Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....