Homeಕರ್ನಾಟಕಫೋಟೋಗ್ರಾಫರ್ ಪೂಜಾರಿ ಮಂತ್ರಿಯಾದ ಮಹಿಮೆ! ಇದು ಸಂವಿಧಾನದ ಪವಾಡ!!

ಫೋಟೋಗ್ರಾಫರ್ ಪೂಜಾರಿ ಮಂತ್ರಿಯಾದ ಮಹಿಮೆ! ಇದು ಸಂವಿಧಾನದ ಪವಾಡ!!

ಇವತ್ತಿಗೂ ಸಂಘಪರಿವಾರದ ಕವಾಯತು, ಬೈಠಕ್‍ಗಳಲ್ಲಿ ಮಾನಸಿಕ ಅಸ್ಪೃಶ್ಯವಾಗಿಯೇ ಇರುವ ಉಡುಪಿಯ ಕೋಟ ಶ್ರೀನಿವಾಸ ಪೂಜಾರಿಗೆ ಒಂದಲ್ಲಾ ಎರಡು ಬಾರಿ ಮಂತ್ರಿಗಿರಿ, ಒಂದು ಬಾರಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಂಥ ಗೌರವದ ಸ್ಥಾನ-ಮಾನ ಸಿಕ್ಕಿರುವುದು ಆತ ನಿಷ್ಠನಾಗಿರುವ ಮನುವಾದಿಗಳ “ಸ್ಮೃತಿ” ಗ್ರಂಥವದಿಂದಲ್ಲ; ಅಂಬೇಡ್ಕರ್ ವಿರಚಿತ ಸಂವಿಧಾನದಿಂದ!!

- Advertisement -
- Advertisement -

ಹಿಂದೂತ್ವದ ಪ್ರಬಲ ಪಿಚ್ ಕರಾವಳಿಯಿಂದ ಮಂತ್ರಿಗಿರಿ ಆಟ ಆಡುವ ಅವಕಾಶ “ಸಂಘಸೇವಕ” ಕೋಟ ಶ್ರೀನಿವಾಸ ಪೂಜಾರಿ ಒಬ್ಬರಿಗೆ ಮಾತ್ರ ದಕ್ಕಿದೆ. ತನ್ನೂರಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಶಿವರಾಮ ಕಾರಂತರ ಬರಹಗಳನ್ನು ಓದುತ್ತಲೇ ಬೆಳೆದ ಪೂಜಾರಿ ಮೈಮೇಲೆ ಆರೆಸ್ಸೆಸ್‍ನ ಕೇಸರಿ ದೇವರು ಆವಾಹನೆಯಾಗಿ ಅದ್ಯಾವದೋ ಕಾಲವಾಗಿಹೋಗಿದೆ. ಪೂಜಾರಿಯ ತಾತ್ವಿಕ ತರಲೆ ಬದಿಗಿಟ್ಟು ಆತನ ರಾಜಕೀಯ ಉತ್ಕರ್ಷ ಸೂಕ್ಷ್ಮವಾಗಿ ಗಮನಿಸಿದರೆ ಭಾರತದ ಪ್ರಜಾಪ್ರಭುತ್ವದ ಪವಾಡ ಮತ್ತು ಸಂವಿಧಾನದ ಶ್ರೇಷ್ಠತೆಯ ಮಹಿಮೆ ಒಟ್ಟೊಟ್ಟಿಗೆ ಬಿಚ್ಚಿಕೊಳ್ಳುತ್ತದೆ.

ಹಿಂದುಳಿದ ವರ್ಗದ ತೀರ ಬಡ ಕೃಷಿ ಕುಟುಂಬದ ಹುಡುಗನೊಬ್ಬ ರಾಜ್ಯದ ಪ್ರತಿಷ್ಟಿತ ಕ್ಯಾಬಿನೆಟ್ ಮಂತ್ರಿಯಾಗುತ್ತಾನೆಂದರೆ ಸುಮ್ಮನೆ ಮಾತಲ್ಲ! ಅದು ಈ ನೆಲದ ಸಮಾನತೆಯ ಸಂವಿಧಾನದಿಂದ ಮಾತ್ರ ಸಾಧ್ಯವಾಗುವಂಥದ್ದು. ಇವತ್ತಿಗೂ ಸಂಘಪರಿವಾರದ ಕವಾಯತು, ಬೈಠಕ್‍ಗಳಲ್ಲಿ ಮಾನಸಿಕ ಅಸ್ಪೃಶ್ಯವಾಗಿಯೇ ಇರುವ ಉಡುಪಿಯ ಕೋಟ ಶ್ರೀನಿವಾಸ ಪೂಜಾರಿಗೆ ಒಂದಲ್ಲಾ ಎರಡು ಬಾರಿ ಮಂತ್ರಿಗಿರಿ, ಒಂದು ಬಾರಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಂಥ ಗೌರವದ ಸ್ಥಾನ-ಮಾನ ಸಿಕ್ಕಿರುವುದು ಆತ ನಿಷ್ಠನಾಗಿರುವ ಮನುವಾದಿಗಳ “ಸ್ಮೃತಿ” ಗ್ರಂಥವದಿಂದಲ್ಲ; ಅಂಬೇಡ್ಕರ್ ವಿರಚಿತ ಸಂವಿಧಾನದಿಂದ!!

ಪೂಜಾರಿಯ ರಾಜಕೀಯ ಚರಿತ್ರೆಯ ಅರ್ಧದ ವರೆಗೆ ಸಂಘಪರಿವಾರದ ಮತೀಯ ಪ್ರಭಾವ ಹೆಚ್ಚಿಲ್ಲ. ಆರಂಭದಲ್ಲಿ ಪೂಜಾರಿಯಲ್ಲಿ ಧರ್ಮಾಂದತೆ ಇರಲಿಲ್ಲ. ಎಲ್ಲಿ ಹಿಂದುಳಿದ ವರ್ಗದ ತರುಣರಲ್ಲಿರುವ ಸಾತ್ವಿಕ ಹುಂಬತನವಿತ್ತು. ಭ್ರಷ್ಟತೆ, ಅನ್ಯಾಯ ಕಂಡಾಗ ಕೂಗಾಡುವ ಗುಣವಿತ್ತು. ಈಗ ಬಿಜೆಪಿಯಲ್ಲಿರುವ ಜಯಪ್ರಕಾಶ್ ಹೆಗ್ಡೆ ಜನತಾದಳದಿಂದ ಬ್ರಹ್ಮಾವರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾಗ ಬಿಜೆಪಿಗೊಬ್ಬ ಬಿಲ್ಲವರ ಕ್ಯಾಂಡಿಡೇಟ್ ಬೇಕಿತ್ತು. ಸಿಡಿಮಿಡಿ ಸ್ವಭಾವದ ಹುಡುಗ ಕೋಟ ಶ್ರೀನಿವಾಸ ಪೂಜಾರಿ ಇಂದಲ್ಲ ನಾಳೆಯಾದರೂ ತಮ್ಮ ಕೇಸರಿ ತತ್ವಕ್ಕೆ ತಕ್ಕಂತೆ ಬೆಳೆಯಬಹುದೆಂಬ ಎಣಿಕೆಯಿಂದ ವಿ.ಎಸ್.ಆಚಾರ್ಯರ ಚೆಡ್ಡಿ ಪಠಾಲಂ ಆತನ ಸೆಳೆದುಕೊಂಡಿತ್ತು. ಎರಡು ಮೂರು ಬಾರಿ ಜೆಪಿ ಎದುರು ನಿಂತು ಸೋತಿದ್ದ ಪೂಜಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ಗೆ ಗೆಲ್ಲುತ್ತಲೇ ಇದ್ದರು. ಆತ ಗ್ರಾಪಂ ಸದಸ್ಯನಾಗುತ್ತಿದ್ದುದು ಜನತಾಪಕ್ಷದಿಂದಾಗಿತ್ತು.

ಸಾಮಾಜಿಕ-ರಾಜಕೀಯ ತುಡಿತದ ಪೂಜಾರಿ ಹೊಟ್ಟೆಪಾಡಿಗೆ ಕೋಟದಲ್ಲಿ ಒಂದು ಫೋಟೋ ಸ್ಟೂಡಿಯೋ ಹಾಕಿಕೊಂಡಿದ್ದರು. ಅಲ್ಲಿ ಕುಳಿತು ಬಡವರಿಗೆ ರೇಷನ್ ಕಾರ್ಡ್ ಮಾಡಿಸಿಕೊಡುವುದು, ಅಮಾಯಕ ವಿದ್ಯಾರ್ಥಿಗಳಿಗೆ ಜಾತಿ, ಆದಾಯ ಸರ್ಟಿಫಿಕೇಟ್ ಮಾಡಿಸಿಕೊಡುವುದು, ಅನಾರೋಗ್ಯ ಪೀಡಿತರಿಗೆ ಆಸ್ಪತ್ರೆಗೊಯ್ಯುವುದು ಪೂಜಾರಿ ಮಾಡುತ್ತಿದ್ದರು. ಜಿಪಂನ ವಿರೋಧ ಪಕ್ಷದ ನಾಯಕನಾಗಿ ಸದ್ದು-ಸುದ್ದಿ ಮಾಡುತ್ತಿದ್ದ ಪೂಜಾರಿ ಭಾಗ್ಯ ಖುಲಾಯಿಸಿದ್ದು ಹಠಾತ್ ವಿಧಾನ ಪರಿಷತ್ ಸದಸ್ಯನಾದ ನಂತರವೇ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಚುನಾವಣೆ ಎದುರಾದಾಗ ಕಲ್ಲಡ್ಕ ಭಟ್, ವಿ.ಎಸ್.ಆಚಾರ್ಯ, ಎ.ಜಿ.ಕೊಡ್ಗಿಗಳ ಸ್ಥಳೀಯ ಬಿಜೆಪಿ ಬಾಸ್‍ಗಳ ಗ್ಯಾಂಗಿಗೆ “ಬಿಲ್ಲವ” ಕೋಟ ತುಂಬಬೇಕಾದ ಜರೂರತ್ತು ಎದುರಾಗಿತ್ತು. ಆಗ ಈ ಬ್ರಾಹ್ಮಣ ತಂಡ ತಮಗೆ ನಿಷ್ಠನಾಗಿರುವ ಶ್ರೀನಿವಾಸ ಪೂಜಾರಿಗೆ ಆ ಛಾನ್ಸ್ ಕೊಟ್ಟಿತ್ತು.

ಎರಡು ಬಾರಿ ಎಮ್ಮೆಲ್ಸಿ ಆದಾಗಲೂ ಪೂಜಾರಿ ಹಿಂದೂತ್ವ ಸಂಸ್ಕೃತಿ ಪೂರ್ತಿಯಾಗಿ ಮೈಗೂಡಿಸಿಕೊಂಡಿರಲಿಲ್ಲ. ಒಂಥರಾ ಪ್ರವಾದಿಯಂತೆ ಮಾತಾಡುತ್ತ ಧರ್ಮ ಸಹಿಷ್ಣುತೆ ಪಾಲಿಸುತ್ತಿದ್ದರು. ಇದಕ್ಕೆ ಆತನ ಸಾಹಿತ್ಯಿಕ ಓದು, ಲಂಕೇಶ್ ಪತ್ರಿಕೆ, ಪ್ರತಿವಾರ ಕೊಂಡುಕೊಳ್ಳುತ್ತಿದ್ದುದೇ ಪ್ರಮುಖ ಕಾರಣವಾಗಿತ್ತು. ಆದರೆ ಯಾವಾಗ ಜಗದೀಶ್ ಶೆಟ್ಟರ್ ಸಂಪುಟದಲ್ಲಿ ಮಂತ್ರಿಯಾದರೋ ಆಗ ಶುರುವಾಯ್ತು ಪೂಜಾರಿಯ ಹಿಂದೂತ್ವದ ಪ್ರವರ!! ರಾಜಕೀಯ ಅಸ್ತಿತ್ವದ ಪ್ರಶ್ನೆ ಮತ್ತು ಮಂತ್ರಿ ಮಾಡಿದ್ದ ಕಲ್ಲಡ್ಕ ಭಟ್ಕರ ಋಣ ಪೂಜಾರಿಯಲ್ಲಿ ಪೂರ್ಣಪ್ರಮಾಣದ ಮಾನಸಿಕ ಪರಿವರ್ತನೆ ತಂದಿತ್ತು.

ಆಗ ಮಂತ್ರಿಯಾಗಬೇಕಾಗಿದ್ದು ಕುಂದಾಪುರದ ಅಖಂಡ ಬ್ರಹ್ಮಚಾರಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮಂತ್ರಿ ಮಂಡಲ ರಚನೆ ಸಂದರ್ಭದಲ್ಲಿ ಹಾಲಾಡಿಗೆ ಬೆಂಗಳೂರಿಗೆ ಬಂದು ಪ್ರಮಾಣ ವಚನ ಸ್ವೀಕರ ಮಾಡುವಂತೆ ಆಹ್ವಾನವೂ ಬಂದಿತ್ತಂತೆ. ಆದರೆ ರಾತ್ರೆ ಬೆಳಗಾಗುವುದರಲ್ಲಿ ಆ ಅವಕಾಶ ಪುಜಾರಿ ಪಾಲಾಗಿತ್ತು. ಸಂಘಕ್ಕೆಂದೂ ನಿಷ್ಠನಲ್ಲದ, ಕೌಬಾಯ್ ಗ್ಯಾಂಗಿನ ಬಗ್ಗೆ, ಅನೈತಿಕ ಪೋಲಿಸ್‍ಗಿರಿ ಬಗ್ಗೆ ಗೇಲಿಯೂ ಮಾಡುತ್ತಿದ್ದ ಹಾಲಾಡಿ ಸ್ಥಳೀಯ ಬಿಜೆಪಿಯ ಪ್ರಶ್ನಾತೀತ ದೊರೆ ಕಲ್ಲಡ್ಕ ಭಟ್ಟರ ಕೆಂಗಣ್ಣಿಗೆ ತುತ್ತಾಗಿದ್ದರು. ಬಂಟ ಸಮುದಾಯದ ಹಾಲಾಡಿಗೆ ಮಂತ್ರಿಗಿರಿ ತಪ್ಪಿಸಿದ್ದಷ್ಟೇ ಅಲ್ಲ, ಆತನಿಗಿಂತ ಜೂನಿಯರ್ ಆದ ಬಿಲ್ಲವ ಸಮುದಾಯದ ಪೂಜಾರಿಗೆ ಮಂತ್ರಿ ಮಾಡುವ ಮೂಲಕ ಆತನ ಹೊಟ್ಟೆಯುರಿ ಹೆಚ್ಚು-ಮಾಡುವ ಹಿಕಮತ್ತು ಕಲ್ಲಡ್ಕ ಭಟ್ ಮಾಡಿದ್ದರು. ಇದರಿಂದ ಕೆರಳಿದ್ದ ಹಾಲಾಡಿ ಮತ್ತವನ ಬಂಟರ ಪಡೆ ಪಾಪದ ಮಂತ್ರಿ ಪೂಜಾರಿ ಮೇಲೆ ಮುರಕೊಂಡು ಬಿದ್ದಿತ್ತು.

ಆ ಸಂದಿಗ್ಧ ಸಂದರ್ಭದಲ್ಲಿ ಬಚಾವಾಗಲು ಪೂಜಾರಿಗೆ ಆರೆಸ್ಸೆಸ್, ಹಿಂದೂತ್ವ, ಸಾಬರ ಸತಾಯಿಸುವಿಕೆ ಭೂತ ಆವಾಹನೆ ಅನಿವಾರ್ಯ ಆಗಿಹೋಯಿತು! ಜತೆಗೆ ಮಂತ್ರಿ ಭಾಗ್ಯ ಕರುಣಿಸಿದ್ದ ಕಲ್ಲಡ್ಕ ಭಟ್ಟರಿಗೆ ಸಂಪ್ರೀತಗೊಳಿಸಬೇಕಿತ್ತು. ಹೀಗಾಗಿ ಆತ ಅಲ್ಲಿಂದಾಚೆ ಕಟ್ಟರ್ ಚೆಡ್ಡಿಯಾಗಿ ರೂಪಾಂತರ ಆಗಿಹೋದರು. ನಳಿನ್, ಶೋಭಕ್ಕರ ಸರಿಸಮಕ್ಕೆ ಬೆಂಕಾಭಾಷಣ ಉಗುಳುವ ಕಲೆಕರಗತ ಮಾಡಿಕೊಂಡರು. ಕಳೆದ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಕರಾವಳಿಯ ಬಿಲ್ಲವ-ದೀವರು ಸಮುದಾಯ ಕಡೆಗಣಿಸಿದೆ ಎಂಬ ಅಸಮಧಾನ ಎದ್ದಿತ್ತು. ಆಗ ಕಲ್ಲಡ್ಕ ಭಟ್ ಬಳಸಿದ್ದು ಇದೇ ಪೂಜಾರಿ ಅಸ್ತ್ರ. ಬಿಲ್ಲವರ ಸಮಾಧಾನ ಮಾಡಲು ಕೋಟ ಶ್ರೀನಿವಾಸ ಪೂಜಾರಿಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಾಗಿ ಮಾಡಲಾಯಿತು. ಈಗ ಮತ್ತೆ ಪೂಜಾರಿ ಮಂತ್ರಿಯಾಗಿರುವುದು ಬಿಲ್ಲವ(ಈಡಿಗ) ಕೋಟಾ ಮತ್ತು ಸಂಘ ಸರದಾರರ ಚೇಲಾಗಿರಿ ನಿಷ್ಠೆಯಿಂದ ಮಾಡುತ್ತಾರೆಂಬ ಕ್ಯಾಲಿಬರ್‍ನಿಂದಲೇ. ಈ ಬಾರಿಯೂ ಪೂಜಾರಿಯ ಛೂ ಮಂತ್ರಗಾಳಿಯಲ್ಲಿ ಕಲ್ಲಡ್ಕ ಭಟ್ಟರ ಕರಾಮತ್ತು ನಡೆದಿದೆ.

ಭಟ್ಟರು ಮೊದಲಿನಷ್ಟು ಆರೆಸ್ಸೆಸ್‍ನಲ್ಲಿ ಈಗ ಪ್ರಭಾವಿಯಲ್ಲ. ಆದರೂ ಆತನಿಗೆ ಯಡ್ಡಿಯ ಜತೆ ಮತ್ತು ಪೇಜಾವರ ಸ್ವಾಮಿ ಸಂಗಡ ಗಾಢವಾದ ನಂಟು ಉಳಿಸಿಕೊಂಡಿದ್ದಾರೆ. ಹಾಲಾಡಿ ಮಂತ್ರಿಗಿರಿಗಾಗಿ ಸ್ವಜಾತಿ ಬಂಟರ ಉದ್ಯಮಿಗಳ ಲಾಬಿ ಮೂಲಕ ಪ್ರಬಲ ಪ್ರಯತ್ನ ನಡೆಸಿದ್ದರು. ಏನೇ ಆಗಲಿ ಹಾಲಾಡಿಗೆ ಮಂತ್ರಿಯಾಗಲು ಬಿಡಬಾರದೆಂಬ ಹಠ ಭಟ್ಟರದಾಗಿತ್ತು. ಈಗಿತ್ತಲಾಗಿ ಹಿಂದೂತ್ವ ಮೈಗೂಡಿಸಿಕೊಂಡಿದ್ದ ಹಾಲಾಡಿಗೆ ಅದು ಮಂತ್ರಿ ಆಗಲು ನೆರವಾಗುತ್ತದೆಂಬ ಭಾವನೆಯಿತ್ತು. ಆದರೆ ಕೋಟ ಶ್ರೀನಿವಾಸ ಪೂಜಾರಿಗೆ ಹೋಲಿಸಿದರೆ ಹಾಲಾಡಿ ಹಿಂದೂತ್ವಕ್ಕೆ ಖದಿರಿಲ್ಲ. ಬಿಜೆಪಿಯಲ್ಲಿ ಸೀನಿಯಾರಿಟಿಯೂ ಇಲ್ಲ. ಮಂತ್ರಿ ಮಾಡಿಲ್ಲ ಎಂದು ಕಲ್ಲಡ್ಕ ಭಟ್ಟನ ಬೈಯುತ್ತ ಬಿಜೆಪಿ ಬಿಟ್ಟು ಪಕ್ಚೇತರನಾಗಿ ಶಾಸಕನಾಗಿದ್ದ ಹಾಲಾಡಿ ಕಳೆದ ಬಾರಿ ಅಸೆಂಬ್ಲಿ ಇಲೆಕ್ಷನ್ ಹೊತ್ತಲ್ಲ ಸಂಸದೆ ಶೋಭಕ್ಕನ ಸೆರಗಿಡಿದು ಮತ್ತೆ ಬಿಜೆಪಿ ಸೇರಿದ್ದರು. ಶೋಭಕ್ಕನೂ ಹಾಲಾಡಿಗೆ ಮಂತ್ರಿ ಪದವಿ ಕೊಡಿಸಲು ಕಸರತ್ತು ಮಾಡಿದ್ದರು. ಬಂಟರ ಉದ್ಯಮಿಗಳ ತಂಡವೊಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರರಾವ್ ಬಳಿಗೂ ಹೋಗಿತ್ತು. ಆದರೆ ಅಲ್ಲೇ ಅಪಶಕುನವಾಗಿತ್ತು.

ಒಟ್ಟಿನಲ್ಲಿ ಜಾತಿ ಕೋಟಾ, ರಾಜಕೀಯ ಒಳಸುಳಿಗಳಿಂದ ಭಾಷಣಕೋರ ಮಂತ್ರಿಯಾಗಿದ್ದಾರೆ. ಕರಾವಳಿಯ ತ್ರಿವಳಿ ಜಿಲ್ಲೆಗೆ ಪೂಜಾರಿಯೇ ಈಗ ಸರದಾರ. ಕರಾವಳಿ ಸಮಸ್ಯೆ-ಸಂಕಷ್ಟಗಳ ಸಂಕ್ರಮಣ ಕಾಲದಲ್ಲಿದೆ! ಇದನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನದ ಹೊಣೆಗಾರಿಕೆ ಪೂಜಾರಿ ನಿಭಾಯಿಸಬೇಕಿದೆ. ಆತನ ಸ್ವಜಾತಿ ಬಿಲ್ಲವ, ದೀವರು, ನಾಮಧಾರಿಗಳು ಹಿಂದೂತ್ವ ಸೆಳೆತದಲ್ಲಿ ದಿಕ್ಕು ತಪ್ಪಿದ್ದಾರೆ. ಈ ಸಮುದಾಯ ಹುಡುಗರೇ ಹೆಚ್ಚಿನ ಸಂಖ್ಯೆಯಲ್ಲಿ ಧರ್ಮಯುದ್ಧದ ಬಲಿ ಪಶುಗಳಾಗುತ್ತಿದ್ದಾರೆ. ಇದೆಲ್ಲ ಕೋಟ ಪೂಜಾರಿಯ ಮಂತ್ರಿಗಿರಿಗೆ ಅರ್ಥವಾದೀತಾ? ಮನುವಾದಿ ಬಾಸ್‍ಗಳ ಖುಷಿ ಪಡಿಸುವ ಭರದಲ್ಲಿ ಕುಲಕ್ಕೆ ಮೃತ್ಯು ಕೊಡಲಿ ಕಾವು ಆಗುವರಾ? ಹಿಂದೆಲ್ಲ ಪೂಜಾರಿ ಮಂತ್ರಿಯಾದಾಗ, ವಿರೋಧ ಪಕ್ಷದ ನಾಯಕನಾದಾಗ ಉಡುಪಿ ಜಿಲ್ಲೆಗಾಗಲಿ, ಬಿಲ್ಲವರಿಗಾಗಲಿ ಆದ ಅನುಕೂಲ ಅಷ್ಟಕ್ಕೆಷ್ಟೇ.
ಒಂದಂತೂ ಖರೆ, ಮಂತ್ರಿ ಪೂಜಾರಿ ಸಾಹೇಬರ ಧರ್ಮಕಾರಣಕ್ಕೆ ತೋರಿಸುತ್ತಿರುವ ಬದ್ಧತೆ, ಕೆಚ್ಚುಗಳಲ್ಲಿ ಅರ್ಧದಷ್ಟು ಅಭಿವೃದ್ಧಿ, ಮಾನವೀಯತೆ, ಬಿಲ್ಲವ ತರುಣರ ಟ್ರ್ಯಾಕಿಗೆ ತರುವುದಕ್ಕೆ ತೋರಿಸಿದರೆ ಸಾಕು; ಕರಾವಳಿಯ ಪರ್ವ ಎಂದೆಂದೂ ಮರೆಯದ ಕಾಲಘಟ್ಟವಾಗಿ ದಾಖಲಾಗುತ್ತದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...