Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ’: ಸಮಿತಿ ರಚನೆ ಕಣ್ಣೊರೆಸುವ ತಂತ್ರ; ಅಧೀರ್ ರಂಜನ್ ಚೌಧರಿ

‘ಒಂದು ರಾಷ್ಟ್ರ, ಒಂದು ಚುನಾವಣೆ’: ಸಮಿತಿ ರಚನೆ ಕಣ್ಣೊರೆಸುವ ತಂತ್ರ; ಅಧೀರ್ ರಂಜನ್ ಚೌಧರಿ

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆ ಕುರಿತ ಅಧ್ಯಯನಕ್ಕೆ ರಚಿಸಿದ ಸಮಿತಿ ಬಗ್ಗೆ ಕಣ್ಣೊರೆಸುವ ತಂತ್ರ  ಎಂದು ಕರೆದಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಮಿತಿಯು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರ ಒಲವು ಹೊಂದಿರುವವರಿಂದ ತುಂಬಿಕೊಂಡಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ದೇಶ, ಒಂದು ಚುನಾವಣೆ’ ಕಲ್ಪನೆ ಕುರಿತು ಅಧ್ಯಯನ ನಡೆಸಲು ರಚಿಸಿದ 8 ಸದಸ್ಯರ ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ.

ಈ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಚೌಧರಿ, ಸಮಿತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಡಲಾಗಿದೆ. ಬದಲಿಗೆ ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಸೇರಿಸಲಾಗಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಎಂಟು ಸದಸ್ಯರ ಸಮಿತಿಯಲ್ಲಿ 7 ಮಂದಿ ಸದಸ್ಯರ ಜೊತೆ ಮೊದಲು ಸಮಾಲೋಚಿಸಿರಬಹುದು ಅಥವಾ ಇಲ್ಲದಿರಬಹುದು. ಆದರೆ ಅವರಲ್ಲಿ ಹೆಚ್ಚಿನವರು ಈ ಹಿಂದೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರವಾಗಿ ಮಾತನಾಡಿದ್ದಾರೆ. ಕೆಲವರು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದಾರೆ ಮತ್ತು ಕೆಲವರು ಪಕ್ಷದ ನಿರ್ದೇಶನವನ್ನು ಅನುಸರಿಸುವವರಾಗಿದ್ದಾರೆ. ಆದ್ದರಿಂದ ಅವರ ಅಭಿಪ್ರಾಯ ಯೋಜಿತವಾಗಿದೆ ಎಂದು ಚೌದರಿ ಹೇಳಿದ್ದಾರೆ.

ಸಮಿತಿಯ ಹಿರಿಯ ಸದಸ್ಯ ಸುಭಾಷ್ ಸಿ ಕಶ್ಯಪ್ ಅವರಿಗೆ 94 ವರ್ಷ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುಭಾಷ್ ಸಿ.ಕಶ್ಯಪ್ ಅವರು ಈ ಹಿಂದೆ ಒಂದು ದೇಶ-ಒಂದು ಚುನಾವಣೆಯ ಪರವಾಗಿ ಮಾತನಾಡಿರುವ ದಾಖಲೆ ಇದೆ.

ರಾಮ್ ನಾಥ್ ಕೋವಿಂದ್ ಅವರು ಭಾರತದ ರಾಷ್ಟ್ರಪತಿಯಾಗಿದ್ದಾಗ ಅವರ ಕಾರ್ಯದರ್ಶಿಯಾಗಿ ಸಂಜಯ್ ಕೊಠಾರಿ ಕೆಲಸ ಮಾಡಿದ್ದರು. ಈಗ ಅವರು ಸಮಿತಿಯಲ್ಲಿದ್ದಾರೆ. ಇನ್ನೋರ್ವ ಸದಸ್ಯ ಲಂಡನ್ ಮೂಲದ ಎನ್‌ಆರ್‌ಐ ವಕೀಲ ಹರೀಶ್ ಸಾಳ್ವೆ ಬಿಜೆಪಿಗೆ ಆಪ್ತರು. ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್ 2014 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಕಳೆದ ವರ್ಷ ಕಾಂಗ್ರೆಸ್ ತೊರೆದು ಸ್ವಂತ ಪಕ್ಷ ಸ್ಥಾಪಿಸಿದ್ದ ಮಾಜಿ ಸಂಸದ ಗುಲಾಂ ನಬಿ ಆಜಾದ್ ಕೂಡ ಬಿಜೆಪಿಯ ಜೊತೆ ನಿಕಟ ಬಾಂದವ್ಯ ಹೊಂದಿದ್ದಾರೆ ಎಂದು ಚೌದರಿ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಕೂಡ ಸಮಿತಿಯ ಸದಸ್ಯರಾಗಿದ್ದಾರೆ. ಎಂಟು ಸದಸ್ಯರಲ್ಲಿ ಸಮಿತಿಯ ಅಧ್ಯಕ್ಷರಾದ ಮಾಜಿ ರಾಷ್ಟ್ರಪತಿ ಕೋವಿಂದ್ ಸೇರಿ 7 ಮಂದಿ ಬಿಜೆಪಿಗೆ ಆಪ್ತರಾಗಿದ್ದಾರೆ. ಎಂಟನೇ ಸದಸ್ಯ ಚೌಧರಿ ಸಮಿತಿಯ ಭಾಗವಾಗಲು  ನಿರಾಕರಿಸಿದ್ದು, ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಸಮಿತಿಯಲ್ಲಿ ಮುಖ್ಯಮಂತ್ರಿಗಳಾಗಲಿ, ವಿಶೇಷವಾಗಿ ಪ್ರತಿಪಕ್ಷಗಳ ನಾಯಕರಾಗಲಿ ಮಾಜಿ ಕಾನೂನು ಮಂತ್ರಿಗಳಾಗಲಿ ಯಾರೂ ಇಲ್ಲ ಎಂಬುದು ಗಮನಾರ್ಹವಾಗಿದೆ.

ಇದನ್ನು ಓದಿ: ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ: ಸಿಎಂ ಏಕನಾಥ್ ಶಿಂಧೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...