Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...