Homeಮುಖಪುಟಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು...

ಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು…

- Advertisement -
- Advertisement -

ಕರ್ನಾಟಕ ರಾಜ್ಯ ರಾಜಕಾರಣದಿಂದಲೇ ಮಾತು ಆರಂಭಿಸಬಹುದು. ಮಲೆನಾಡು ಹಾಗೂ ಕರಾವಳಿ ಕರ್ನಾಟಕ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಕೊಲೆಗಳಿಗೆ ಪದೇಪದೇ ಸಾಕ್ಷಿಯಾಗುತ್ತಲೇ ಇದೆ. ಹಿಂದೂ- ಮುಸ್ಲಿಂ ಸಮುದಾಯದ ಯುವಕರು ಧರ್ಮದ ಕಾರಣಕ್ಕೆ ಹೊಡೆದಾಡಿಕೊಂಡು ಸಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸರಣಿ ಕೊಲೆಗಳು ನಡೆದವು. ಮಸೂದ್ ಎಂಬ ಯುವಕ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದನು. ನಂತರ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರನ್ನು ಕೊಲ್ಲಲಾಗುತ್ತದೆ. ಇದಕ್ಕೆ ಪ್ರತಿಕಾರವೆಂಬಂತೆ ಫಾಜಿಲ್ ಎಂಬ ಅಮಾಯಕನ ಹೆಣ ಬಿತ್ತು. ಹೀಗೆ ‘ಕೊಲೆಗೆ ಕೊಲೆ’, ‘ರಕ್ತಕ್ಕೆ ರಕ್ತ’ ಎಂಬ ಭೀಕರ ಚರಿತ್ರೆಯನ್ನು ಕರ್ನಾಟಕದ ರಾಜಕೀಯ ಪರಿಸರದಲ್ಲಿ ಕಟ್ಟುತ್ತಿರುವುದು ವಿಷಾದನೀಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಚೆಗೆ ಜಿಗಿದು, ದ್ವೇಷದ ಎಲ್ಲೆ ಮೀರಿದಾಗ ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ. ಭಿನ್ನಮತದ ಸಹಿಷ್ಣುತೆ ಇಲ್ಲವಾದಾಗ ಈ ಅತಿರೇಕಕ್ಕೆ ಕಡಿವಾಣ ಇಲ್ಲವಾಗುತ್ತದೆ. ಈ ಮೇಲಾಟಗಳಿಂದಾಗಿ ಯಾವ ಪರಿಣಾಮಗಳು ಬೀರುತ್ತವೆ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕು.

2015ರಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ. ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ಹಿಂದುತ್ವ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬದ ಪರ ಹಿಂದುತ್ವ ಸಂಘಟನೆಗಳು ನಿಂತವು. ಆ ನಂತರ ಏನಾಯಿತು?

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುವಂತಾಯಿತು. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಆತನ ಕುಟುಂಬಕ್ಕೆ ರಾಜಕಾರಣಿಗಳು ಭರಪೂರ ನೆರವು ನೀಡುವಾಗ, ಮೀನಾಕ್ಷಮ್ಮನ ಬದುಕು ‘ಚಿಂದಿ’ಯಾಗಿರುವುದು ಸುದ್ದಿಯಾಗಿತ್ತು.

ರಾಜಕೀಯ ಕೊಲೆಗಳಾದಾಗ ಶವ ಮೆರವಣಿಗೆ ಮಾಡುವುದು, ಕೊಲೆ ಮಾಡಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಸನ್ಮಾನಿಸುವುದು- ಇವೆಲ್ಲ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತವೆ?

ಹಿರಿಯ ನಿರ್ದೇಶಕ ‘ಸಿಬಿ ಮಲಯಿಲ್’ ನಿರ್ದೇಶನದ ‘ಕೊತ್ತು’ (ಇರಿತ/ಮಲಯಾಳಂ) ಸಿನಿಮಾ ನೋಡಿದರೆ ಕರ್ನಾಟಕ ಹಾಗೂ ಇಡೀ ದೇಶದ ರಾಜಕೀಯ ಕೊಲೆಗಳ ಪರಿಣಾಮಗಳು ಕಣ್ಣಮುಂದೆ ಬರುತ್ತವೆ. ರಕ್ತಕ್ಕೆ ರಕ್ತ, ಕೊಲೆಗೆ ಕೊಲೆ ಎಂದು ಹೊರಟರೆ ಮನುಷ್ಯನ ನೆಮ್ಮದಿ ಹಾಳಾಗುತ್ತದೆ. ಸಾವನ್ನು ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಸ್ಥಿತಿ ಉಂಟಾಗುತ್ತದೆ. ಕೊಲೆಯಾದವರ ಕುಟುಂಬ ಬೀದಿಗೆ ಬಿದ್ದು, ನರಳಬೇಕಾಗುತ್ತದೆ.

‘ಅಯ್ಯಪ್ಪನುಂ ಕೋಶಿಯುಮ್‌’, ‘ನಾಯಟ್ಟು’ ಸಿನಿಮಾ ನಿರ್ಮಾಪಕರಾದ ರಂಜಿತ್‌, ಪಿ.ಎಂ.ಸಸಿಧರನ್‌ ನಿರ್ಮಾಣದ ‘ಕೊತ್ತು’- ಈ ಕಾಲದ ರಾಜಕೀಯ ಕಥನ. ‘ಕೇಸರಿ’ ಮತ್ತು ‘ಕೆಂಪು’- ರಾಜಕೀಯ ಗುಂಪುಗಳ ನಡುವಿನ ಜಿದ್ದಾಜಿದ್ದಿ, ವೈಷಮ್ಯದ ಕಥೆಯನ್ನು ಕೇರಳದ ಪರಿಸರದ ಮೂಲಕ ಹೇಳಲಾಗುತ್ತಿದೆಯಾದರೂ, ಭಾರತದ ಯಾವುದೇ ಪ್ರಾಂತ್ಯದಲ್ಲಿ ನಡೆಯಬಹುದಾದ ರಾಜಕೀಯ ಕಥೆಯನ್ನು ಇಲ್ಲಿ ತೋರಿಸಲಾಗಿದೆ. ಈ ಎರಡು ಗುಂಪುಗಳ ನಡುವೆ ಹರಿಯುತ್ತಿರುವ ಕೊನೆಯಿಲ್ಲದ ರಕ್ತವು, ಮನುಷ್ಯನ ನೆಮ್ಮದಿಯನ್ನು ಹಾಳುಗೆಡುವುತ್ತದೆ. ಊರು ಊರುಗಳ ನಡುವೆ, ಕೇರಿ ಕೇರಿಗಳ ನಡುವೆ ಗೋಡೆಗಳನ್ನು ನಿರ್ಮಿಸುತ್ತದೆ. ರಾಜಕೀಯ ಕೊಲೆಗಳಾಚೆಗೆ ಎದುರಾಗುವ ಬದುಕಿನ ಸಂದಿಗ್ಧತೆಗಳು ಇಕ್ಕಟ್ಟಿಗೆ ಸಿಲುಕಿಸುತ್ತವೆ.

‘ಕೊಲೆ’ ಎಂಬ ಕ್ರಿಯೆಗೆ ‘ಪ್ರತಿಕೊಲೆ’ಯಷ್ಟೇ ಪ್ರತಿಕ್ರಿಯೆಯಾಗಿರಲಾರದು. ಅದರಾಚೆಗೂ ಬೀರುವ ಸಾಮಾಜಿಕ ಪರಿಣಾಮಗಳತ್ತ ಗಮನ ಹರಿಸಬೇಕಾಗುತ್ತದೆ. ಜೀವಹಾನಿಯ ಜೊತೆಗೆ ಆರ್ಥಿಕ ನಷ್ಟ, ಕೌಂಟುಬಿಕ ಕಲಹ- ಎಲ್ಲವೂ ಸುತ್ತಿಕೊಳ್ಳುತ್ತವೆ. ‘ಕೆಂಪು’ ಪಡೆಯ ರಾಜಕೀಯ ನಾಯಕನನ್ನು ಕೇಸರಿ ಪಡೆ ಕೊಲೆ ಮಾಡುವುದರೊಂದಿಗೆ ಆರಂಭವಾಗುವ ಈ ಸಿನಿಮಾ, ಸರಣಿ ಅಪರಾಧಗಳಿಗೆ ಸಾಕ್ಷಿಯಾಗುತ್ತಾ ಹೋಗುತ್ತದೆ. ‘ಮನೆಯೊಳಗಿನ ಕಿಚ್ಚು- ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು’ ಎಂಬ ವಚನಕಾರರ ಸಂದೇಶ ನೆನಪಾಗುತ್ತದೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಗಾಂಧಿ ತೋರಿದ ಅಹಿಂಸಾ ಮಾರ್ಗದಲ್ಲಿ ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾದದ್ದು ಇಂದಿನ ತುರ್ತು. ನಮ್ಮ ಮುಂದಿನ ಪೀಳಿಗೆಗೆ ಯಾವ ಇತಿಹಾಸವನ್ನು ಬಿಟ್ಟು ಹೋಗುತ್ತಿದ್ದೇವೆ ಎಂಬ ಎಚ್ಚರಿಕೆಯೂ ನಮಗೆ ಮುಖ್ಯ. ಪ್ರತಿಕಾರಕ್ಕೆ ಇಳಿದಾಗ ಅನಾಥವಾಗುವ ಕುಟುಂಬ ನಮ್ಮ ಕಣ್ಣಮುಂದೆ ಬರಬೇಕು ಎಂಬ ಸಂದೇಶವನ್ನು ‘ಕೊತ್ತು’ ನೀಡಿದೆ.

‘ಜೇಕ್ಸ್‌ ಬಿಜಾಯ್‌’ ಅವರ ಹಿನ್ನೆಲೆ ಸಂಗೀತವು ದೃಶ್ಯಗಳ ತೀವ್ರತೆಯನ್ನು ಹೆಚ್ಚಿಸಿದೆ. ಹೇಮಂತ್‌ಕುಮಾರ್‌ ಅವರು ಇಂದಿನ ರಾಜಕೀಯ ಕೊಲೆಗಳನ್ನು ಸಶಕ್ತವಾಗಿ ತಮ್ಮ ಕಥೆಯೊಳಗೆ ತಂದಿದ್ದಾರೆ. ಎಂದಿನಂತೆ ಆಸಿಫ್‌ ಅಲಿ, ನಿಖಿಲಾ ವಿಮಲ್‌, ರೋಷನ್ ಮ್ಯಾಥ್ಯೂ, ರಂಜಿತ್‌, ಶ್ರೀಲಕ್ಷ್ಮೀ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...