿ ಸಾಧನ’ ಅಳವಡಿಸಲಾಗಿತ್ತು. ಆದ್ದರಿಂದ, ನೀಟ್ ಆಕಾಂಕ್ಷಿ ನೇಣು ಬಿಗಿದುಕೊಳ್ಳಲು ಕಬ್ಬಿಣದ ರಾಡ್ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಿಂದ ಯಾವುದೇ ಆತ್ಮಹತ್ಯಾ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಅವರ ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು.

ವರ್ಷದಲ್ಲಿ 9ನೇ ಆತ್ಮಹತ್ಯೆ ಪ್ರಕರಣ

ಕೋಚಿಂಗ್ ಹಬ್ ಎಂದು ಪ್ರಸಿದ್ಧವಾಗಿರುವ ನಗರದಲ್ಲಿ ಈ ವರ್ಷ ನಡೆದ ಒಂಬತ್ತನೇ ವಿದ್ಯಾರ್ಥಿ ಆತ್ಮಹತ್ಯೆ ಇದಾಗಿದೆ ಎಂಬುದನ್ನು ಇಲ್ಲಿ ಗಮನಿಸಬೇಕು. ಆರು ಜನ ಕೋಚಿಂಗ್ ವಿದ್ಯಾರ್ಥಿಗಳು, ಐದು ಜನ ಜೆಇಇ, ಒಬ್ಬ ನೀಟ್ ವಿದ್ಯಾರ್ಥಿ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. 2024 ರಲ್ಲಿ ಕೋಟಾದ ತರಬೇತಿ ಪಡೆಯುತ್ತಿದ್ದ  17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು.

ವೈದ್ಯಕೀಯ, ಎಂಜಿನಿಯರಿಂಗ್ ಆಕಾಂಕ್ಷಿಗಳ ಕೇಂದ್ರ

ಜಿಲ್ಲಾಡಳಿತ ಅಧಿಕಾರಿಗಳ ಪ್ರಕಾರ, ವಾರ್ಷಿಕವಾಗಿ ಅಂದಾಜು 10,000 ಕೋಟಿ ರೂ. ಮೌಲ್ಯದ ಪರೀಕ್ಷಾ-ಪೂರ್ವಸಿದ್ಧತಾ ಉದ್ಯಮದ ಕೇಂದ್ರಬಿಂದುವಾಗಿ ಕೋಟಾ ತನ್ನನ್ನು ತಾನು ದೃಢವಾಗಿ ಸ್ಥಾಪಿಸಿಕೊಂಡಿದೆ. ಪ್ರತಿ ವರ್ಷ, ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಹತ್ತನೇ ತರಗತಿ ಮುಗಿಸಿದ ನಂತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಈ ಕೋಚಿಂಗ್ ಹಬ್‌ಗೆ ಸೇರುತ್ತಾರೆ. ಅವರು ನಗರದ ಪ್ರಾಬಲ್ಯ ಹೊಂದಿರುವ ವಸತಿ ತರಬೇತಿ ಸಂಸ್ಥೆಗಳಲ್ಲಿ ದಾಖಲಾಗುತ್ತಾರೆ. ಕಠಿಣ ತಯಾರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...