Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...