Homeಕರ್ನಾಟಕಫೋಟೋಗ್ರಾಫರ್ ಪೂಜಾರಿ ಮಂತ್ರಿಯಾದ ಮಹಿಮೆ! ಇದು ಸಂವಿಧಾನದ ಪವಾಡ!!

ಫೋಟೋಗ್ರಾಫರ್ ಪೂಜಾರಿ ಮಂತ್ರಿಯಾದ ಮಹಿಮೆ! ಇದು ಸಂವಿಧಾನದ ಪವಾಡ!!

ಇವತ್ತಿಗೂ ಸಂಘಪರಿವಾರದ ಕವಾಯತು, ಬೈಠಕ್‍ಗಳಲ್ಲಿ ಮಾನಸಿಕ ಅಸ್ಪೃಶ್ಯವಾಗಿಯೇ ಇರುವ ಉಡುಪಿಯ ಕೋಟ ಶ್ರೀನಿವಾಸ ಪೂಜಾರಿಗೆ ಒಂದಲ್ಲಾ ಎರಡು ಬಾರಿ ಮಂತ್ರಿಗಿರಿ, ಒಂದು ಬಾರಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಂಥ ಗೌರವದ ಸ್ಥಾನ-ಮಾನ ಸಿಕ್ಕಿರುವುದು ಆತ ನಿಷ್ಠನಾಗಿರುವ ಮನುವಾದಿಗಳ “ಸ್ಮೃತಿ” ಗ್ರಂಥವದಿಂದಲ್ಲ; ಅಂಬೇಡ್ಕರ್ ವಿರಚಿತ ಸಂವಿಧಾನದಿಂದ!!

- Advertisement -
- Advertisement -

ಹಿಂದೂತ್ವದ ಪ್ರಬಲ ಪಿಚ್ ಕರಾವಳಿಯಿಂದ ಮಂತ್ರಿಗಿರಿ ಆಟ ಆಡುವ ಅವಕಾಶ “ಸಂಘಸೇವಕ” ಕೋಟ ಶ್ರೀನಿವಾಸ ಪೂಜಾರಿ ಒಬ್ಬರಿಗೆ ಮಾತ್ರ ದಕ್ಕಿದೆ. ತನ್ನೂರಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಶಿವರಾಮ ಕಾರಂತರ ಬರಹಗಳನ್ನು ಓದುತ್ತಲೇ ಬೆಳೆದ ಪೂಜಾರಿ ಮೈಮೇಲೆ ಆರೆಸ್ಸೆಸ್‍ನ ಕೇಸರಿ ದೇವರು ಆವಾಹನೆಯಾಗಿ ಅದ್ಯಾವದೋ ಕಾಲವಾಗಿಹೋಗಿದೆ. ಪೂಜಾರಿಯ ತಾತ್ವಿಕ ತರಲೆ ಬದಿಗಿಟ್ಟು ಆತನ ರಾಜಕೀಯ ಉತ್ಕರ್ಷ ಸೂಕ್ಷ್ಮವಾಗಿ ಗಮನಿಸಿದರೆ ಭಾರತದ ಪ್ರಜಾಪ್ರಭುತ್ವದ ಪವಾಡ ಮತ್ತು ಸಂವಿಧಾನದ ಶ್ರೇಷ್ಠತೆಯ ಮಹಿಮೆ ಒಟ್ಟೊಟ್ಟಿಗೆ ಬಿಚ್ಚಿಕೊಳ್ಳುತ್ತದೆ.

ಹಿಂದುಳಿದ ವರ್ಗದ ತೀರ ಬಡ ಕೃಷಿ ಕುಟುಂಬದ ಹುಡುಗನೊಬ್ಬ ರಾಜ್ಯದ ಪ್ರತಿಷ್ಟಿತ ಕ್ಯಾಬಿನೆಟ್ ಮಂತ್ರಿಯಾಗುತ್ತಾನೆಂದರೆ ಸುಮ್ಮನೆ ಮಾತಲ್ಲ! ಅದು ಈ ನೆಲದ ಸಮಾನತೆಯ ಸಂವಿಧಾನದಿಂದ ಮಾತ್ರ ಸಾಧ್ಯವಾಗುವಂಥದ್ದು. ಇವತ್ತಿಗೂ ಸಂಘಪರಿವಾರದ ಕವಾಯತು, ಬೈಠಕ್‍ಗಳಲ್ಲಿ ಮಾನಸಿಕ ಅಸ್ಪೃಶ್ಯವಾಗಿಯೇ ಇರುವ ಉಡುಪಿಯ ಕೋಟ ಶ್ರೀನಿವಾಸ ಪೂಜಾರಿಗೆ ಒಂದಲ್ಲಾ ಎರಡು ಬಾರಿ ಮಂತ್ರಿಗಿರಿ, ಒಂದು ಬಾರಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಂಥ ಗೌರವದ ಸ್ಥಾನ-ಮಾನ ಸಿಕ್ಕಿರುವುದು ಆತ ನಿಷ್ಠನಾಗಿರುವ ಮನುವಾದಿಗಳ “ಸ್ಮೃತಿ” ಗ್ರಂಥವದಿಂದಲ್ಲ; ಅಂಬೇಡ್ಕರ್ ವಿರಚಿತ ಸಂವಿಧಾನದಿಂದ!!

ಪೂಜಾರಿಯ ರಾಜಕೀಯ ಚರಿತ್ರೆಯ ಅರ್ಧದ ವರೆಗೆ ಸಂಘಪರಿವಾರದ ಮತೀಯ ಪ್ರಭಾವ ಹೆಚ್ಚಿಲ್ಲ. ಆರಂಭದಲ್ಲಿ ಪೂಜಾರಿಯಲ್ಲಿ ಧರ್ಮಾಂದತೆ ಇರಲಿಲ್ಲ. ಎಲ್ಲಿ ಹಿಂದುಳಿದ ವರ್ಗದ ತರುಣರಲ್ಲಿರುವ ಸಾತ್ವಿಕ ಹುಂಬತನವಿತ್ತು. ಭ್ರಷ್ಟತೆ, ಅನ್ಯಾಯ ಕಂಡಾಗ ಕೂಗಾಡುವ ಗುಣವಿತ್ತು. ಈಗ ಬಿಜೆಪಿಯಲ್ಲಿರುವ ಜಯಪ್ರಕಾಶ್ ಹೆಗ್ಡೆ ಜನತಾದಳದಿಂದ ಬ್ರಹ್ಮಾವರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾಗ ಬಿಜೆಪಿಗೊಬ್ಬ ಬಿಲ್ಲವರ ಕ್ಯಾಂಡಿಡೇಟ್ ಬೇಕಿತ್ತು. ಸಿಡಿಮಿಡಿ ಸ್ವಭಾವದ ಹುಡುಗ ಕೋಟ ಶ್ರೀನಿವಾಸ ಪೂಜಾರಿ ಇಂದಲ್ಲ ನಾಳೆಯಾದರೂ ತಮ್ಮ ಕೇಸರಿ ತತ್ವಕ್ಕೆ ತಕ್ಕಂತೆ ಬೆಳೆಯಬಹುದೆಂಬ ಎಣಿಕೆಯಿಂದ ವಿ.ಎಸ್.ಆಚಾರ್ಯರ ಚೆಡ್ಡಿ ಪಠಾಲಂ ಆತನ ಸೆಳೆದುಕೊಂಡಿತ್ತು. ಎರಡು ಮೂರು ಬಾರಿ ಜೆಪಿ ಎದುರು ನಿಂತು ಸೋತಿದ್ದ ಪೂಜಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ಗೆ ಗೆಲ್ಲುತ್ತಲೇ ಇದ್ದರು. ಆತ ಗ್ರಾಪಂ ಸದಸ್ಯನಾಗುತ್ತಿದ್ದುದು ಜನತಾಪಕ್ಷದಿಂದಾಗಿತ್ತು.

ಸಾಮಾಜಿಕ-ರಾಜಕೀಯ ತುಡಿತದ ಪೂಜಾರಿ ಹೊಟ್ಟೆಪಾಡಿಗೆ ಕೋಟದಲ್ಲಿ ಒಂದು ಫೋಟೋ ಸ್ಟೂಡಿಯೋ ಹಾಕಿಕೊಂಡಿದ್ದರು. ಅಲ್ಲಿ ಕುಳಿತು ಬಡವರಿಗೆ ರೇಷನ್ ಕಾರ್ಡ್ ಮಾಡಿಸಿಕೊಡುವುದು, ಅಮಾಯಕ ವಿದ್ಯಾರ್ಥಿಗಳಿಗೆ ಜಾತಿ, ಆದಾಯ ಸರ್ಟಿಫಿಕೇಟ್ ಮಾಡಿಸಿಕೊಡುವುದು, ಅನಾರೋಗ್ಯ ಪೀಡಿತರಿಗೆ ಆಸ್ಪತ್ರೆಗೊಯ್ಯುವುದು ಪೂಜಾರಿ ಮಾಡುತ್ತಿದ್ದರು. ಜಿಪಂನ ವಿರೋಧ ಪಕ್ಷದ ನಾಯಕನಾಗಿ ಸದ್ದು-ಸುದ್ದಿ ಮಾಡುತ್ತಿದ್ದ ಪೂಜಾರಿ ಭಾಗ್ಯ ಖುಲಾಯಿಸಿದ್ದು ಹಠಾತ್ ವಿಧಾನ ಪರಿಷತ್ ಸದಸ್ಯನಾದ ನಂತರವೇ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಚುನಾವಣೆ ಎದುರಾದಾಗ ಕಲ್ಲಡ್ಕ ಭಟ್, ವಿ.ಎಸ್.ಆಚಾರ್ಯ, ಎ.ಜಿ.ಕೊಡ್ಗಿಗಳ ಸ್ಥಳೀಯ ಬಿಜೆಪಿ ಬಾಸ್‍ಗಳ ಗ್ಯಾಂಗಿಗೆ “ಬಿಲ್ಲವ” ಕೋಟ ತುಂಬಬೇಕಾದ ಜರೂರತ್ತು ಎದುರಾಗಿತ್ತು. ಆಗ ಈ ಬ್ರಾಹ್ಮಣ ತಂಡ ತಮಗೆ ನಿಷ್ಠನಾಗಿರುವ ಶ್ರೀನಿವಾಸ ಪೂಜಾರಿಗೆ ಆ ಛಾನ್ಸ್ ಕೊಟ್ಟಿತ್ತು.

ಎರಡು ಬಾರಿ ಎಮ್ಮೆಲ್ಸಿ ಆದಾಗಲೂ ಪೂಜಾರಿ ಹಿಂದೂತ್ವ ಸಂಸ್ಕೃತಿ ಪೂರ್ತಿಯಾಗಿ ಮೈಗೂಡಿಸಿಕೊಂಡಿರಲಿಲ್ಲ. ಒಂಥರಾ ಪ್ರವಾದಿಯಂತೆ ಮಾತಾಡುತ್ತ ಧರ್ಮ ಸಹಿಷ್ಣುತೆ ಪಾಲಿಸುತ್ತಿದ್ದರು. ಇದಕ್ಕೆ ಆತನ ಸಾಹಿತ್ಯಿಕ ಓದು, ಲಂಕೇಶ್ ಪತ್ರಿಕೆ, ಪ್ರತಿವಾರ ಕೊಂಡುಕೊಳ್ಳುತ್ತಿದ್ದುದೇ ಪ್ರಮುಖ ಕಾರಣವಾಗಿತ್ತು. ಆದರೆ ಯಾವಾಗ ಜಗದೀಶ್ ಶೆಟ್ಟರ್ ಸಂಪುಟದಲ್ಲಿ ಮಂತ್ರಿಯಾದರೋ ಆಗ ಶುರುವಾಯ್ತು ಪೂಜಾರಿಯ ಹಿಂದೂತ್ವದ ಪ್ರವರ!! ರಾಜಕೀಯ ಅಸ್ತಿತ್ವದ ಪ್ರಶ್ನೆ ಮತ್ತು ಮಂತ್ರಿ ಮಾಡಿದ್ದ ಕಲ್ಲಡ್ಕ ಭಟ್ಕರ ಋಣ ಪೂಜಾರಿಯಲ್ಲಿ ಪೂರ್ಣಪ್ರಮಾಣದ ಮಾನಸಿಕ ಪರಿವರ್ತನೆ ತಂದಿತ್ತು.

ಆಗ ಮಂತ್ರಿಯಾಗಬೇಕಾಗಿದ್ದು ಕುಂದಾಪುರದ ಅಖಂಡ ಬ್ರಹ್ಮಚಾರಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮಂತ್ರಿ ಮಂಡಲ ರಚನೆ ಸಂದರ್ಭದಲ್ಲಿ ಹಾಲಾಡಿಗೆ ಬೆಂಗಳೂರಿಗೆ ಬಂದು ಪ್ರಮಾಣ ವಚನ ಸ್ವೀಕರ ಮಾಡುವಂತೆ ಆಹ್ವಾನವೂ ಬಂದಿತ್ತಂತೆ. ಆದರೆ ರಾತ್ರೆ ಬೆಳಗಾಗುವುದರಲ್ಲಿ ಆ ಅವಕಾಶ ಪುಜಾರಿ ಪಾಲಾಗಿತ್ತು. ಸಂಘಕ್ಕೆಂದೂ ನಿಷ್ಠನಲ್ಲದ, ಕೌಬಾಯ್ ಗ್ಯಾಂಗಿನ ಬಗ್ಗೆ, ಅನೈತಿಕ ಪೋಲಿಸ್‍ಗಿರಿ ಬಗ್ಗೆ ಗೇಲಿಯೂ ಮಾಡುತ್ತಿದ್ದ ಹಾಲಾಡಿ ಸ್ಥಳೀಯ ಬಿಜೆಪಿಯ ಪ್ರಶ್ನಾತೀತ ದೊರೆ ಕಲ್ಲಡ್ಕ ಭಟ್ಟರ ಕೆಂಗಣ್ಣಿಗೆ ತುತ್ತಾಗಿದ್ದರು. ಬಂಟ ಸಮುದಾಯದ ಹಾಲಾಡಿಗೆ ಮಂತ್ರಿಗಿರಿ ತಪ್ಪಿಸಿದ್ದಷ್ಟೇ ಅಲ್ಲ, ಆತನಿಗಿಂತ ಜೂನಿಯರ್ ಆದ ಬಿಲ್ಲವ ಸಮುದಾಯದ ಪೂಜಾರಿಗೆ ಮಂತ್ರಿ ಮಾಡುವ ಮೂಲಕ ಆತನ ಹೊಟ್ಟೆಯುರಿ ಹೆಚ್ಚು-ಮಾಡುವ ಹಿಕಮತ್ತು ಕಲ್ಲಡ್ಕ ಭಟ್ ಮಾಡಿದ್ದರು. ಇದರಿಂದ ಕೆರಳಿದ್ದ ಹಾಲಾಡಿ ಮತ್ತವನ ಬಂಟರ ಪಡೆ ಪಾಪದ ಮಂತ್ರಿ ಪೂಜಾರಿ ಮೇಲೆ ಮುರಕೊಂಡು ಬಿದ್ದಿತ್ತು.

ಆ ಸಂದಿಗ್ಧ ಸಂದರ್ಭದಲ್ಲಿ ಬಚಾವಾಗಲು ಪೂಜಾರಿಗೆ ಆರೆಸ್ಸೆಸ್, ಹಿಂದೂತ್ವ, ಸಾಬರ ಸತಾಯಿಸುವಿಕೆ ಭೂತ ಆವಾಹನೆ ಅನಿವಾರ್ಯ ಆಗಿಹೋಯಿತು! ಜತೆಗೆ ಮಂತ್ರಿ ಭಾಗ್ಯ ಕರುಣಿಸಿದ್ದ ಕಲ್ಲಡ್ಕ ಭಟ್ಟರಿಗೆ ಸಂಪ್ರೀತಗೊಳಿಸಬೇಕಿತ್ತು. ಹೀಗಾಗಿ ಆತ ಅಲ್ಲಿಂದಾಚೆ ಕಟ್ಟರ್ ಚೆಡ್ಡಿಯಾಗಿ ರೂಪಾಂತರ ಆಗಿಹೋದರು. ನಳಿನ್, ಶೋಭಕ್ಕರ ಸರಿಸಮಕ್ಕೆ ಬೆಂಕಾಭಾಷಣ ಉಗುಳುವ ಕಲೆಕರಗತ ಮಾಡಿಕೊಂಡರು. ಕಳೆದ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಕರಾವಳಿಯ ಬಿಲ್ಲವ-ದೀವರು ಸಮುದಾಯ ಕಡೆಗಣಿಸಿದೆ ಎಂಬ ಅಸಮಧಾನ ಎದ್ದಿತ್ತು. ಆಗ ಕಲ್ಲಡ್ಕ ಭಟ್ ಬಳಸಿದ್ದು ಇದೇ ಪೂಜಾರಿ ಅಸ್ತ್ರ. ಬಿಲ್ಲವರ ಸಮಾಧಾನ ಮಾಡಲು ಕೋಟ ಶ್ರೀನಿವಾಸ ಪೂಜಾರಿಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಾಗಿ ಮಾಡಲಾಯಿತು. ಈಗ ಮತ್ತೆ ಪೂಜಾರಿ ಮಂತ್ರಿಯಾಗಿರುವುದು ಬಿಲ್ಲವ(ಈಡಿಗ) ಕೋಟಾ ಮತ್ತು ಸಂಘ ಸರದಾರರ ಚೇಲಾಗಿರಿ ನಿಷ್ಠೆಯಿಂದ ಮಾಡುತ್ತಾರೆಂಬ ಕ್ಯಾಲಿಬರ್‍ನಿಂದಲೇ. ಈ ಬಾರಿಯೂ ಪೂಜಾರಿಯ ಛೂ ಮಂತ್ರಗಾಳಿಯಲ್ಲಿ ಕಲ್ಲಡ್ಕ ಭಟ್ಟರ ಕರಾಮತ್ತು ನಡೆದಿದೆ.

ಭಟ್ಟರು ಮೊದಲಿನಷ್ಟು ಆರೆಸ್ಸೆಸ್‍ನಲ್ಲಿ ಈಗ ಪ್ರಭಾವಿಯಲ್ಲ. ಆದರೂ ಆತನಿಗೆ ಯಡ್ಡಿಯ ಜತೆ ಮತ್ತು ಪೇಜಾವರ ಸ್ವಾಮಿ ಸಂಗಡ ಗಾಢವಾದ ನಂಟು ಉಳಿಸಿಕೊಂಡಿದ್ದಾರೆ. ಹಾಲಾಡಿ ಮಂತ್ರಿಗಿರಿಗಾಗಿ ಸ್ವಜಾತಿ ಬಂಟರ ಉದ್ಯಮಿಗಳ ಲಾಬಿ ಮೂಲಕ ಪ್ರಬಲ ಪ್ರಯತ್ನ ನಡೆಸಿದ್ದರು. ಏನೇ ಆಗಲಿ ಹಾಲಾಡಿಗೆ ಮಂತ್ರಿಯಾಗಲು ಬಿಡಬಾರದೆಂಬ ಹಠ ಭಟ್ಟರದಾಗಿತ್ತು. ಈಗಿತ್ತಲಾಗಿ ಹಿಂದೂತ್ವ ಮೈಗೂಡಿಸಿಕೊಂಡಿದ್ದ ಹಾಲಾಡಿಗೆ ಅದು ಮಂತ್ರಿ ಆಗಲು ನೆರವಾಗುತ್ತದೆಂಬ ಭಾವನೆಯಿತ್ತು. ಆದರೆ ಕೋಟ ಶ್ರೀನಿವಾಸ ಪೂಜಾರಿಗೆ ಹೋಲಿಸಿದರೆ ಹಾಲಾಡಿ ಹಿಂದೂತ್ವಕ್ಕೆ ಖದಿರಿಲ್ಲ. ಬಿಜೆಪಿಯಲ್ಲಿ ಸೀನಿಯಾರಿಟಿಯೂ ಇಲ್ಲ. ಮಂತ್ರಿ ಮಾಡಿಲ್ಲ ಎಂದು ಕಲ್ಲಡ್ಕ ಭಟ್ಟನ ಬೈಯುತ್ತ ಬಿಜೆಪಿ ಬಿಟ್ಟು ಪಕ್ಚೇತರನಾಗಿ ಶಾಸಕನಾಗಿದ್ದ ಹಾಲಾಡಿ ಕಳೆದ ಬಾರಿ ಅಸೆಂಬ್ಲಿ ಇಲೆಕ್ಷನ್ ಹೊತ್ತಲ್ಲ ಸಂಸದೆ ಶೋಭಕ್ಕನ ಸೆರಗಿಡಿದು ಮತ್ತೆ ಬಿಜೆಪಿ ಸೇರಿದ್ದರು. ಶೋಭಕ್ಕನೂ ಹಾಲಾಡಿಗೆ ಮಂತ್ರಿ ಪದವಿ ಕೊಡಿಸಲು ಕಸರತ್ತು ಮಾಡಿದ್ದರು. ಬಂಟರ ಉದ್ಯಮಿಗಳ ತಂಡವೊಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರರಾವ್ ಬಳಿಗೂ ಹೋಗಿತ್ತು. ಆದರೆ ಅಲ್ಲೇ ಅಪಶಕುನವಾಗಿತ್ತು.

ಒಟ್ಟಿನಲ್ಲಿ ಜಾತಿ ಕೋಟಾ, ರಾಜಕೀಯ ಒಳಸುಳಿಗಳಿಂದ ಭಾಷಣಕೋರ ಮಂತ್ರಿಯಾಗಿದ್ದಾರೆ. ಕರಾವಳಿಯ ತ್ರಿವಳಿ ಜಿಲ್ಲೆಗೆ ಪೂಜಾರಿಯೇ ಈಗ ಸರದಾರ. ಕರಾವಳಿ ಸಮಸ್ಯೆ-ಸಂಕಷ್ಟಗಳ ಸಂಕ್ರಮಣ ಕಾಲದಲ್ಲಿದೆ! ಇದನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನದ ಹೊಣೆಗಾರಿಕೆ ಪೂಜಾರಿ ನಿಭಾಯಿಸಬೇಕಿದೆ. ಆತನ ಸ್ವಜಾತಿ ಬಿಲ್ಲವ, ದೀವರು, ನಾಮಧಾರಿಗಳು ಹಿಂದೂತ್ವ ಸೆಳೆತದಲ್ಲಿ ದಿಕ್ಕು ತಪ್ಪಿದ್ದಾರೆ. ಈ ಸಮುದಾಯ ಹುಡುಗರೇ ಹೆಚ್ಚಿನ ಸಂಖ್ಯೆಯಲ್ಲಿ ಧರ್ಮಯುದ್ಧದ ಬಲಿ ಪಶುಗಳಾಗುತ್ತಿದ್ದಾರೆ. ಇದೆಲ್ಲ ಕೋಟ ಪೂಜಾರಿಯ ಮಂತ್ರಿಗಿರಿಗೆ ಅರ್ಥವಾದೀತಾ? ಮನುವಾದಿ ಬಾಸ್‍ಗಳ ಖುಷಿ ಪಡಿಸುವ ಭರದಲ್ಲಿ ಕುಲಕ್ಕೆ ಮೃತ್ಯು ಕೊಡಲಿ ಕಾವು ಆಗುವರಾ? ಹಿಂದೆಲ್ಲ ಪೂಜಾರಿ ಮಂತ್ರಿಯಾದಾಗ, ವಿರೋಧ ಪಕ್ಷದ ನಾಯಕನಾದಾಗ ಉಡುಪಿ ಜಿಲ್ಲೆಗಾಗಲಿ, ಬಿಲ್ಲವರಿಗಾಗಲಿ ಆದ ಅನುಕೂಲ ಅಷ್ಟಕ್ಕೆಷ್ಟೇ.
ಒಂದಂತೂ ಖರೆ, ಮಂತ್ರಿ ಪೂಜಾರಿ ಸಾಹೇಬರ ಧರ್ಮಕಾರಣಕ್ಕೆ ತೋರಿಸುತ್ತಿರುವ ಬದ್ಧತೆ, ಕೆಚ್ಚುಗಳಲ್ಲಿ ಅರ್ಧದಷ್ಟು ಅಭಿವೃದ್ಧಿ, ಮಾನವೀಯತೆ, ಬಿಲ್ಲವ ತರುಣರ ಟ್ರ್ಯಾಕಿಗೆ ತರುವುದಕ್ಕೆ ತೋರಿಸಿದರೆ ಸಾಕು; ಕರಾವಳಿಯ ಪರ್ವ ಎಂದೆಂದೂ ಮರೆಯದ ಕಾಲಘಟ್ಟವಾಗಿ ದಾಖಲಾಗುತ್ತದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...