Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...