Homeಮುಖಪುಟ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

- Advertisement -
- Advertisement -

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಸಮಿತಿಯು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದು, ಜ.15ರೊಳಗೆ ಕಳುಹಿಸುವ ಸಲಹೆಗಳನ್ನು ಸ್ವೀಕರಿಸಲಾಗುವುದು ಎಂದು ಹೇಳಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಸಮಿತಿಯು ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲು ಅಸ್ತಿತ್ವದಲ್ಲಿರುವ ಕಾನೂನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡುವ ಕುರಿತು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ.

ಸಾರ್ವಜನಿಕ ಪ್ರಕಟಣೆಯಲ್ಲಿ ಸಮಿತಿಯು, ಜನವರಿ 15ರೊಳಗೆ ಸ್ವೀಕರಿಸಿದ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಸಲಹೆಗಳನ್ನು ಸಮಿತಿಯ ವೆಬ್‌ಸೈಟ್ onoe.gov.in ನಲ್ಲಿ ಪೋಸ್ಟ್ ಮಾಡಬಹುದು ಅಥವಾ ಇ-ಮೇಲ್ ಮೂಲಕ [email protected] ಗೆ ಕಳುಹಿಸಬಹುದು ಎಂದು ತಿಳಿಸಿದೆ.

ಸಮಿತಿ ರಚನೆ ಬಳಿಕ ಈವರೆಗೆ ಸಮಿತಿಯು ಎರಡು ಸಭೆಗಳನ್ನು ನಡೆಸಿದೆ. ಇದು ಇತ್ತೀಚೆಗೆ ರಾಜಕೀಯ ಪಕ್ಷಗಳಿಗೆ ಪತ್ರ ಬರೆದು ಅವರ ಅಭಿಪ್ರಾಯಗಳನ್ನು ಮತ್ತು ‘ಒಂದು ದೇಶ ಒಂದು ಚುನಾವಣೆ’ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲು ಎಲ್ಲರಿಗೂ ಒಮ್ಮತದ ಒಂದು ದಿನಾಂಕವನ್ನು ಸೂಚಿಸಬೇಕು ಎಂದು ರಾಜಕೀಯ ಪಕ್ಷಗಳಿಗೆ ಕೋರಿತ್ತು.

6 ರಾಷ್ಟ್ರೀಯ ಪಕ್ಷಗಳು, 33 ಪ್ರಾದೇಶಿಕ ಪಕ್ಷಗಳಿಗೆ ಪತ್ರಗಳನ್ನು ಕಳುಹಿಸಲಾಗಿತ್ತು. ಸಮಿತಿಯು ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಕಾನೂನು ಆಯೋಗದ ಅಭಿಪ್ರಾಯವನ್ನೂ ಕೇಳಿದೆ. ಈ ವಿಚಾರದಲ್ಲಿ ಮತ್ತೊಮ್ಮೆ ಕಾನೂನು ಸಮಿತಿ ಸಭೆಯು ನಡೆಯುವ ಸಾಧ್ಯತೆ ಇದೆ.

ಸಮಿತಿಯು, ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸುಗಳನ್ನು ಮಾಡಬೇಕಿದೆ. ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ: ಬಿಜೆಪಿ ಶಾಸಕನಿಗೆ ಎರಡು ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...