Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...