Homeಮುಖಪುಟಸಂಸತ್ ಭವನದ ಶಂಕುಸ್ಥಾಪನೆಗೆ ‘ಅಸ್ಪೃಶ್ಯ’ ಎಂದು ಮಾಜಿ ರಾಷ್ಟ್ರಪತಿ ಕೋವಿಂದ್‌ಗೆ ಆಹ್ವಾನಿಸಿರಲಿಲ್ಲ: ಖರ್ಗೆ

ಸಂಸತ್ ಭವನದ ಶಂಕುಸ್ಥಾಪನೆಗೆ ‘ಅಸ್ಪೃಶ್ಯ’ ಎಂದು ಮಾಜಿ ರಾಷ್ಟ್ರಪತಿ ಕೋವಿಂದ್‌ಗೆ ಆಹ್ವಾನಿಸಿರಲಿಲ್ಲ: ಖರ್ಗೆ

- Advertisement -
- Advertisement -

ನೂತನ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಆಹ್ವಾನಿಸಿರಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಜೈಪುರದಲ್ಲಿ ಕಾಂಗ್ರೆಸ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಹೊಸ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿಲ್ಲ. ಆದರೆ ನಟರು ಸೇರಿದಂತೆ ಅನೇಕರನ್ನು ಆಹ್ವಾನಿಸಲಾಗಿದೆ. ನೂತನ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಆಹ್ವಾನಿಸಿರಲಿಲ್ಲ. ಸಂಸತ್‌ ಭವನಕ್ಕೆ ಅಸ್ಪೃಶ್ಯರು ಅಡಿಪಾಯ ಹಾಕಿದರೆ ಅದನ್ನು ಗಂಗಾಜಲದಿಂದ ತೊಳೆಯುತ್ತಾರೆ ಎಂದು ಖರ್ಗೆ ಹೇಳಿದ್ದಾರೆ.

ನೂತನ ಸಂಸತ್‌ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಈ ಮೊದಲು ಖರ್ಗೆ ಹೇಳಿದ್ದರು.

ಮೋದಿ ಸರ್ಕಾರ ದಲಿತ ಮತ್ತು ಬುಡಕಟ್ಟು ಸಮುದಾಯದವರನ್ನು ಕೇವಲ ಚುನಾವಣಾ ಕಾರಣಗಳಿಗಾಗಿ ಭಾರತದ ರಾಷ್ಟ್ರಪತಿಗಳನ್ನಾಗಿ ಆಯ್ಕೆ ಮಾಡಿದಂತಿದೆ. ನೂತನ ಸಂಸತ್ತಿನ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಅಂದಿನ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನು ಆಹ್ವಾನಿಸಿರಲಿಲ್ಲ. ಈಗ ನೂತನ ಸಂಸತ್‌ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದು ಟೀಕಿಸಿದ್ದಾರೆ.

ಭಾರತದ ಸಂಸತ್ತು ಗಣತಂತ್ರ ಭಾರತದ ಸರ್ವೋಚ್ಛ ಶಾಸಕಾಂಗ ಸಂಸ್ಥೆಯಾಗಿದ್ದು, ರಾಷ್ಟ್ರಪತಿಗಳು ಅದರ ಅತ್ಯುನ್ನತ ಶಾಸಕಾಂಗದ ಅಧಿಕಾರ ಹೊಂದಿದ್ದಾರೆ. ದ್ರೌಪದಿ ಮುರ್ಮು ಅವರು  ಸರ್ಕಾರ, ವಿಪಕ್ಷಗಳು ಮತ್ತು ಭಾರತದ ಪ್ರತಿ ನಾಗರೀಕರನ್ನು ಪ್ರತಿನಿಧಿಸುತ್ತಾರೆ. ಅವರು ಭಾರತದ ಪ್ರಥಮ ಪ್ರಜೆಯಾಗಿದ್ದಾರೆ. ಮೋದಿ ಸರ್ಕಾರ ಪದೇ ಪದೇ ರಾಷ್ಟ್ರಪತಿಗಳನ್ನು ಅಗೌರವಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...