Homeಕರ್ನಾಟಕಫೋಟೋಗ್ರಾಫರ್ ಪೂಜಾರಿ ಮಂತ್ರಿಯಾದ ಮಹಿಮೆ! ಇದು ಸಂವಿಧಾನದ ಪವಾಡ!!

ಫೋಟೋಗ್ರಾಫರ್ ಪೂಜಾರಿ ಮಂತ್ರಿಯಾದ ಮಹಿಮೆ! ಇದು ಸಂವಿಧಾನದ ಪವಾಡ!!

ಇವತ್ತಿಗೂ ಸಂಘಪರಿವಾರದ ಕವಾಯತು, ಬೈಠಕ್‍ಗಳಲ್ಲಿ ಮಾನಸಿಕ ಅಸ್ಪೃಶ್ಯವಾಗಿಯೇ ಇರುವ ಉಡುಪಿಯ ಕೋಟ ಶ್ರೀನಿವಾಸ ಪೂಜಾರಿಗೆ ಒಂದಲ್ಲಾ ಎರಡು ಬಾರಿ ಮಂತ್ರಿಗಿರಿ, ಒಂದು ಬಾರಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಂಥ ಗೌರವದ ಸ್ಥಾನ-ಮಾನ ಸಿಕ್ಕಿರುವುದು ಆತ ನಿಷ್ಠನಾಗಿರುವ ಮನುವಾದಿಗಳ “ಸ್ಮೃತಿ” ಗ್ರಂಥವದಿಂದಲ್ಲ; ಅಂಬೇಡ್ಕರ್ ವಿರಚಿತ ಸಂವಿಧಾನದಿಂದ!!

- Advertisement -
- Advertisement -

ಹಿಂದೂತ್ವದ ಪ್ರಬಲ ಪಿಚ್ ಕರಾವಳಿಯಿಂದ ಮಂತ್ರಿಗಿರಿ ಆಟ ಆಡುವ ಅವಕಾಶ “ಸಂಘಸೇವಕ” ಕೋಟ ಶ್ರೀನಿವಾಸ ಪೂಜಾರಿ ಒಬ್ಬರಿಗೆ ಮಾತ್ರ ದಕ್ಕಿದೆ. ತನ್ನೂರಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಶಿವರಾಮ ಕಾರಂತರ ಬರಹಗಳನ್ನು ಓದುತ್ತಲೇ ಬೆಳೆದ ಪೂಜಾರಿ ಮೈಮೇಲೆ ಆರೆಸ್ಸೆಸ್‍ನ ಕೇಸರಿ ದೇವರು ಆವಾಹನೆಯಾಗಿ ಅದ್ಯಾವದೋ ಕಾಲವಾಗಿಹೋಗಿದೆ. ಪೂಜಾರಿಯ ತಾತ್ವಿಕ ತರಲೆ ಬದಿಗಿಟ್ಟು ಆತನ ರಾಜಕೀಯ ಉತ್ಕರ್ಷ ಸೂಕ್ಷ್ಮವಾಗಿ ಗಮನಿಸಿದರೆ ಭಾರತದ ಪ್ರಜಾಪ್ರಭುತ್ವದ ಪವಾಡ ಮತ್ತು ಸಂವಿಧಾನದ ಶ್ರೇಷ್ಠತೆಯ ಮಹಿಮೆ ಒಟ್ಟೊಟ್ಟಿಗೆ ಬಿಚ್ಚಿಕೊಳ್ಳುತ್ತದೆ.

ಹಿಂದುಳಿದ ವರ್ಗದ ತೀರ ಬಡ ಕೃಷಿ ಕುಟುಂಬದ ಹುಡುಗನೊಬ್ಬ ರಾಜ್ಯದ ಪ್ರತಿಷ್ಟಿತ ಕ್ಯಾಬಿನೆಟ್ ಮಂತ್ರಿಯಾಗುತ್ತಾನೆಂದರೆ ಸುಮ್ಮನೆ ಮಾತಲ್ಲ! ಅದು ಈ ನೆಲದ ಸಮಾನತೆಯ ಸಂವಿಧಾನದಿಂದ ಮಾತ್ರ ಸಾಧ್ಯವಾಗುವಂಥದ್ದು. ಇವತ್ತಿಗೂ ಸಂಘಪರಿವಾರದ ಕವಾಯತು, ಬೈಠಕ್‍ಗಳಲ್ಲಿ ಮಾನಸಿಕ ಅಸ್ಪೃಶ್ಯವಾಗಿಯೇ ಇರುವ ಉಡುಪಿಯ ಕೋಟ ಶ್ರೀನಿವಾಸ ಪೂಜಾರಿಗೆ ಒಂದಲ್ಲಾ ಎರಡು ಬಾರಿ ಮಂತ್ರಿಗಿರಿ, ಒಂದು ಬಾರಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಂಥ ಗೌರವದ ಸ್ಥಾನ-ಮಾನ ಸಿಕ್ಕಿರುವುದು ಆತ ನಿಷ್ಠನಾಗಿರುವ ಮನುವಾದಿಗಳ “ಸ್ಮೃತಿ” ಗ್ರಂಥವದಿಂದಲ್ಲ; ಅಂಬೇಡ್ಕರ್ ವಿರಚಿತ ಸಂವಿಧಾನದಿಂದ!!

ಪೂಜಾರಿಯ ರಾಜಕೀಯ ಚರಿತ್ರೆಯ ಅರ್ಧದ ವರೆಗೆ ಸಂಘಪರಿವಾರದ ಮತೀಯ ಪ್ರಭಾವ ಹೆಚ್ಚಿಲ್ಲ. ಆರಂಭದಲ್ಲಿ ಪೂಜಾರಿಯಲ್ಲಿ ಧರ್ಮಾಂದತೆ ಇರಲಿಲ್ಲ. ಎಲ್ಲಿ ಹಿಂದುಳಿದ ವರ್ಗದ ತರುಣರಲ್ಲಿರುವ ಸಾತ್ವಿಕ ಹುಂಬತನವಿತ್ತು. ಭ್ರಷ್ಟತೆ, ಅನ್ಯಾಯ ಕಂಡಾಗ ಕೂಗಾಡುವ ಗುಣವಿತ್ತು. ಈಗ ಬಿಜೆಪಿಯಲ್ಲಿರುವ ಜಯಪ್ರಕಾಶ್ ಹೆಗ್ಡೆ ಜನತಾದಳದಿಂದ ಬ್ರಹ್ಮಾವರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾಗ ಬಿಜೆಪಿಗೊಬ್ಬ ಬಿಲ್ಲವರ ಕ್ಯಾಂಡಿಡೇಟ್ ಬೇಕಿತ್ತು. ಸಿಡಿಮಿಡಿ ಸ್ವಭಾವದ ಹುಡುಗ ಕೋಟ ಶ್ರೀನಿವಾಸ ಪೂಜಾರಿ ಇಂದಲ್ಲ ನಾಳೆಯಾದರೂ ತಮ್ಮ ಕೇಸರಿ ತತ್ವಕ್ಕೆ ತಕ್ಕಂತೆ ಬೆಳೆಯಬಹುದೆಂಬ ಎಣಿಕೆಯಿಂದ ವಿ.ಎಸ್.ಆಚಾರ್ಯರ ಚೆಡ್ಡಿ ಪಠಾಲಂ ಆತನ ಸೆಳೆದುಕೊಂಡಿತ್ತು. ಎರಡು ಮೂರು ಬಾರಿ ಜೆಪಿ ಎದುರು ನಿಂತು ಸೋತಿದ್ದ ಪೂಜಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ಗೆ ಗೆಲ್ಲುತ್ತಲೇ ಇದ್ದರು. ಆತ ಗ್ರಾಪಂ ಸದಸ್ಯನಾಗುತ್ತಿದ್ದುದು ಜನತಾಪಕ್ಷದಿಂದಾಗಿತ್ತು.

ಸಾಮಾಜಿಕ-ರಾಜಕೀಯ ತುಡಿತದ ಪೂಜಾರಿ ಹೊಟ್ಟೆಪಾಡಿಗೆ ಕೋಟದಲ್ಲಿ ಒಂದು ಫೋಟೋ ಸ್ಟೂಡಿಯೋ ಹಾಕಿಕೊಂಡಿದ್ದರು. ಅಲ್ಲಿ ಕುಳಿತು ಬಡವರಿಗೆ ರೇಷನ್ ಕಾರ್ಡ್ ಮಾಡಿಸಿಕೊಡುವುದು, ಅಮಾಯಕ ವಿದ್ಯಾರ್ಥಿಗಳಿಗೆ ಜಾತಿ, ಆದಾಯ ಸರ್ಟಿಫಿಕೇಟ್ ಮಾಡಿಸಿಕೊಡುವುದು, ಅನಾರೋಗ್ಯ ಪೀಡಿತರಿಗೆ ಆಸ್ಪತ್ರೆಗೊಯ್ಯುವುದು ಪೂಜಾರಿ ಮಾಡುತ್ತಿದ್ದರು. ಜಿಪಂನ ವಿರೋಧ ಪಕ್ಷದ ನಾಯಕನಾಗಿ ಸದ್ದು-ಸುದ್ದಿ ಮಾಡುತ್ತಿದ್ದ ಪೂಜಾರಿ ಭಾಗ್ಯ ಖುಲಾಯಿಸಿದ್ದು ಹಠಾತ್ ವಿಧಾನ ಪರಿಷತ್ ಸದಸ್ಯನಾದ ನಂತರವೇ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಚುನಾವಣೆ ಎದುರಾದಾಗ ಕಲ್ಲಡ್ಕ ಭಟ್, ವಿ.ಎಸ್.ಆಚಾರ್ಯ, ಎ.ಜಿ.ಕೊಡ್ಗಿಗಳ ಸ್ಥಳೀಯ ಬಿಜೆಪಿ ಬಾಸ್‍ಗಳ ಗ್ಯಾಂಗಿಗೆ “ಬಿಲ್ಲವ” ಕೋಟ ತುಂಬಬೇಕಾದ ಜರೂರತ್ತು ಎದುರಾಗಿತ್ತು. ಆಗ ಈ ಬ್ರಾಹ್ಮಣ ತಂಡ ತಮಗೆ ನಿಷ್ಠನಾಗಿರುವ ಶ್ರೀನಿವಾಸ ಪೂಜಾರಿಗೆ ಆ ಛಾನ್ಸ್ ಕೊಟ್ಟಿತ್ತು.

ಎರಡು ಬಾರಿ ಎಮ್ಮೆಲ್ಸಿ ಆದಾಗಲೂ ಪೂಜಾರಿ ಹಿಂದೂತ್ವ ಸಂಸ್ಕೃತಿ ಪೂರ್ತಿಯಾಗಿ ಮೈಗೂಡಿಸಿಕೊಂಡಿರಲಿಲ್ಲ. ಒಂಥರಾ ಪ್ರವಾದಿಯಂತೆ ಮಾತಾಡುತ್ತ ಧರ್ಮ ಸಹಿಷ್ಣುತೆ ಪಾಲಿಸುತ್ತಿದ್ದರು. ಇದಕ್ಕೆ ಆತನ ಸಾಹಿತ್ಯಿಕ ಓದು, ಲಂಕೇಶ್ ಪತ್ರಿಕೆ, ಪ್ರತಿವಾರ ಕೊಂಡುಕೊಳ್ಳುತ್ತಿದ್ದುದೇ ಪ್ರಮುಖ ಕಾರಣವಾಗಿತ್ತು. ಆದರೆ ಯಾವಾಗ ಜಗದೀಶ್ ಶೆಟ್ಟರ್ ಸಂಪುಟದಲ್ಲಿ ಮಂತ್ರಿಯಾದರೋ ಆಗ ಶುರುವಾಯ್ತು ಪೂಜಾರಿಯ ಹಿಂದೂತ್ವದ ಪ್ರವರ!! ರಾಜಕೀಯ ಅಸ್ತಿತ್ವದ ಪ್ರಶ್ನೆ ಮತ್ತು ಮಂತ್ರಿ ಮಾಡಿದ್ದ ಕಲ್ಲಡ್ಕ ಭಟ್ಕರ ಋಣ ಪೂಜಾರಿಯಲ್ಲಿ ಪೂರ್ಣಪ್ರಮಾಣದ ಮಾನಸಿಕ ಪರಿವರ್ತನೆ ತಂದಿತ್ತು.

ಆಗ ಮಂತ್ರಿಯಾಗಬೇಕಾಗಿದ್ದು ಕುಂದಾಪುರದ ಅಖಂಡ ಬ್ರಹ್ಮಚಾರಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮಂತ್ರಿ ಮಂಡಲ ರಚನೆ ಸಂದರ್ಭದಲ್ಲಿ ಹಾಲಾಡಿಗೆ ಬೆಂಗಳೂರಿಗೆ ಬಂದು ಪ್ರಮಾಣ ವಚನ ಸ್ವೀಕರ ಮಾಡುವಂತೆ ಆಹ್ವಾನವೂ ಬಂದಿತ್ತಂತೆ. ಆದರೆ ರಾತ್ರೆ ಬೆಳಗಾಗುವುದರಲ್ಲಿ ಆ ಅವಕಾಶ ಪುಜಾರಿ ಪಾಲಾಗಿತ್ತು. ಸಂಘಕ್ಕೆಂದೂ ನಿಷ್ಠನಲ್ಲದ, ಕೌಬಾಯ್ ಗ್ಯಾಂಗಿನ ಬಗ್ಗೆ, ಅನೈತಿಕ ಪೋಲಿಸ್‍ಗಿರಿ ಬಗ್ಗೆ ಗೇಲಿಯೂ ಮಾಡುತ್ತಿದ್ದ ಹಾಲಾಡಿ ಸ್ಥಳೀಯ ಬಿಜೆಪಿಯ ಪ್ರಶ್ನಾತೀತ ದೊರೆ ಕಲ್ಲಡ್ಕ ಭಟ್ಟರ ಕೆಂಗಣ್ಣಿಗೆ ತುತ್ತಾಗಿದ್ದರು. ಬಂಟ ಸಮುದಾಯದ ಹಾಲಾಡಿಗೆ ಮಂತ್ರಿಗಿರಿ ತಪ್ಪಿಸಿದ್ದಷ್ಟೇ ಅಲ್ಲ, ಆತನಿಗಿಂತ ಜೂನಿಯರ್ ಆದ ಬಿಲ್ಲವ ಸಮುದಾಯದ ಪೂಜಾರಿಗೆ ಮಂತ್ರಿ ಮಾಡುವ ಮೂಲಕ ಆತನ ಹೊಟ್ಟೆಯುರಿ ಹೆಚ್ಚು-ಮಾಡುವ ಹಿಕಮತ್ತು ಕಲ್ಲಡ್ಕ ಭಟ್ ಮಾಡಿದ್ದರು. ಇದರಿಂದ ಕೆರಳಿದ್ದ ಹಾಲಾಡಿ ಮತ್ತವನ ಬಂಟರ ಪಡೆ ಪಾಪದ ಮಂತ್ರಿ ಪೂಜಾರಿ ಮೇಲೆ ಮುರಕೊಂಡು ಬಿದ್ದಿತ್ತು.

ಆ ಸಂದಿಗ್ಧ ಸಂದರ್ಭದಲ್ಲಿ ಬಚಾವಾಗಲು ಪೂಜಾರಿಗೆ ಆರೆಸ್ಸೆಸ್, ಹಿಂದೂತ್ವ, ಸಾಬರ ಸತಾಯಿಸುವಿಕೆ ಭೂತ ಆವಾಹನೆ ಅನಿವಾರ್ಯ ಆಗಿಹೋಯಿತು! ಜತೆಗೆ ಮಂತ್ರಿ ಭಾಗ್ಯ ಕರುಣಿಸಿದ್ದ ಕಲ್ಲಡ್ಕ ಭಟ್ಟರಿಗೆ ಸಂಪ್ರೀತಗೊಳಿಸಬೇಕಿತ್ತು. ಹೀಗಾಗಿ ಆತ ಅಲ್ಲಿಂದಾಚೆ ಕಟ್ಟರ್ ಚೆಡ್ಡಿಯಾಗಿ ರೂಪಾಂತರ ಆಗಿಹೋದರು. ನಳಿನ್, ಶೋಭಕ್ಕರ ಸರಿಸಮಕ್ಕೆ ಬೆಂಕಾಭಾಷಣ ಉಗುಳುವ ಕಲೆಕರಗತ ಮಾಡಿಕೊಂಡರು. ಕಳೆದ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಕರಾವಳಿಯ ಬಿಲ್ಲವ-ದೀವರು ಸಮುದಾಯ ಕಡೆಗಣಿಸಿದೆ ಎಂಬ ಅಸಮಧಾನ ಎದ್ದಿತ್ತು. ಆಗ ಕಲ್ಲಡ್ಕ ಭಟ್ ಬಳಸಿದ್ದು ಇದೇ ಪೂಜಾರಿ ಅಸ್ತ್ರ. ಬಿಲ್ಲವರ ಸಮಾಧಾನ ಮಾಡಲು ಕೋಟ ಶ್ರೀನಿವಾಸ ಪೂಜಾರಿಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಾಗಿ ಮಾಡಲಾಯಿತು. ಈಗ ಮತ್ತೆ ಪೂಜಾರಿ ಮಂತ್ರಿಯಾಗಿರುವುದು ಬಿಲ್ಲವ(ಈಡಿಗ) ಕೋಟಾ ಮತ್ತು ಸಂಘ ಸರದಾರರ ಚೇಲಾಗಿರಿ ನಿಷ್ಠೆಯಿಂದ ಮಾಡುತ್ತಾರೆಂಬ ಕ್ಯಾಲಿಬರ್‍ನಿಂದಲೇ. ಈ ಬಾರಿಯೂ ಪೂಜಾರಿಯ ಛೂ ಮಂತ್ರಗಾಳಿಯಲ್ಲಿ ಕಲ್ಲಡ್ಕ ಭಟ್ಟರ ಕರಾಮತ್ತು ನಡೆದಿದೆ.

ಭಟ್ಟರು ಮೊದಲಿನಷ್ಟು ಆರೆಸ್ಸೆಸ್‍ನಲ್ಲಿ ಈಗ ಪ್ರಭಾವಿಯಲ್ಲ. ಆದರೂ ಆತನಿಗೆ ಯಡ್ಡಿಯ ಜತೆ ಮತ್ತು ಪೇಜಾವರ ಸ್ವಾಮಿ ಸಂಗಡ ಗಾಢವಾದ ನಂಟು ಉಳಿಸಿಕೊಂಡಿದ್ದಾರೆ. ಹಾಲಾಡಿ ಮಂತ್ರಿಗಿರಿಗಾಗಿ ಸ್ವಜಾತಿ ಬಂಟರ ಉದ್ಯಮಿಗಳ ಲಾಬಿ ಮೂಲಕ ಪ್ರಬಲ ಪ್ರಯತ್ನ ನಡೆಸಿದ್ದರು. ಏನೇ ಆಗಲಿ ಹಾಲಾಡಿಗೆ ಮಂತ್ರಿಯಾಗಲು ಬಿಡಬಾರದೆಂಬ ಹಠ ಭಟ್ಟರದಾಗಿತ್ತು. ಈಗಿತ್ತಲಾಗಿ ಹಿಂದೂತ್ವ ಮೈಗೂಡಿಸಿಕೊಂಡಿದ್ದ ಹಾಲಾಡಿಗೆ ಅದು ಮಂತ್ರಿ ಆಗಲು ನೆರವಾಗುತ್ತದೆಂಬ ಭಾವನೆಯಿತ್ತು. ಆದರೆ ಕೋಟ ಶ್ರೀನಿವಾಸ ಪೂಜಾರಿಗೆ ಹೋಲಿಸಿದರೆ ಹಾಲಾಡಿ ಹಿಂದೂತ್ವಕ್ಕೆ ಖದಿರಿಲ್ಲ. ಬಿಜೆಪಿಯಲ್ಲಿ ಸೀನಿಯಾರಿಟಿಯೂ ಇಲ್ಲ. ಮಂತ್ರಿ ಮಾಡಿಲ್ಲ ಎಂದು ಕಲ್ಲಡ್ಕ ಭಟ್ಟನ ಬೈಯುತ್ತ ಬಿಜೆಪಿ ಬಿಟ್ಟು ಪಕ್ಚೇತರನಾಗಿ ಶಾಸಕನಾಗಿದ್ದ ಹಾಲಾಡಿ ಕಳೆದ ಬಾರಿ ಅಸೆಂಬ್ಲಿ ಇಲೆಕ್ಷನ್ ಹೊತ್ತಲ್ಲ ಸಂಸದೆ ಶೋಭಕ್ಕನ ಸೆರಗಿಡಿದು ಮತ್ತೆ ಬಿಜೆಪಿ ಸೇರಿದ್ದರು. ಶೋಭಕ್ಕನೂ ಹಾಲಾಡಿಗೆ ಮಂತ್ರಿ ಪದವಿ ಕೊಡಿಸಲು ಕಸರತ್ತು ಮಾಡಿದ್ದರು. ಬಂಟರ ಉದ್ಯಮಿಗಳ ತಂಡವೊಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರರಾವ್ ಬಳಿಗೂ ಹೋಗಿತ್ತು. ಆದರೆ ಅಲ್ಲೇ ಅಪಶಕುನವಾಗಿತ್ತು.

ಒಟ್ಟಿನಲ್ಲಿ ಜಾತಿ ಕೋಟಾ, ರಾಜಕೀಯ ಒಳಸುಳಿಗಳಿಂದ ಭಾಷಣಕೋರ ಮಂತ್ರಿಯಾಗಿದ್ದಾರೆ. ಕರಾವಳಿಯ ತ್ರಿವಳಿ ಜಿಲ್ಲೆಗೆ ಪೂಜಾರಿಯೇ ಈಗ ಸರದಾರ. ಕರಾವಳಿ ಸಮಸ್ಯೆ-ಸಂಕಷ್ಟಗಳ ಸಂಕ್ರಮಣ ಕಾಲದಲ್ಲಿದೆ! ಇದನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನದ ಹೊಣೆಗಾರಿಕೆ ಪೂಜಾರಿ ನಿಭಾಯಿಸಬೇಕಿದೆ. ಆತನ ಸ್ವಜಾತಿ ಬಿಲ್ಲವ, ದೀವರು, ನಾಮಧಾರಿಗಳು ಹಿಂದೂತ್ವ ಸೆಳೆತದಲ್ಲಿ ದಿಕ್ಕು ತಪ್ಪಿದ್ದಾರೆ. ಈ ಸಮುದಾಯ ಹುಡುಗರೇ ಹೆಚ್ಚಿನ ಸಂಖ್ಯೆಯಲ್ಲಿ ಧರ್ಮಯುದ್ಧದ ಬಲಿ ಪಶುಗಳಾಗುತ್ತಿದ್ದಾರೆ. ಇದೆಲ್ಲ ಕೋಟ ಪೂಜಾರಿಯ ಮಂತ್ರಿಗಿರಿಗೆ ಅರ್ಥವಾದೀತಾ? ಮನುವಾದಿ ಬಾಸ್‍ಗಳ ಖುಷಿ ಪಡಿಸುವ ಭರದಲ್ಲಿ ಕುಲಕ್ಕೆ ಮೃತ್ಯು ಕೊಡಲಿ ಕಾವು ಆಗುವರಾ? ಹಿಂದೆಲ್ಲ ಪೂಜಾರಿ ಮಂತ್ರಿಯಾದಾಗ, ವಿರೋಧ ಪಕ್ಷದ ನಾಯಕನಾದಾಗ ಉಡುಪಿ ಜಿಲ್ಲೆಗಾಗಲಿ, ಬಿಲ್ಲವರಿಗಾಗಲಿ ಆದ ಅನುಕೂಲ ಅಷ್ಟಕ್ಕೆಷ್ಟೇ.
ಒಂದಂತೂ ಖರೆ, ಮಂತ್ರಿ ಪೂಜಾರಿ ಸಾಹೇಬರ ಧರ್ಮಕಾರಣಕ್ಕೆ ತೋರಿಸುತ್ತಿರುವ ಬದ್ಧತೆ, ಕೆಚ್ಚುಗಳಲ್ಲಿ ಅರ್ಧದಷ್ಟು ಅಭಿವೃದ್ಧಿ, ಮಾನವೀಯತೆ, ಬಿಲ್ಲವ ತರುಣರ ಟ್ರ್ಯಾಕಿಗೆ ತರುವುದಕ್ಕೆ ತೋರಿಸಿದರೆ ಸಾಕು; ಕರಾವಳಿಯ ಪರ್ವ ಎಂದೆಂದೂ ಮರೆಯದ ಕಾಲಘಟ್ಟವಾಗಿ ದಾಖಲಾಗುತ್ತದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...