Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...