Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...