HomeಮುಖಪುಟSSLC ಪರೀಕ್ಷೆ ನಡೆಸದಿರಲು ಆಂಧ್ರ ಪ್ರದೇಶದ ನಿರ್ಧಾರ

SSLC ಪರೀಕ್ಷೆ ನಡೆಸದಿರಲು ಆಂಧ್ರ ಪ್ರದೇಶದ ನಿರ್ಧಾರ

- Advertisement -
- Advertisement -

ದಿನೇ ದಿನೇ ಉಲ್ಭಣಿಸುತ್ತಿರುವ ಕೊರೊನಾ ಸಾಂಕ್ರಾಮಿಕದ ಮುನ್ನೆಚ್ಚರಿಕೆ ಕ್ರಮವಾಗಿ SSLC ಪರೀಕ್ಷೆ ರದ್ದುಗೊಳಿಸಿದ ತೆಲಂಗಾಣ, ತಮಿಳುನಾಡು ಪಟ್ಟಿಗೆ ಆಂಧ್ರಪ್ರದೇಶವು ಸಹ ಸೇರಿಕೊಂಡಿದೆ.

COVID19 ಹಿನ್ನೆಲೆಯಲ್ಲಿ 10 ನೇ ತರಗತಿ (SSLC) ಪರೀಕ್ಷೆಗಳನ್ನು ನಡೆಸದಿರಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ತಿಳಿಸಿದ್ದಾರೆ.

ಆಂಧ್ರ ಪ್ರದೇಶವು ಒಟ್ಟು 7961 ಪ್ರಕರಣಗಳನ್ನು ದಾಖಲಿಸಿದ್ದು 96 ಸಾವುಗಳು ಸಂಭವಿಸಿವೆ. 3948 ಜನರು ಇನ್ನು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಒಂದೇ ದಿನ 443 ಪ್ರಕರಣಗಳು ವರದಿಯಾಗಿದ್ದು ಆತಂಕ ಹೆಚ್ಚಿಸಿದೆ.

ದಕ್ಷಿಣದ ರಾಜ್ಯಗಳಲ್ಲಿ ಕೇರಳ ಮಾತ್ರ ಬಾಕಿ ಉಳಿದಿದ್ದ 3 ವಿಷಯದ SSLC ಪರೀಕ್ಷೆಯನ್ನು ಮೇ ಅಂತ್ಯದಲ್ಲಿ ಯಶಸ್ವಿಯಾಗಿ ನಡೆಸಿದೆ. ತೆಲಂಗಾಣ, ತಮಿಳುನಾಡು ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಿದೆ.

ಆದರೆ ಕರ್ನಾಟಕ ಮಾತ್ರ ಜೂನ್ 25 ರಿಂದ ಪರೀಕ್ಷೆ ನಡೆಸುವುದಾಗಿ ಘೋಷಿಸಿ ಸರ್ವ ತಯಾರಿ ನಡೆಸಿದೆ. ಜೂನ್ 18 ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊರ್ವಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆತಂಕವನ್ನು ಹೆಚ್ಚು ಮಾಡಿದೆ.


ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ


ಈ ಬಾರಿ ಕರ್ನಾಟಕದಲ್ಲಿ SSLC ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾದ ವಿದ್ಯಾರ್ಥಿಗಳ ಅಂದಾಜು ಸಂಖ್ಯೆ 8.5 ಲಕ್ಷ (ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮಾಹಿತಿಯಂತೆ). ಪರೀಕ್ಷೆಯ ನಿರ್ವಾಹಕ ಸಿಬ್ಬಂದಿ ಅಂದಾಜು 2.2 ಲಕ್ಷ. ಇವರಲ್ಲಿ ದುರದೃಷ್ಟವಶಾತ್ ಯಾರಿಗಾದರೂ ಸೋಂಕು ಉಂಟಾಗಿ ಅಲ್ಲಿಂದ ಹರಡಿದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಕುಟುಂಬದವರಿಗೆ ಕಾಡುತ್ತಿದೆ. ಇದಕ್ಕೆ ಶಿಕ್ಷಣ ಇಲಾಖೆಯ ಬಳಿ ಉತ್ತರವಿದೆಯೇ ಎಂದು ಚಿಂತಕರು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದು ಪರೀಕ್ಷೆ ರದ್ದುಗೊಳಿಸಲು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಕೂಡ ಕೊರೊನಾ ಹರಡುವ ಇಂತಹ ಭಯದ ಸನ್ನಿವೇಶದಲ್ಲಿ ಹೇಗೆ ಅವರು ತಮ್ಮ ಗಮನವನ್ನು ಕೇಂದ್ರೀಕರಿಸಿ ಆತಂಕರಹಿತವಾಗಿ ಪರೀಕ್ಷೆಯನ್ನು ಬರೆಯಲು ಹೇಗೆ ಸಾಧ್ಯವಾಗುತ್ತದೆ? ಪರೀಕ್ಷೆಯ ನಿರ್ವಾಹಕ ಸಿಬ್ಬಂದಿಯು ಹೇಗೆ ತಾನೇ ಮಾನಸಿಕ ಒತ್ತಡದಲ್ಲಿ ಪರೀಕ್ಷೆಯನ್ನು ನಡೆಸಲು ಸಾಧ್ಯ?


ಇದನ್ನೂ ಓದಿ: PUC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್!: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...