Homeಮುಖಪುಟಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು...

ಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು…

- Advertisement -
- Advertisement -

ಕರ್ನಾಟಕ ರಾಜ್ಯ ರಾಜಕಾರಣದಿಂದಲೇ ಮಾತು ಆರಂಭಿಸಬಹುದು. ಮಲೆನಾಡು ಹಾಗೂ ಕರಾವಳಿ ಕರ್ನಾಟಕ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಕೊಲೆಗಳಿಗೆ ಪದೇಪದೇ ಸಾಕ್ಷಿಯಾಗುತ್ತಲೇ ಇದೆ. ಹಿಂದೂ- ಮುಸ್ಲಿಂ ಸಮುದಾಯದ ಯುವಕರು ಧರ್ಮದ ಕಾರಣಕ್ಕೆ ಹೊಡೆದಾಡಿಕೊಂಡು ಸಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸರಣಿ ಕೊಲೆಗಳು ನಡೆದವು. ಮಸೂದ್ ಎಂಬ ಯುವಕ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದನು. ನಂತರ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರನ್ನು ಕೊಲ್ಲಲಾಗುತ್ತದೆ. ಇದಕ್ಕೆ ಪ್ರತಿಕಾರವೆಂಬಂತೆ ಫಾಜಿಲ್ ಎಂಬ ಅಮಾಯಕನ ಹೆಣ ಬಿತ್ತು. ಹೀಗೆ ‘ಕೊಲೆಗೆ ಕೊಲೆ’, ‘ರಕ್ತಕ್ಕೆ ರಕ್ತ’ ಎಂಬ ಭೀಕರ ಚರಿತ್ರೆಯನ್ನು ಕರ್ನಾಟಕದ ರಾಜಕೀಯ ಪರಿಸರದಲ್ಲಿ ಕಟ್ಟುತ್ತಿರುವುದು ವಿಷಾದನೀಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಚೆಗೆ ಜಿಗಿದು, ದ್ವೇಷದ ಎಲ್ಲೆ ಮೀರಿದಾಗ ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ. ಭಿನ್ನಮತದ ಸಹಿಷ್ಣುತೆ ಇಲ್ಲವಾದಾಗ ಈ ಅತಿರೇಕಕ್ಕೆ ಕಡಿವಾಣ ಇಲ್ಲವಾಗುತ್ತದೆ. ಈ ಮೇಲಾಟಗಳಿಂದಾಗಿ ಯಾವ ಪರಿಣಾಮಗಳು ಬೀರುತ್ತವೆ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕು.

2015ರಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ. ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ಹಿಂದುತ್ವ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬದ ಪರ ಹಿಂದುತ್ವ ಸಂಘಟನೆಗಳು ನಿಂತವು. ಆ ನಂತರ ಏನಾಯಿತು?

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುವಂತಾಯಿತು. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಆತನ ಕುಟುಂಬಕ್ಕೆ ರಾಜಕಾರಣಿಗಳು ಭರಪೂರ ನೆರವು ನೀಡುವಾಗ, ಮೀನಾಕ್ಷಮ್ಮನ ಬದುಕು ‘ಚಿಂದಿ’ಯಾಗಿರುವುದು ಸುದ್ದಿಯಾಗಿತ್ತು.

ರಾಜಕೀಯ ಕೊಲೆಗಳಾದಾಗ ಶವ ಮೆರವಣಿಗೆ ಮಾಡುವುದು, ಕೊಲೆ ಮಾಡಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಸನ್ಮಾನಿಸುವುದು- ಇವೆಲ್ಲ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತವೆ?

ಹಿರಿಯ ನಿರ್ದೇಶಕ ‘ಸಿಬಿ ಮಲಯಿಲ್’ ನಿರ್ದೇಶನದ ‘ಕೊತ್ತು’ (ಇರಿತ/ಮಲಯಾಳಂ) ಸಿನಿಮಾ ನೋಡಿದರೆ ಕರ್ನಾಟಕ ಹಾಗೂ ಇಡೀ ದೇಶದ ರಾಜಕೀಯ ಕೊಲೆಗಳ ಪರಿಣಾಮಗಳು ಕಣ್ಣಮುಂದೆ ಬರುತ್ತವೆ. ರಕ್ತಕ್ಕೆ ರಕ್ತ, ಕೊಲೆಗೆ ಕೊಲೆ ಎಂದು ಹೊರಟರೆ ಮನುಷ್ಯನ ನೆಮ್ಮದಿ ಹಾಳಾಗುತ್ತದೆ. ಸಾವನ್ನು ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಸ್ಥಿತಿ ಉಂಟಾಗುತ್ತದೆ. ಕೊಲೆಯಾದವರ ಕುಟುಂಬ ಬೀದಿಗೆ ಬಿದ್ದು, ನರಳಬೇಕಾಗುತ್ತದೆ.

‘ಅಯ್ಯಪ್ಪನುಂ ಕೋಶಿಯುಮ್‌’, ‘ನಾಯಟ್ಟು’ ಸಿನಿಮಾ ನಿರ್ಮಾಪಕರಾದ ರಂಜಿತ್‌, ಪಿ.ಎಂ.ಸಸಿಧರನ್‌ ನಿರ್ಮಾಣದ ‘ಕೊತ್ತು’- ಈ ಕಾಲದ ರಾಜಕೀಯ ಕಥನ. ‘ಕೇಸರಿ’ ಮತ್ತು ‘ಕೆಂಪು’- ರಾಜಕೀಯ ಗುಂಪುಗಳ ನಡುವಿನ ಜಿದ್ದಾಜಿದ್ದಿ, ವೈಷಮ್ಯದ ಕಥೆಯನ್ನು ಕೇರಳದ ಪರಿಸರದ ಮೂಲಕ ಹೇಳಲಾಗುತ್ತಿದೆಯಾದರೂ, ಭಾರತದ ಯಾವುದೇ ಪ್ರಾಂತ್ಯದಲ್ಲಿ ನಡೆಯಬಹುದಾದ ರಾಜಕೀಯ ಕಥೆಯನ್ನು ಇಲ್ಲಿ ತೋರಿಸಲಾಗಿದೆ. ಈ ಎರಡು ಗುಂಪುಗಳ ನಡುವೆ ಹರಿಯುತ್ತಿರುವ ಕೊನೆಯಿಲ್ಲದ ರಕ್ತವು, ಮನುಷ್ಯನ ನೆಮ್ಮದಿಯನ್ನು ಹಾಳುಗೆಡುವುತ್ತದೆ. ಊರು ಊರುಗಳ ನಡುವೆ, ಕೇರಿ ಕೇರಿಗಳ ನಡುವೆ ಗೋಡೆಗಳನ್ನು ನಿರ್ಮಿಸುತ್ತದೆ. ರಾಜಕೀಯ ಕೊಲೆಗಳಾಚೆಗೆ ಎದುರಾಗುವ ಬದುಕಿನ ಸಂದಿಗ್ಧತೆಗಳು ಇಕ್ಕಟ್ಟಿಗೆ ಸಿಲುಕಿಸುತ್ತವೆ.

‘ಕೊಲೆ’ ಎಂಬ ಕ್ರಿಯೆಗೆ ‘ಪ್ರತಿಕೊಲೆ’ಯಷ್ಟೇ ಪ್ರತಿಕ್ರಿಯೆಯಾಗಿರಲಾರದು. ಅದರಾಚೆಗೂ ಬೀರುವ ಸಾಮಾಜಿಕ ಪರಿಣಾಮಗಳತ್ತ ಗಮನ ಹರಿಸಬೇಕಾಗುತ್ತದೆ. ಜೀವಹಾನಿಯ ಜೊತೆಗೆ ಆರ್ಥಿಕ ನಷ್ಟ, ಕೌಂಟುಬಿಕ ಕಲಹ- ಎಲ್ಲವೂ ಸುತ್ತಿಕೊಳ್ಳುತ್ತವೆ. ‘ಕೆಂಪು’ ಪಡೆಯ ರಾಜಕೀಯ ನಾಯಕನನ್ನು ಕೇಸರಿ ಪಡೆ ಕೊಲೆ ಮಾಡುವುದರೊಂದಿಗೆ ಆರಂಭವಾಗುವ ಈ ಸಿನಿಮಾ, ಸರಣಿ ಅಪರಾಧಗಳಿಗೆ ಸಾಕ್ಷಿಯಾಗುತ್ತಾ ಹೋಗುತ್ತದೆ. ‘ಮನೆಯೊಳಗಿನ ಕಿಚ್ಚು- ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು’ ಎಂಬ ವಚನಕಾರರ ಸಂದೇಶ ನೆನಪಾಗುತ್ತದೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಗಾಂಧಿ ತೋರಿದ ಅಹಿಂಸಾ ಮಾರ್ಗದಲ್ಲಿ ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾದದ್ದು ಇಂದಿನ ತುರ್ತು. ನಮ್ಮ ಮುಂದಿನ ಪೀಳಿಗೆಗೆ ಯಾವ ಇತಿಹಾಸವನ್ನು ಬಿಟ್ಟು ಹೋಗುತ್ತಿದ್ದೇವೆ ಎಂಬ ಎಚ್ಚರಿಕೆಯೂ ನಮಗೆ ಮುಖ್ಯ. ಪ್ರತಿಕಾರಕ್ಕೆ ಇಳಿದಾಗ ಅನಾಥವಾಗುವ ಕುಟುಂಬ ನಮ್ಮ ಕಣ್ಣಮುಂದೆ ಬರಬೇಕು ಎಂಬ ಸಂದೇಶವನ್ನು ‘ಕೊತ್ತು’ ನೀಡಿದೆ.

‘ಜೇಕ್ಸ್‌ ಬಿಜಾಯ್‌’ ಅವರ ಹಿನ್ನೆಲೆ ಸಂಗೀತವು ದೃಶ್ಯಗಳ ತೀವ್ರತೆಯನ್ನು ಹೆಚ್ಚಿಸಿದೆ. ಹೇಮಂತ್‌ಕುಮಾರ್‌ ಅವರು ಇಂದಿನ ರಾಜಕೀಯ ಕೊಲೆಗಳನ್ನು ಸಶಕ್ತವಾಗಿ ತಮ್ಮ ಕಥೆಯೊಳಗೆ ತಂದಿದ್ದಾರೆ. ಎಂದಿನಂತೆ ಆಸಿಫ್‌ ಅಲಿ, ನಿಖಿಲಾ ವಿಮಲ್‌, ರೋಷನ್ ಮ್ಯಾಥ್ಯೂ, ರಂಜಿತ್‌, ಶ್ರೀಲಕ್ಷ್ಮೀ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...