Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಜಾತಿ ಪ್ರಮಾಣ ಪತ್ರದ ಸುಪ್ರೀಂ ತೀರ್ಪಿನಿಂದ ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

ಜಾತಿ ಪ್ರಮಾಣ ಪತ್ರದ ಸುಪ್ರೀಂ ತೀರ್ಪಿನಿಂದ ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

- Advertisement -
- Advertisement -

ಅನರ್ಹಗೊಂಡ ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ‘ಬೈರಾಗಿ’ ಜಾತಿಗೆ ಸೇರಿದವರು ಎಂದಿದ್ದ ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ರವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರವು ಅಸಿಂಧು ಎಂದಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯವು ಈ ವಿಷಯದಲ್ಲಿ ಒಳಗೊಂಡಿರುವ ಸಮಸ್ಯೆಯನ್ನು “ಸಂಕೀರ್ಣ” ಎಂದು ಗಮನಿಸಿದೆ. “ಎರಡು ಜಾತಿಗಳ ವೃತ್ತಿ, ಪದ್ಧತಿ, ಆಚಾರ-ವಿಚಾರಗಳ ಸಂಗತಿಗಳಿಂದ ಸಂಕೀರ್ಣತೆ ಹುಟ್ಟುತ್ತದೆ. ಬುಡಗ ಜಂಗಮ ಜಾತಿಗೆ ಸೇರಿದ ವ್ಯಕ್ತಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ‘ಮಲ ಸನ್ಯಾಸಿ’, ‘ಬೈರಾಗಿ’ ಇತ್ಯಾದಿ ಇಂತಹ ಹೆಸರುಗಳಿಂದ ಕರೆಯಲ್ಪಡುತ್ತಾರೆ ಎಂದು ಕೋಲಾರ ಗೆಜೆಟಿಯರ್ ಹೇಳಿರುವುದರಿಂದ ಈ ವಿಚಾರದಲ್ಲಿ ಸಂಕೀರ್ಣತೆ ಉಂಟಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ಅರ್ಜಿದಾರರು ರಾಜ್ಯ ಹೈಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಪ್ರತಿವಾದಿಗಳ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ವಕೀಲ ಸಂಜಯ್ ಎಂ ನುಲಿ ಪ್ರತಿನಿಧಿಸಿದ್ದರು.

ಕೊತ್ತೂರು ಮುಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ

2013ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೊತ್ತೂರು ಮಂಜುನಾಥ್‌ರವರು ಜೆಡಿಎಸ್ ಪಕ್ಷದ ಮುನಿನಂಜಪ್ಪರನ್ನು 33,734 ಮತಗಳ ಭಾರೀ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾದರು. 2018ರ ಚುನಾವಣೆ ವೇಳೆಗೆ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿ ಫಾರಂ ಪಡೆದು ನಾಮಪತ್ರ ಸಹ ಸಲ್ಲಿಸಿದ್ದರು. ಅಷ್ಟರಲ್ಲಿ ಬೈರಾಗಿ ಎಂಬ ಹಿಂದುಳಿದ ಜಾತಿಯ ಕೊತ್ತೂರು ಮಂಜುನಾಥ್‌ರವರು ಬುಡಗ ಜಂಗಮ ಜಾತಿ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರನ್ನು ಪರಿಗಣಿಸಿ ಅವರ ಪ.ಜಾ ಪ್ರಮಾಣ ಪತ್ರವನ್ನು ಅಸಿಂಧು ಎಂದು ಘೋಷಿಸಿತು. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾ ಅಧಿಕಾರಿಗಳು ಕೊತ್ತೂರು ಮಂಜುನಾಥ್‌ರವರ ನಾಮಪತ್ರವನ್ನು ತಿರಸ್ಕರಿಸಿದರು. ಇದರಿಂದ ಶಾಕ್‌ಗೆ ಒಳಗಾದ ಅವರು ಚುನಾವಣೆಯಿಂದ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿ ಬಂತು. ಕಣದಲ್ಲಿ ಇಲ್ಲದ ಕಾರಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ನಾಗೇಶ್‌ರವರಿಗೆ ಬೆಂಬಲ ಘೋಷಿಸಿ ಗೆಲ್ಲಿಸಬೇಕಾಯಿತು.

ಆಕಸ್ಮಿಕವಾಗಿ ಶಾಸಕರಾದ ಎಚ್.ನಾಗೇಶ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಅಬಕಾರಿಯಂತಹ ಮಹತ್ವ ಖಾತೆ ಅವರಿಗೆ ಸಿಕ್ಕಿತ್ತು. ಆನಂತರ ಸಣ್ಣ ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿತ್ತು. ಆದರೂ ಅತೃಪ್ತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ತೆರಳಿದ್ದರು. ಆನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿ ಮಂತ್ರಿಯಾದರು. ಬಿಜೆಪಿಯು ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅದಕ್ಕೂ ರಾಜೀನಾಮೆ ನೀಡಿದ ಅವರು ಸದ್ಯ ಅಧಿಕೃತವಾಗಿ ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಡಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

ಈಗ ಕೊತ್ತೂರು ಮಂಜುನಾಥ್‌ರವರ ಜಾತಿ ಪ್ರಮಾಣ ಪತ್ರದ ವಿವಾದ ಬಗೆಹರಿಯದ ಕಾರಣ ಅವರು ಪ.ಜಾ ಮೀಸಲು ಕ್ಷೇತ್ರವಾದ ಮುಳಬಾಗಿಲಿನಲ್ಲಿ ಸ್ಪರ್ಧಿಸುವಂತಿಲ್ಲ. ಸಾಮಾನ್ಯ ಕ್ಷೇತ್ರ ಕೋಲಾರಕ್ಕೆ ಸಿದ್ದರಾಮಯ್ಯನವರು ಬಂದಿರುವುದರಿಂದ ಅಲ್ಲಿಗೂ ಹೋಗಲಾಗದೆ ಅಂತಂತ್ರರಾಗಿದ್ದಾರೆ. ಹಾಗಾಗಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಮನಸ್ಸು ಮಾಡಿದ್ದಾರೆ.

ಕೊತ್ತೂರು ಮಂಜುನಾಥ್ ಮತ್ತು ಚಿಂತಾಮಣಿಯ ಮಾಜಿ ಶಾಸಕ ಡಾ.ಸುಧಾಕರ್ ಜೊತೆಯಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ಅವರಿಬ್ಬರಿಗೂ ಚಿಕ್ಕಬಳ್ಳಾಪುರದ ಹಾಲಿ ಶಾಸಕ ಮತ್ತು ಸಚಿವ ಡಾ.ಕೆ ಸುಧಾಕರ್ ಸಮಾನ ಶತ್ರುವಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ರನ್ನು ಎದುರಿಸುವ ಪ್ರಬಲ ಕಾಂಗ್ರೆಸ್ ಅಭ್ಯರ್ಥಿ ಕಾಣುತ್ತಿಲ್ಲ. ಇತ್ತ ಮಂಜುನಾಥ್‌ರವರಿಗೂ ಕೋಲಾರ ಜಿಲ್ಲೆಯಲ್ಲಿ ಕ್ಷೇತ್ರವಿಲ್ಲದ ಕಾರಣ ಚುನಾವಣೆಯೊಳಗೆ ತಮ್ಮ ಜಾತಿ ಪ್ರಮಾಣ ಪತ್ರ ಬಗೆಹರಿಯದಿದ್ದರೆ ಅವರು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಈಗಾಗಲೇ ಕೆಪಿಸಿಸಿ ಸದಸ್ಯರಾದ ವಿನಯ್ ಶ್ಯಾಮ್, ಯಲುವಹಳ್ಳಿ ಎನ್ ರಮೇಶ್, ಕೆ ಎನ್ ರಘು, ಮಾಜಿ ಜಿ.ಪಂ ಸದಸ್ಯ ಗಂಗರೇಕಾಲುವೆ ನಾರಾಯಣಸ್ವಾಮಿ ಮತ್ತು ಲಾಯರ್ ನಾರಾಯಣಸ್ವಾಮಿ ಟಿಕೆಟ್‌ಗಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಬಿಜೆಪಿಯ ಸಚಿವ ಸುಧಾಕರ್‌ರನ್ನು ಹಣಬಲ ಸೇರಿದಂತೆ ಎಲ್ಲಾ ರೀತಿಯಲ್ಲಿಯೂ ಎದುರಿಸಲು ಕೊತ್ತೂರು ಮಂಜುನಾಥ್‌ರವರೆ ಸೂಕ್ತ ಎಂದು ಭಾವಿಸಿರುವ ಹಲವು ಕಾಂಗ್ರೆಸ್ ಕಾರ್ಯಕರ್ತರು ಮಂಜುನಾಥ್ ಪರವಾಗಿ ಟಿಕೆಟ್‌ಗಾಗಿ ಈ ಹಿಂದೆಯೇ ಅರ್ಜಿ ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಅಂದಾಜು ಜಾತಿವಾರು ಮತಗಳನ್ನು ನೋಡುವುದಾದರೆ ಸುಮಾರು 2.06 ಲಕ್ಷ ಮತಗಳಿರುವ ಇಲ್ಲಿ 45,000 ಒಕ್ಕಲಿಗ ಮತ್ತು ರೆಡ್ಡಿ ಸಮುದಾಯದ ಮತಗಳಿದ್ದರೆ 40,000ದಷ್ಟು ಪ.ಜಾ ಮತಗಳು ಇವೆ ಎನ್ನಲಾಗುತ್ತಿದೆ. ಬಲಿಜಿಗರು 30,000 ಮತಗಳಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಕುರುಬರು 20,000, ಮುಸ್ಲಿಮರು 16,000, ಪ.ಪಂ 15,000 ಮತ್ತು ಇತರ ಹಿಂದುಳಿದ ವರ್ಗದ 40,000 ಮತಗಳು ಇವೆ ಎನ್ನಲಾಗುತ್ತಿದೆ. ಸಚಿವ ಸುಧಾಕರ್ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾದರೆ ಕೊತ್ತೂರು ಮಂಜುನಾಥ್ ಇತರೆ ಹಿಂದುಳಿದ ವರ್ಗದಲ್ಲಿ ಬರುವ ಬೈರಾಗಿ ಜಾತಿಯವರಾಗುತ್ತಾರೆ. ಹಾಗೆ ನೋಡಿದರೆ ಅಹಿಂದ ಮತಗಳನ್ನು ಸೆಳೆಯಲು ಕಾಂಗ್ರೆಸ್ ಪಕ್ಷವು ಹಣಬಲ ಹೊಂದಿರುವ ಕೊತ್ತೂರು ಮಂಜುನಾಥ್‌ರನ್ನೇ ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಸಚಿವ ಡಾ.ಕೆ ಸುಧಾಕರ್‌ ರವರಿಗೆ ಕೊತ್ತೂರು ಮಂಜುನಾಥ್‌ರವರ ಆಗಮನ ತಲೆ ಬಿಸಿ ಮಾಡಲಿದೆ. ಇನ್ನು ಮುಂದೆ ಚಿಕ್ಕಬಳ್ಳಾಪುರ ಕ್ಷೇತ್ರದ ರಾಜಕೀಯ ರಂಗೇರಲಿದ್ದು ಕಾಂಗ್ರೆಸ್- ಬಿಜೆಪಿ ನಡುವೆ ಸಮಾನ ಹೋರಾಟ ಕಂಡುಬರುವ ಸೂಚನೆ ನೀಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಿಕ್ಕಬಳ್ಳಾಪುರ: ಲಂಗು ಲಗಾಮಿಲ್ಲದ ಡಾ.ಕೆ ಸುಧಾಕರ್ ರಿಪಬ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...