Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಜಾತಿ ಪ್ರಮಾಣ ಪತ್ರದ ಸುಪ್ರೀಂ ತೀರ್ಪಿನಿಂದ ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

ಜಾತಿ ಪ್ರಮಾಣ ಪತ್ರದ ಸುಪ್ರೀಂ ತೀರ್ಪಿನಿಂದ ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

- Advertisement -
- Advertisement -

ಅನರ್ಹಗೊಂಡ ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ‘ಬೈರಾಗಿ’ ಜಾತಿಗೆ ಸೇರಿದವರು ಎಂದಿದ್ದ ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ರವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರವು ಅಸಿಂಧು ಎಂದಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯವು ಈ ವಿಷಯದಲ್ಲಿ ಒಳಗೊಂಡಿರುವ ಸಮಸ್ಯೆಯನ್ನು “ಸಂಕೀರ್ಣ” ಎಂದು ಗಮನಿಸಿದೆ. “ಎರಡು ಜಾತಿಗಳ ವೃತ್ತಿ, ಪದ್ಧತಿ, ಆಚಾರ-ವಿಚಾರಗಳ ಸಂಗತಿಗಳಿಂದ ಸಂಕೀರ್ಣತೆ ಹುಟ್ಟುತ್ತದೆ. ಬುಡಗ ಜಂಗಮ ಜಾತಿಗೆ ಸೇರಿದ ವ್ಯಕ್ತಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ‘ಮಲ ಸನ್ಯಾಸಿ’, ‘ಬೈರಾಗಿ’ ಇತ್ಯಾದಿ ಇಂತಹ ಹೆಸರುಗಳಿಂದ ಕರೆಯಲ್ಪಡುತ್ತಾರೆ ಎಂದು ಕೋಲಾರ ಗೆಜೆಟಿಯರ್ ಹೇಳಿರುವುದರಿಂದ ಈ ವಿಚಾರದಲ್ಲಿ ಸಂಕೀರ್ಣತೆ ಉಂಟಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ಅರ್ಜಿದಾರರು ರಾಜ್ಯ ಹೈಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಪ್ರತಿವಾದಿಗಳ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ವಕೀಲ ಸಂಜಯ್ ಎಂ ನುಲಿ ಪ್ರತಿನಿಧಿಸಿದ್ದರು.

ಕೊತ್ತೂರು ಮುಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ

2013ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೊತ್ತೂರು ಮಂಜುನಾಥ್‌ರವರು ಜೆಡಿಎಸ್ ಪಕ್ಷದ ಮುನಿನಂಜಪ್ಪರನ್ನು 33,734 ಮತಗಳ ಭಾರೀ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾದರು. 2018ರ ಚುನಾವಣೆ ವೇಳೆಗೆ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿ ಫಾರಂ ಪಡೆದು ನಾಮಪತ್ರ ಸಹ ಸಲ್ಲಿಸಿದ್ದರು. ಅಷ್ಟರಲ್ಲಿ ಬೈರಾಗಿ ಎಂಬ ಹಿಂದುಳಿದ ಜಾತಿಯ ಕೊತ್ತೂರು ಮಂಜುನಾಥ್‌ರವರು ಬುಡಗ ಜಂಗಮ ಜಾತಿ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರನ್ನು ಪರಿಗಣಿಸಿ ಅವರ ಪ.ಜಾ ಪ್ರಮಾಣ ಪತ್ರವನ್ನು ಅಸಿಂಧು ಎಂದು ಘೋಷಿಸಿತು. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾ ಅಧಿಕಾರಿಗಳು ಕೊತ್ತೂರು ಮಂಜುನಾಥ್‌ರವರ ನಾಮಪತ್ರವನ್ನು ತಿರಸ್ಕರಿಸಿದರು. ಇದರಿಂದ ಶಾಕ್‌ಗೆ ಒಳಗಾದ ಅವರು ಚುನಾವಣೆಯಿಂದ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿ ಬಂತು. ಕಣದಲ್ಲಿ ಇಲ್ಲದ ಕಾರಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ನಾಗೇಶ್‌ರವರಿಗೆ ಬೆಂಬಲ ಘೋಷಿಸಿ ಗೆಲ್ಲಿಸಬೇಕಾಯಿತು.

ಆಕಸ್ಮಿಕವಾಗಿ ಶಾಸಕರಾದ ಎಚ್.ನಾಗೇಶ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಅಬಕಾರಿಯಂತಹ ಮಹತ್ವ ಖಾತೆ ಅವರಿಗೆ ಸಿಕ್ಕಿತ್ತು. ಆನಂತರ ಸಣ್ಣ ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿತ್ತು. ಆದರೂ ಅತೃಪ್ತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ತೆರಳಿದ್ದರು. ಆನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿ ಮಂತ್ರಿಯಾದರು. ಬಿಜೆಪಿಯು ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅದಕ್ಕೂ ರಾಜೀನಾಮೆ ನೀಡಿದ ಅವರು ಸದ್ಯ ಅಧಿಕೃತವಾಗಿ ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಡಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

ಈಗ ಕೊತ್ತೂರು ಮಂಜುನಾಥ್‌ರವರ ಜಾತಿ ಪ್ರಮಾಣ ಪತ್ರದ ವಿವಾದ ಬಗೆಹರಿಯದ ಕಾರಣ ಅವರು ಪ.ಜಾ ಮೀಸಲು ಕ್ಷೇತ್ರವಾದ ಮುಳಬಾಗಿಲಿನಲ್ಲಿ ಸ್ಪರ್ಧಿಸುವಂತಿಲ್ಲ. ಸಾಮಾನ್ಯ ಕ್ಷೇತ್ರ ಕೋಲಾರಕ್ಕೆ ಸಿದ್ದರಾಮಯ್ಯನವರು ಬಂದಿರುವುದರಿಂದ ಅಲ್ಲಿಗೂ ಹೋಗಲಾಗದೆ ಅಂತಂತ್ರರಾಗಿದ್ದಾರೆ. ಹಾಗಾಗಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಮನಸ್ಸು ಮಾಡಿದ್ದಾರೆ.

ಕೊತ್ತೂರು ಮಂಜುನಾಥ್ ಮತ್ತು ಚಿಂತಾಮಣಿಯ ಮಾಜಿ ಶಾಸಕ ಡಾ.ಸುಧಾಕರ್ ಜೊತೆಯಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ಅವರಿಬ್ಬರಿಗೂ ಚಿಕ್ಕಬಳ್ಳಾಪುರದ ಹಾಲಿ ಶಾಸಕ ಮತ್ತು ಸಚಿವ ಡಾ.ಕೆ ಸುಧಾಕರ್ ಸಮಾನ ಶತ್ರುವಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ರನ್ನು ಎದುರಿಸುವ ಪ್ರಬಲ ಕಾಂಗ್ರೆಸ್ ಅಭ್ಯರ್ಥಿ ಕಾಣುತ್ತಿಲ್ಲ. ಇತ್ತ ಮಂಜುನಾಥ್‌ರವರಿಗೂ ಕೋಲಾರ ಜಿಲ್ಲೆಯಲ್ಲಿ ಕ್ಷೇತ್ರವಿಲ್ಲದ ಕಾರಣ ಚುನಾವಣೆಯೊಳಗೆ ತಮ್ಮ ಜಾತಿ ಪ್ರಮಾಣ ಪತ್ರ ಬಗೆಹರಿಯದಿದ್ದರೆ ಅವರು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಈಗಾಗಲೇ ಕೆಪಿಸಿಸಿ ಸದಸ್ಯರಾದ ವಿನಯ್ ಶ್ಯಾಮ್, ಯಲುವಹಳ್ಳಿ ಎನ್ ರಮೇಶ್, ಕೆ ಎನ್ ರಘು, ಮಾಜಿ ಜಿ.ಪಂ ಸದಸ್ಯ ಗಂಗರೇಕಾಲುವೆ ನಾರಾಯಣಸ್ವಾಮಿ ಮತ್ತು ಲಾಯರ್ ನಾರಾಯಣಸ್ವಾಮಿ ಟಿಕೆಟ್‌ಗಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಬಿಜೆಪಿಯ ಸಚಿವ ಸುಧಾಕರ್‌ರನ್ನು ಹಣಬಲ ಸೇರಿದಂತೆ ಎಲ್ಲಾ ರೀತಿಯಲ್ಲಿಯೂ ಎದುರಿಸಲು ಕೊತ್ತೂರು ಮಂಜುನಾಥ್‌ರವರೆ ಸೂಕ್ತ ಎಂದು ಭಾವಿಸಿರುವ ಹಲವು ಕಾಂಗ್ರೆಸ್ ಕಾರ್ಯಕರ್ತರು ಮಂಜುನಾಥ್ ಪರವಾಗಿ ಟಿಕೆಟ್‌ಗಾಗಿ ಈ ಹಿಂದೆಯೇ ಅರ್ಜಿ ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಅಂದಾಜು ಜಾತಿವಾರು ಮತಗಳನ್ನು ನೋಡುವುದಾದರೆ ಸುಮಾರು 2.06 ಲಕ್ಷ ಮತಗಳಿರುವ ಇಲ್ಲಿ 45,000 ಒಕ್ಕಲಿಗ ಮತ್ತು ರೆಡ್ಡಿ ಸಮುದಾಯದ ಮತಗಳಿದ್ದರೆ 40,000ದಷ್ಟು ಪ.ಜಾ ಮತಗಳು ಇವೆ ಎನ್ನಲಾಗುತ್ತಿದೆ. ಬಲಿಜಿಗರು 30,000 ಮತಗಳಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಕುರುಬರು 20,000, ಮುಸ್ಲಿಮರು 16,000, ಪ.ಪಂ 15,000 ಮತ್ತು ಇತರ ಹಿಂದುಳಿದ ವರ್ಗದ 40,000 ಮತಗಳು ಇವೆ ಎನ್ನಲಾಗುತ್ತಿದೆ. ಸಚಿವ ಸುಧಾಕರ್ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾದರೆ ಕೊತ್ತೂರು ಮಂಜುನಾಥ್ ಇತರೆ ಹಿಂದುಳಿದ ವರ್ಗದಲ್ಲಿ ಬರುವ ಬೈರಾಗಿ ಜಾತಿಯವರಾಗುತ್ತಾರೆ. ಹಾಗೆ ನೋಡಿದರೆ ಅಹಿಂದ ಮತಗಳನ್ನು ಸೆಳೆಯಲು ಕಾಂಗ್ರೆಸ್ ಪಕ್ಷವು ಹಣಬಲ ಹೊಂದಿರುವ ಕೊತ್ತೂರು ಮಂಜುನಾಥ್‌ರನ್ನೇ ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಸಚಿವ ಡಾ.ಕೆ ಸುಧಾಕರ್‌ ರವರಿಗೆ ಕೊತ್ತೂರು ಮಂಜುನಾಥ್‌ರವರ ಆಗಮನ ತಲೆ ಬಿಸಿ ಮಾಡಲಿದೆ. ಇನ್ನು ಮುಂದೆ ಚಿಕ್ಕಬಳ್ಳಾಪುರ ಕ್ಷೇತ್ರದ ರಾಜಕೀಯ ರಂಗೇರಲಿದ್ದು ಕಾಂಗ್ರೆಸ್- ಬಿಜೆಪಿ ನಡುವೆ ಸಮಾನ ಹೋರಾಟ ಕಂಡುಬರುವ ಸೂಚನೆ ನೀಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಿಕ್ಕಬಳ್ಳಾಪುರ: ಲಂಗು ಲಗಾಮಿಲ್ಲದ ಡಾ.ಕೆ ಸುಧಾಕರ್ ರಿಪಬ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...