Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಜಾತಿ ಪ್ರಮಾಣ ಪತ್ರದ ಸುಪ್ರೀಂ ತೀರ್ಪಿನಿಂದ ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

ಜಾತಿ ಪ್ರಮಾಣ ಪತ್ರದ ಸುಪ್ರೀಂ ತೀರ್ಪಿನಿಂದ ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

- Advertisement -
- Advertisement -

ಅನರ್ಹಗೊಂಡ ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ‘ಬೈರಾಗಿ’ ಜಾತಿಗೆ ಸೇರಿದವರು ಎಂದಿದ್ದ ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ರವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರವು ಅಸಿಂಧು ಎಂದಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯವು ಈ ವಿಷಯದಲ್ಲಿ ಒಳಗೊಂಡಿರುವ ಸಮಸ್ಯೆಯನ್ನು “ಸಂಕೀರ್ಣ” ಎಂದು ಗಮನಿಸಿದೆ. “ಎರಡು ಜಾತಿಗಳ ವೃತ್ತಿ, ಪದ್ಧತಿ, ಆಚಾರ-ವಿಚಾರಗಳ ಸಂಗತಿಗಳಿಂದ ಸಂಕೀರ್ಣತೆ ಹುಟ್ಟುತ್ತದೆ. ಬುಡಗ ಜಂಗಮ ಜಾತಿಗೆ ಸೇರಿದ ವ್ಯಕ್ತಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ‘ಮಲ ಸನ್ಯಾಸಿ’, ‘ಬೈರಾಗಿ’ ಇತ್ಯಾದಿ ಇಂತಹ ಹೆಸರುಗಳಿಂದ ಕರೆಯಲ್ಪಡುತ್ತಾರೆ ಎಂದು ಕೋಲಾರ ಗೆಜೆಟಿಯರ್ ಹೇಳಿರುವುದರಿಂದ ಈ ವಿಚಾರದಲ್ಲಿ ಸಂಕೀರ್ಣತೆ ಉಂಟಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ಅರ್ಜಿದಾರರು ರಾಜ್ಯ ಹೈಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಪ್ರತಿವಾದಿಗಳ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ವಕೀಲ ಸಂಜಯ್ ಎಂ ನುಲಿ ಪ್ರತಿನಿಧಿಸಿದ್ದರು.

ಕೊತ್ತೂರು ಮುಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ

2013ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೊತ್ತೂರು ಮಂಜುನಾಥ್‌ರವರು ಜೆಡಿಎಸ್ ಪಕ್ಷದ ಮುನಿನಂಜಪ್ಪರನ್ನು 33,734 ಮತಗಳ ಭಾರೀ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾದರು. 2018ರ ಚುನಾವಣೆ ವೇಳೆಗೆ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿ ಫಾರಂ ಪಡೆದು ನಾಮಪತ್ರ ಸಹ ಸಲ್ಲಿಸಿದ್ದರು. ಅಷ್ಟರಲ್ಲಿ ಬೈರಾಗಿ ಎಂಬ ಹಿಂದುಳಿದ ಜಾತಿಯ ಕೊತ್ತೂರು ಮಂಜುನಾಥ್‌ರವರು ಬುಡಗ ಜಂಗಮ ಜಾತಿ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರನ್ನು ಪರಿಗಣಿಸಿ ಅವರ ಪ.ಜಾ ಪ್ರಮಾಣ ಪತ್ರವನ್ನು ಅಸಿಂಧು ಎಂದು ಘೋಷಿಸಿತು. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾ ಅಧಿಕಾರಿಗಳು ಕೊತ್ತೂರು ಮಂಜುನಾಥ್‌ರವರ ನಾಮಪತ್ರವನ್ನು ತಿರಸ್ಕರಿಸಿದರು. ಇದರಿಂದ ಶಾಕ್‌ಗೆ ಒಳಗಾದ ಅವರು ಚುನಾವಣೆಯಿಂದ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿ ಬಂತು. ಕಣದಲ್ಲಿ ಇಲ್ಲದ ಕಾರಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ನಾಗೇಶ್‌ರವರಿಗೆ ಬೆಂಬಲ ಘೋಷಿಸಿ ಗೆಲ್ಲಿಸಬೇಕಾಯಿತು.

ಆಕಸ್ಮಿಕವಾಗಿ ಶಾಸಕರಾದ ಎಚ್.ನಾಗೇಶ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಅಬಕಾರಿಯಂತಹ ಮಹತ್ವ ಖಾತೆ ಅವರಿಗೆ ಸಿಕ್ಕಿತ್ತು. ಆನಂತರ ಸಣ್ಣ ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿತ್ತು. ಆದರೂ ಅತೃಪ್ತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ತೆರಳಿದ್ದರು. ಆನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿ ಮಂತ್ರಿಯಾದರು. ಬಿಜೆಪಿಯು ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅದಕ್ಕೂ ರಾಜೀನಾಮೆ ನೀಡಿದ ಅವರು ಸದ್ಯ ಅಧಿಕೃತವಾಗಿ ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಡಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

ಈಗ ಕೊತ್ತೂರು ಮಂಜುನಾಥ್‌ರವರ ಜಾತಿ ಪ್ರಮಾಣ ಪತ್ರದ ವಿವಾದ ಬಗೆಹರಿಯದ ಕಾರಣ ಅವರು ಪ.ಜಾ ಮೀಸಲು ಕ್ಷೇತ್ರವಾದ ಮುಳಬಾಗಿಲಿನಲ್ಲಿ ಸ್ಪರ್ಧಿಸುವಂತಿಲ್ಲ. ಸಾಮಾನ್ಯ ಕ್ಷೇತ್ರ ಕೋಲಾರಕ್ಕೆ ಸಿದ್ದರಾಮಯ್ಯನವರು ಬಂದಿರುವುದರಿಂದ ಅಲ್ಲಿಗೂ ಹೋಗಲಾಗದೆ ಅಂತಂತ್ರರಾಗಿದ್ದಾರೆ. ಹಾಗಾಗಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಮನಸ್ಸು ಮಾಡಿದ್ದಾರೆ.

ಕೊತ್ತೂರು ಮಂಜುನಾಥ್ ಮತ್ತು ಚಿಂತಾಮಣಿಯ ಮಾಜಿ ಶಾಸಕ ಡಾ.ಸುಧಾಕರ್ ಜೊತೆಯಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ಅವರಿಬ್ಬರಿಗೂ ಚಿಕ್ಕಬಳ್ಳಾಪುರದ ಹಾಲಿ ಶಾಸಕ ಮತ್ತು ಸಚಿವ ಡಾ.ಕೆ ಸುಧಾಕರ್ ಸಮಾನ ಶತ್ರುವಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ರನ್ನು ಎದುರಿಸುವ ಪ್ರಬಲ ಕಾಂಗ್ರೆಸ್ ಅಭ್ಯರ್ಥಿ ಕಾಣುತ್ತಿಲ್ಲ. ಇತ್ತ ಮಂಜುನಾಥ್‌ರವರಿಗೂ ಕೋಲಾರ ಜಿಲ್ಲೆಯಲ್ಲಿ ಕ್ಷೇತ್ರವಿಲ್ಲದ ಕಾರಣ ಚುನಾವಣೆಯೊಳಗೆ ತಮ್ಮ ಜಾತಿ ಪ್ರಮಾಣ ಪತ್ರ ಬಗೆಹರಿಯದಿದ್ದರೆ ಅವರು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಈಗಾಗಲೇ ಕೆಪಿಸಿಸಿ ಸದಸ್ಯರಾದ ವಿನಯ್ ಶ್ಯಾಮ್, ಯಲುವಹಳ್ಳಿ ಎನ್ ರಮೇಶ್, ಕೆ ಎನ್ ರಘು, ಮಾಜಿ ಜಿ.ಪಂ ಸದಸ್ಯ ಗಂಗರೇಕಾಲುವೆ ನಾರಾಯಣಸ್ವಾಮಿ ಮತ್ತು ಲಾಯರ್ ನಾರಾಯಣಸ್ವಾಮಿ ಟಿಕೆಟ್‌ಗಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಬಿಜೆಪಿಯ ಸಚಿವ ಸುಧಾಕರ್‌ರನ್ನು ಹಣಬಲ ಸೇರಿದಂತೆ ಎಲ್ಲಾ ರೀತಿಯಲ್ಲಿಯೂ ಎದುರಿಸಲು ಕೊತ್ತೂರು ಮಂಜುನಾಥ್‌ರವರೆ ಸೂಕ್ತ ಎಂದು ಭಾವಿಸಿರುವ ಹಲವು ಕಾಂಗ್ರೆಸ್ ಕಾರ್ಯಕರ್ತರು ಮಂಜುನಾಥ್ ಪರವಾಗಿ ಟಿಕೆಟ್‌ಗಾಗಿ ಈ ಹಿಂದೆಯೇ ಅರ್ಜಿ ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಅಂದಾಜು ಜಾತಿವಾರು ಮತಗಳನ್ನು ನೋಡುವುದಾದರೆ ಸುಮಾರು 2.06 ಲಕ್ಷ ಮತಗಳಿರುವ ಇಲ್ಲಿ 45,000 ಒಕ್ಕಲಿಗ ಮತ್ತು ರೆಡ್ಡಿ ಸಮುದಾಯದ ಮತಗಳಿದ್ದರೆ 40,000ದಷ್ಟು ಪ.ಜಾ ಮತಗಳು ಇವೆ ಎನ್ನಲಾಗುತ್ತಿದೆ. ಬಲಿಜಿಗರು 30,000 ಮತಗಳಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಕುರುಬರು 20,000, ಮುಸ್ಲಿಮರು 16,000, ಪ.ಪಂ 15,000 ಮತ್ತು ಇತರ ಹಿಂದುಳಿದ ವರ್ಗದ 40,000 ಮತಗಳು ಇವೆ ಎನ್ನಲಾಗುತ್ತಿದೆ. ಸಚಿವ ಸುಧಾಕರ್ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾದರೆ ಕೊತ್ತೂರು ಮಂಜುನಾಥ್ ಇತರೆ ಹಿಂದುಳಿದ ವರ್ಗದಲ್ಲಿ ಬರುವ ಬೈರಾಗಿ ಜಾತಿಯವರಾಗುತ್ತಾರೆ. ಹಾಗೆ ನೋಡಿದರೆ ಅಹಿಂದ ಮತಗಳನ್ನು ಸೆಳೆಯಲು ಕಾಂಗ್ರೆಸ್ ಪಕ್ಷವು ಹಣಬಲ ಹೊಂದಿರುವ ಕೊತ್ತೂರು ಮಂಜುನಾಥ್‌ರನ್ನೇ ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಸಚಿವ ಡಾ.ಕೆ ಸುಧಾಕರ್‌ ರವರಿಗೆ ಕೊತ್ತೂರು ಮಂಜುನಾಥ್‌ರವರ ಆಗಮನ ತಲೆ ಬಿಸಿ ಮಾಡಲಿದೆ. ಇನ್ನು ಮುಂದೆ ಚಿಕ್ಕಬಳ್ಳಾಪುರ ಕ್ಷೇತ್ರದ ರಾಜಕೀಯ ರಂಗೇರಲಿದ್ದು ಕಾಂಗ್ರೆಸ್- ಬಿಜೆಪಿ ನಡುವೆ ಸಮಾನ ಹೋರಾಟ ಕಂಡುಬರುವ ಸೂಚನೆ ನೀಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಿಕ್ಕಬಳ್ಳಾಪುರ: ಲಂಗು ಲಗಾಮಿಲ್ಲದ ಡಾ.ಕೆ ಸುಧಾಕರ್ ರಿಪಬ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...