Homeಮುಖಪುಟಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು...

ಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು…

- Advertisement -
- Advertisement -

ಕರ್ನಾಟಕ ರಾಜ್ಯ ರಾಜಕಾರಣದಿಂದಲೇ ಮಾತು ಆರಂಭಿಸಬಹುದು. ಮಲೆನಾಡು ಹಾಗೂ ಕರಾವಳಿ ಕರ್ನಾಟಕ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಕೊಲೆಗಳಿಗೆ ಪದೇಪದೇ ಸಾಕ್ಷಿಯಾಗುತ್ತಲೇ ಇದೆ. ಹಿಂದೂ- ಮುಸ್ಲಿಂ ಸಮುದಾಯದ ಯುವಕರು ಧರ್ಮದ ಕಾರಣಕ್ಕೆ ಹೊಡೆದಾಡಿಕೊಂಡು ಸಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸರಣಿ ಕೊಲೆಗಳು ನಡೆದವು. ಮಸೂದ್ ಎಂಬ ಯುವಕ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದನು. ನಂತರ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರನ್ನು ಕೊಲ್ಲಲಾಗುತ್ತದೆ. ಇದಕ್ಕೆ ಪ್ರತಿಕಾರವೆಂಬಂತೆ ಫಾಜಿಲ್ ಎಂಬ ಅಮಾಯಕನ ಹೆಣ ಬಿತ್ತು. ಹೀಗೆ ‘ಕೊಲೆಗೆ ಕೊಲೆ’, ‘ರಕ್ತಕ್ಕೆ ರಕ್ತ’ ಎಂಬ ಭೀಕರ ಚರಿತ್ರೆಯನ್ನು ಕರ್ನಾಟಕದ ರಾಜಕೀಯ ಪರಿಸರದಲ್ಲಿ ಕಟ್ಟುತ್ತಿರುವುದು ವಿಷಾದನೀಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಚೆಗೆ ಜಿಗಿದು, ದ್ವೇಷದ ಎಲ್ಲೆ ಮೀರಿದಾಗ ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ. ಭಿನ್ನಮತದ ಸಹಿಷ್ಣುತೆ ಇಲ್ಲವಾದಾಗ ಈ ಅತಿರೇಕಕ್ಕೆ ಕಡಿವಾಣ ಇಲ್ಲವಾಗುತ್ತದೆ. ಈ ಮೇಲಾಟಗಳಿಂದಾಗಿ ಯಾವ ಪರಿಣಾಮಗಳು ಬೀರುತ್ತವೆ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕು.

2015ರಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ. ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ಹಿಂದುತ್ವ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬದ ಪರ ಹಿಂದುತ್ವ ಸಂಘಟನೆಗಳು ನಿಂತವು. ಆ ನಂತರ ಏನಾಯಿತು?

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುವಂತಾಯಿತು. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಆತನ ಕುಟುಂಬಕ್ಕೆ ರಾಜಕಾರಣಿಗಳು ಭರಪೂರ ನೆರವು ನೀಡುವಾಗ, ಮೀನಾಕ್ಷಮ್ಮನ ಬದುಕು ‘ಚಿಂದಿ’ಯಾಗಿರುವುದು ಸುದ್ದಿಯಾಗಿತ್ತು.

ರಾಜಕೀಯ ಕೊಲೆಗಳಾದಾಗ ಶವ ಮೆರವಣಿಗೆ ಮಾಡುವುದು, ಕೊಲೆ ಮಾಡಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಸನ್ಮಾನಿಸುವುದು- ಇವೆಲ್ಲ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತವೆ?

ಹಿರಿಯ ನಿರ್ದೇಶಕ ‘ಸಿಬಿ ಮಲಯಿಲ್’ ನಿರ್ದೇಶನದ ‘ಕೊತ್ತು’ (ಇರಿತ/ಮಲಯಾಳಂ) ಸಿನಿಮಾ ನೋಡಿದರೆ ಕರ್ನಾಟಕ ಹಾಗೂ ಇಡೀ ದೇಶದ ರಾಜಕೀಯ ಕೊಲೆಗಳ ಪರಿಣಾಮಗಳು ಕಣ್ಣಮುಂದೆ ಬರುತ್ತವೆ. ರಕ್ತಕ್ಕೆ ರಕ್ತ, ಕೊಲೆಗೆ ಕೊಲೆ ಎಂದು ಹೊರಟರೆ ಮನುಷ್ಯನ ನೆಮ್ಮದಿ ಹಾಳಾಗುತ್ತದೆ. ಸಾವನ್ನು ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಸ್ಥಿತಿ ಉಂಟಾಗುತ್ತದೆ. ಕೊಲೆಯಾದವರ ಕುಟುಂಬ ಬೀದಿಗೆ ಬಿದ್ದು, ನರಳಬೇಕಾಗುತ್ತದೆ.

‘ಅಯ್ಯಪ್ಪನುಂ ಕೋಶಿಯುಮ್‌’, ‘ನಾಯಟ್ಟು’ ಸಿನಿಮಾ ನಿರ್ಮಾಪಕರಾದ ರಂಜಿತ್‌, ಪಿ.ಎಂ.ಸಸಿಧರನ್‌ ನಿರ್ಮಾಣದ ‘ಕೊತ್ತು’- ಈ ಕಾಲದ ರಾಜಕೀಯ ಕಥನ. ‘ಕೇಸರಿ’ ಮತ್ತು ‘ಕೆಂಪು’- ರಾಜಕೀಯ ಗುಂಪುಗಳ ನಡುವಿನ ಜಿದ್ದಾಜಿದ್ದಿ, ವೈಷಮ್ಯದ ಕಥೆಯನ್ನು ಕೇರಳದ ಪರಿಸರದ ಮೂಲಕ ಹೇಳಲಾಗುತ್ತಿದೆಯಾದರೂ, ಭಾರತದ ಯಾವುದೇ ಪ್ರಾಂತ್ಯದಲ್ಲಿ ನಡೆಯಬಹುದಾದ ರಾಜಕೀಯ ಕಥೆಯನ್ನು ಇಲ್ಲಿ ತೋರಿಸಲಾಗಿದೆ. ಈ ಎರಡು ಗುಂಪುಗಳ ನಡುವೆ ಹರಿಯುತ್ತಿರುವ ಕೊನೆಯಿಲ್ಲದ ರಕ್ತವು, ಮನುಷ್ಯನ ನೆಮ್ಮದಿಯನ್ನು ಹಾಳುಗೆಡುವುತ್ತದೆ. ಊರು ಊರುಗಳ ನಡುವೆ, ಕೇರಿ ಕೇರಿಗಳ ನಡುವೆ ಗೋಡೆಗಳನ್ನು ನಿರ್ಮಿಸುತ್ತದೆ. ರಾಜಕೀಯ ಕೊಲೆಗಳಾಚೆಗೆ ಎದುರಾಗುವ ಬದುಕಿನ ಸಂದಿಗ್ಧತೆಗಳು ಇಕ್ಕಟ್ಟಿಗೆ ಸಿಲುಕಿಸುತ್ತವೆ.

‘ಕೊಲೆ’ ಎಂಬ ಕ್ರಿಯೆಗೆ ‘ಪ್ರತಿಕೊಲೆ’ಯಷ್ಟೇ ಪ್ರತಿಕ್ರಿಯೆಯಾಗಿರಲಾರದು. ಅದರಾಚೆಗೂ ಬೀರುವ ಸಾಮಾಜಿಕ ಪರಿಣಾಮಗಳತ್ತ ಗಮನ ಹರಿಸಬೇಕಾಗುತ್ತದೆ. ಜೀವಹಾನಿಯ ಜೊತೆಗೆ ಆರ್ಥಿಕ ನಷ್ಟ, ಕೌಂಟುಬಿಕ ಕಲಹ- ಎಲ್ಲವೂ ಸುತ್ತಿಕೊಳ್ಳುತ್ತವೆ. ‘ಕೆಂಪು’ ಪಡೆಯ ರಾಜಕೀಯ ನಾಯಕನನ್ನು ಕೇಸರಿ ಪಡೆ ಕೊಲೆ ಮಾಡುವುದರೊಂದಿಗೆ ಆರಂಭವಾಗುವ ಈ ಸಿನಿಮಾ, ಸರಣಿ ಅಪರಾಧಗಳಿಗೆ ಸಾಕ್ಷಿಯಾಗುತ್ತಾ ಹೋಗುತ್ತದೆ. ‘ಮನೆಯೊಳಗಿನ ಕಿಚ್ಚು- ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು’ ಎಂಬ ವಚನಕಾರರ ಸಂದೇಶ ನೆನಪಾಗುತ್ತದೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಗಾಂಧಿ ತೋರಿದ ಅಹಿಂಸಾ ಮಾರ್ಗದಲ್ಲಿ ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾದದ್ದು ಇಂದಿನ ತುರ್ತು. ನಮ್ಮ ಮುಂದಿನ ಪೀಳಿಗೆಗೆ ಯಾವ ಇತಿಹಾಸವನ್ನು ಬಿಟ್ಟು ಹೋಗುತ್ತಿದ್ದೇವೆ ಎಂಬ ಎಚ್ಚರಿಕೆಯೂ ನಮಗೆ ಮುಖ್ಯ. ಪ್ರತಿಕಾರಕ್ಕೆ ಇಳಿದಾಗ ಅನಾಥವಾಗುವ ಕುಟುಂಬ ನಮ್ಮ ಕಣ್ಣಮುಂದೆ ಬರಬೇಕು ಎಂಬ ಸಂದೇಶವನ್ನು ‘ಕೊತ್ತು’ ನೀಡಿದೆ.

‘ಜೇಕ್ಸ್‌ ಬಿಜಾಯ್‌’ ಅವರ ಹಿನ್ನೆಲೆ ಸಂಗೀತವು ದೃಶ್ಯಗಳ ತೀವ್ರತೆಯನ್ನು ಹೆಚ್ಚಿಸಿದೆ. ಹೇಮಂತ್‌ಕುಮಾರ್‌ ಅವರು ಇಂದಿನ ರಾಜಕೀಯ ಕೊಲೆಗಳನ್ನು ಸಶಕ್ತವಾಗಿ ತಮ್ಮ ಕಥೆಯೊಳಗೆ ತಂದಿದ್ದಾರೆ. ಎಂದಿನಂತೆ ಆಸಿಫ್‌ ಅಲಿ, ನಿಖಿಲಾ ವಿಮಲ್‌, ರೋಷನ್ ಮ್ಯಾಥ್ಯೂ, ರಂಜಿತ್‌, ಶ್ರೀಲಕ್ಷ್ಮೀ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...