Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...