Homeಮುಖಪುಟಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು...

ಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು…

- Advertisement -
- Advertisement -

ಕರ್ನಾಟಕ ರಾಜ್ಯ ರಾಜಕಾರಣದಿಂದಲೇ ಮಾತು ಆರಂಭಿಸಬಹುದು. ಮಲೆನಾಡು ಹಾಗೂ ಕರಾವಳಿ ಕರ್ನಾಟಕ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಕೊಲೆಗಳಿಗೆ ಪದೇಪದೇ ಸಾಕ್ಷಿಯಾಗುತ್ತಲೇ ಇದೆ. ಹಿಂದೂ- ಮುಸ್ಲಿಂ ಸಮುದಾಯದ ಯುವಕರು ಧರ್ಮದ ಕಾರಣಕ್ಕೆ ಹೊಡೆದಾಡಿಕೊಂಡು ಸಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸರಣಿ ಕೊಲೆಗಳು ನಡೆದವು. ಮಸೂದ್ ಎಂಬ ಯುವಕ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದನು. ನಂತರ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರನ್ನು ಕೊಲ್ಲಲಾಗುತ್ತದೆ. ಇದಕ್ಕೆ ಪ್ರತಿಕಾರವೆಂಬಂತೆ ಫಾಜಿಲ್ ಎಂಬ ಅಮಾಯಕನ ಹೆಣ ಬಿತ್ತು. ಹೀಗೆ ‘ಕೊಲೆಗೆ ಕೊಲೆ’, ‘ರಕ್ತಕ್ಕೆ ರಕ್ತ’ ಎಂಬ ಭೀಕರ ಚರಿತ್ರೆಯನ್ನು ಕರ್ನಾಟಕದ ರಾಜಕೀಯ ಪರಿಸರದಲ್ಲಿ ಕಟ್ಟುತ್ತಿರುವುದು ವಿಷಾದನೀಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಚೆಗೆ ಜಿಗಿದು, ದ್ವೇಷದ ಎಲ್ಲೆ ಮೀರಿದಾಗ ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ. ಭಿನ್ನಮತದ ಸಹಿಷ್ಣುತೆ ಇಲ್ಲವಾದಾಗ ಈ ಅತಿರೇಕಕ್ಕೆ ಕಡಿವಾಣ ಇಲ್ಲವಾಗುತ್ತದೆ. ಈ ಮೇಲಾಟಗಳಿಂದಾಗಿ ಯಾವ ಪರಿಣಾಮಗಳು ಬೀರುತ್ತವೆ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕು.

2015ರಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ. ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ಹಿಂದುತ್ವ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬದ ಪರ ಹಿಂದುತ್ವ ಸಂಘಟನೆಗಳು ನಿಂತವು. ಆ ನಂತರ ಏನಾಯಿತು?

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುವಂತಾಯಿತು. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಆತನ ಕುಟುಂಬಕ್ಕೆ ರಾಜಕಾರಣಿಗಳು ಭರಪೂರ ನೆರವು ನೀಡುವಾಗ, ಮೀನಾಕ್ಷಮ್ಮನ ಬದುಕು ‘ಚಿಂದಿ’ಯಾಗಿರುವುದು ಸುದ್ದಿಯಾಗಿತ್ತು.

ರಾಜಕೀಯ ಕೊಲೆಗಳಾದಾಗ ಶವ ಮೆರವಣಿಗೆ ಮಾಡುವುದು, ಕೊಲೆ ಮಾಡಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಸನ್ಮಾನಿಸುವುದು- ಇವೆಲ್ಲ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತವೆ?

ಹಿರಿಯ ನಿರ್ದೇಶಕ ‘ಸಿಬಿ ಮಲಯಿಲ್’ ನಿರ್ದೇಶನದ ‘ಕೊತ್ತು’ (ಇರಿತ/ಮಲಯಾಳಂ) ಸಿನಿಮಾ ನೋಡಿದರೆ ಕರ್ನಾಟಕ ಹಾಗೂ ಇಡೀ ದೇಶದ ರಾಜಕೀಯ ಕೊಲೆಗಳ ಪರಿಣಾಮಗಳು ಕಣ್ಣಮುಂದೆ ಬರುತ್ತವೆ. ರಕ್ತಕ್ಕೆ ರಕ್ತ, ಕೊಲೆಗೆ ಕೊಲೆ ಎಂದು ಹೊರಟರೆ ಮನುಷ್ಯನ ನೆಮ್ಮದಿ ಹಾಳಾಗುತ್ತದೆ. ಸಾವನ್ನು ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಸ್ಥಿತಿ ಉಂಟಾಗುತ್ತದೆ. ಕೊಲೆಯಾದವರ ಕುಟುಂಬ ಬೀದಿಗೆ ಬಿದ್ದು, ನರಳಬೇಕಾಗುತ್ತದೆ.

‘ಅಯ್ಯಪ್ಪನುಂ ಕೋಶಿಯುಮ್‌’, ‘ನಾಯಟ್ಟು’ ಸಿನಿಮಾ ನಿರ್ಮಾಪಕರಾದ ರಂಜಿತ್‌, ಪಿ.ಎಂ.ಸಸಿಧರನ್‌ ನಿರ್ಮಾಣದ ‘ಕೊತ್ತು’- ಈ ಕಾಲದ ರಾಜಕೀಯ ಕಥನ. ‘ಕೇಸರಿ’ ಮತ್ತು ‘ಕೆಂಪು’- ರಾಜಕೀಯ ಗುಂಪುಗಳ ನಡುವಿನ ಜಿದ್ದಾಜಿದ್ದಿ, ವೈಷಮ್ಯದ ಕಥೆಯನ್ನು ಕೇರಳದ ಪರಿಸರದ ಮೂಲಕ ಹೇಳಲಾಗುತ್ತಿದೆಯಾದರೂ, ಭಾರತದ ಯಾವುದೇ ಪ್ರಾಂತ್ಯದಲ್ಲಿ ನಡೆಯಬಹುದಾದ ರಾಜಕೀಯ ಕಥೆಯನ್ನು ಇಲ್ಲಿ ತೋರಿಸಲಾಗಿದೆ. ಈ ಎರಡು ಗುಂಪುಗಳ ನಡುವೆ ಹರಿಯುತ್ತಿರುವ ಕೊನೆಯಿಲ್ಲದ ರಕ್ತವು, ಮನುಷ್ಯನ ನೆಮ್ಮದಿಯನ್ನು ಹಾಳುಗೆಡುವುತ್ತದೆ. ಊರು ಊರುಗಳ ನಡುವೆ, ಕೇರಿ ಕೇರಿಗಳ ನಡುವೆ ಗೋಡೆಗಳನ್ನು ನಿರ್ಮಿಸುತ್ತದೆ. ರಾಜಕೀಯ ಕೊಲೆಗಳಾಚೆಗೆ ಎದುರಾಗುವ ಬದುಕಿನ ಸಂದಿಗ್ಧತೆಗಳು ಇಕ್ಕಟ್ಟಿಗೆ ಸಿಲುಕಿಸುತ್ತವೆ.

‘ಕೊಲೆ’ ಎಂಬ ಕ್ರಿಯೆಗೆ ‘ಪ್ರತಿಕೊಲೆ’ಯಷ್ಟೇ ಪ್ರತಿಕ್ರಿಯೆಯಾಗಿರಲಾರದು. ಅದರಾಚೆಗೂ ಬೀರುವ ಸಾಮಾಜಿಕ ಪರಿಣಾಮಗಳತ್ತ ಗಮನ ಹರಿಸಬೇಕಾಗುತ್ತದೆ. ಜೀವಹಾನಿಯ ಜೊತೆಗೆ ಆರ್ಥಿಕ ನಷ್ಟ, ಕೌಂಟುಬಿಕ ಕಲಹ- ಎಲ್ಲವೂ ಸುತ್ತಿಕೊಳ್ಳುತ್ತವೆ. ‘ಕೆಂಪು’ ಪಡೆಯ ರಾಜಕೀಯ ನಾಯಕನನ್ನು ಕೇಸರಿ ಪಡೆ ಕೊಲೆ ಮಾಡುವುದರೊಂದಿಗೆ ಆರಂಭವಾಗುವ ಈ ಸಿನಿಮಾ, ಸರಣಿ ಅಪರಾಧಗಳಿಗೆ ಸಾಕ್ಷಿಯಾಗುತ್ತಾ ಹೋಗುತ್ತದೆ. ‘ಮನೆಯೊಳಗಿನ ಕಿಚ್ಚು- ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು’ ಎಂಬ ವಚನಕಾರರ ಸಂದೇಶ ನೆನಪಾಗುತ್ತದೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಗಾಂಧಿ ತೋರಿದ ಅಹಿಂಸಾ ಮಾರ್ಗದಲ್ಲಿ ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾದದ್ದು ಇಂದಿನ ತುರ್ತು. ನಮ್ಮ ಮುಂದಿನ ಪೀಳಿಗೆಗೆ ಯಾವ ಇತಿಹಾಸವನ್ನು ಬಿಟ್ಟು ಹೋಗುತ್ತಿದ್ದೇವೆ ಎಂಬ ಎಚ್ಚರಿಕೆಯೂ ನಮಗೆ ಮುಖ್ಯ. ಪ್ರತಿಕಾರಕ್ಕೆ ಇಳಿದಾಗ ಅನಾಥವಾಗುವ ಕುಟುಂಬ ನಮ್ಮ ಕಣ್ಣಮುಂದೆ ಬರಬೇಕು ಎಂಬ ಸಂದೇಶವನ್ನು ‘ಕೊತ್ತು’ ನೀಡಿದೆ.

‘ಜೇಕ್ಸ್‌ ಬಿಜಾಯ್‌’ ಅವರ ಹಿನ್ನೆಲೆ ಸಂಗೀತವು ದೃಶ್ಯಗಳ ತೀವ್ರತೆಯನ್ನು ಹೆಚ್ಚಿಸಿದೆ. ಹೇಮಂತ್‌ಕುಮಾರ್‌ ಅವರು ಇಂದಿನ ರಾಜಕೀಯ ಕೊಲೆಗಳನ್ನು ಸಶಕ್ತವಾಗಿ ತಮ್ಮ ಕಥೆಯೊಳಗೆ ತಂದಿದ್ದಾರೆ. ಎಂದಿನಂತೆ ಆಸಿಫ್‌ ಅಲಿ, ನಿಖಿಲಾ ವಿಮಲ್‌, ರೋಷನ್ ಮ್ಯಾಥ್ಯೂ, ರಂಜಿತ್‌, ಶ್ರೀಲಕ್ಷ್ಮೀ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...