Homeಮುಖಪುಟ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

- Advertisement -
- Advertisement -

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಸಮಿತಿಯು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದು, ಜ.15ರೊಳಗೆ ಕಳುಹಿಸುವ ಸಲಹೆಗಳನ್ನು ಸ್ವೀಕರಿಸಲಾಗುವುದು ಎಂದು ಹೇಳಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಸಮಿತಿಯು ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲು ಅಸ್ತಿತ್ವದಲ್ಲಿರುವ ಕಾನೂನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡುವ ಕುರಿತು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ.

ಸಾರ್ವಜನಿಕ ಪ್ರಕಟಣೆಯಲ್ಲಿ ಸಮಿತಿಯು, ಜನವರಿ 15ರೊಳಗೆ ಸ್ವೀಕರಿಸಿದ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಸಲಹೆಗಳನ್ನು ಸಮಿತಿಯ ವೆಬ್‌ಸೈಟ್ onoe.gov.in ನಲ್ಲಿ ಪೋಸ್ಟ್ ಮಾಡಬಹುದು ಅಥವಾ ಇ-ಮೇಲ್ ಮೂಲಕ [email protected] ಗೆ ಕಳುಹಿಸಬಹುದು ಎಂದು ತಿಳಿಸಿದೆ.

ಸಮಿತಿ ರಚನೆ ಬಳಿಕ ಈವರೆಗೆ ಸಮಿತಿಯು ಎರಡು ಸಭೆಗಳನ್ನು ನಡೆಸಿದೆ. ಇದು ಇತ್ತೀಚೆಗೆ ರಾಜಕೀಯ ಪಕ್ಷಗಳಿಗೆ ಪತ್ರ ಬರೆದು ಅವರ ಅಭಿಪ್ರಾಯಗಳನ್ನು ಮತ್ತು ‘ಒಂದು ದೇಶ ಒಂದು ಚುನಾವಣೆ’ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲು ಎಲ್ಲರಿಗೂ ಒಮ್ಮತದ ಒಂದು ದಿನಾಂಕವನ್ನು ಸೂಚಿಸಬೇಕು ಎಂದು ರಾಜಕೀಯ ಪಕ್ಷಗಳಿಗೆ ಕೋರಿತ್ತು.

6 ರಾಷ್ಟ್ರೀಯ ಪಕ್ಷಗಳು, 33 ಪ್ರಾದೇಶಿಕ ಪಕ್ಷಗಳಿಗೆ ಪತ್ರಗಳನ್ನು ಕಳುಹಿಸಲಾಗಿತ್ತು. ಸಮಿತಿಯು ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಕಾನೂನು ಆಯೋಗದ ಅಭಿಪ್ರಾಯವನ್ನೂ ಕೇಳಿದೆ. ಈ ವಿಚಾರದಲ್ಲಿ ಮತ್ತೊಮ್ಮೆ ಕಾನೂನು ಸಮಿತಿ ಸಭೆಯು ನಡೆಯುವ ಸಾಧ್ಯತೆ ಇದೆ.

ಸಮಿತಿಯು, ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸುಗಳನ್ನು ಮಾಡಬೇಕಿದೆ. ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ: ಬಿಜೆಪಿ ಶಾಸಕನಿಗೆ ಎರಡು ವರ್ಷ ಜೈಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...