Homeಮುಖಪುಟಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ಡಿ.ಕೆ.ಶಿವಕುಮಾರ್ ಅವರು ‘ಒಂದು ಪ್ರಶ್ನೆ’ ವಿಡಿಯೋ ಸರಣಿ ಆರಂಭಿಸಿದ್ದು, ಎಲ್‌ಪಿಜಿ ಬೆಲೆ ಏರಿಕೆಯನ್ನು ವಿನೂತನವಾಗಿ ಪ್ರಶ್ನಿಸಿದ್ದಾರೆ. ಈ ಹಿಂದಿನ ವಿಡಿಯೊದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ನಾಗಪುರ ಎಜುಕೇಷನ್ ಪಾಲಿಸಿ ಎಂದು ವಿಶ್ಲೇಷಿಸಿದ್ದರು. ಎರಡನೇ ವಿಡಿಯೊದಲ್ಲಿ ‘ಸಿಲಿಂಡರ್‌ ಬೆಲೆ ಏರಿಕೆ’ಯ ಕುರಿತು ಮಾತನಾಡಿದ್ದಾರೆ.

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ‘ಒಂದು ಪ್ರಶ್ನೆ’ ವಿಡಿಯೋ ಸರಣಿ ಆರಂಭಿಸಿದ್ದು, ಎಲ್‌ಪಿಜಿ ಬೆಲೆ ಏರಿಕೆಯನ್ನು ವಿನೂತನವಾಗಿ ಪ್ರಶ್ನಿಸಿದ್ದಾರೆ. ಈ ಹಿಂದಿನ ವಿಡಿಯೊದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ನಾಗಪುರ ಎಜುಕೇಷನ್ ಪಾಲಿಸಿ ಎಂದು ವಿಶ್ಲೇಷಿಸಿದ್ದರು. ಎರಡನೇ ವಿಡಿಯೊದಲ್ಲಿ ‘ಸಿಲಿಂಡರ್‌ ಬೆಲೆ ಏರಿಕೆ’ಯ ಕುರಿತು ಮಾತನಾಡಿದ್ದಾರೆ.

ಅಡುಗೆ ಮನೆಯಲ್ಲಿ ನಿಂತು ಕಾಫಿ ಹೀರುತ್ತಾ ಮಾತನಾಡಿರುವ ಡಿ.ಕೆ.ಶಿವಕುಮಾರ್, “ನಾನು ಅಡುಗೆ ಮನೆಗೆ ಸಂಬಂಧಿಸಿದಂತೆ ಈಗ ಮಾತನಾಡುತ್ತಿದ್ದೇನೆ. ಈ ವಾರ ಕೇಳುವ ಪ್ರಶ್ನೆ ಏನೆಂದರೆ, ಎಲ್‌ಪಿಜಿ ಬೆಲೆಯನ್ನು ಇಳಿಸಬೇಕಾ? ಬೇಡವಾ?” ಎಂದಿದ್ದಾರೆ.

“ಸಿಲಿಂಡರ್ ಬೆಲೆ 888 ರೂ.  ಇದ್ದು, ಸದ್ಯದಲ್ಲೇ 900 ರೂಪಾಯಿಯಿಂದ 1000 ರೂ.ವರೆಗೆ ತಲುಪಬಹುದು. ರಾಜ್ಯದ ಜನತೆಗೆ ಎಂತಹ ಸಂಕಷ್ಟ ನೋಡಿ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬೆಲೆ ಮಾತ್ರ ಕಡಿಮೆಯಾಗಲಿಲ್ಲ” ಎಂದು ಟೀಕಿಸಿದ್ದಾರೆ.

“ರಾಜ್ಯದ ನಾನಾ ಭಾಗಗಳಲ್ಲಿ ನಾನು ತಿರುಗಾಡಿ ಬಂದಿದ್ದೇನೆ. ಬಡವರು, ಶ್ರೀಮಂತರು, ಮಧ್ಯಮ ವರ್ಗದವರನ್ನು ನಾನು ಭೇಟಿಯಾಗಿದ್ದೇನೆ. ಅವರೆಲ್ಲರೂ ಬೆಲೆ ಏರಿಕೆಯಿಂದ ಬೆಂದು ಹೋಗಿದ್ದಾರೆ. ಬಡಕುಟುಂಬದವರ ಮುಂದೆ ಇರುವ ಆಯ್ಕೆ ಎರಡೇ. ಒಂದು ಅವರ ಮಕ್ಕಳ ಶಾಲೆಗೆ ಶುಲ್ಕ ಕಟ್ಟಬೇಕಾ? ಅಥವಾ ಗ್ಯಾಸ್ ಸಿಲಿಂಡರ್‌ ಖರೀದಿ ಮಾಡಬೇಕಾ? ಪೋಷಕರ ಉದ್ಯೋಗ ನಷ್ಟವಾದ ಕಾರಣ, ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ. ನಿರುದ್ಯೋಗದಿಂದ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಲಿಂಡರ್‌ ಬೆಲೆಯನ್ನು ಏರಿಸುವುದು ನ್ಯಾಯಾನಾ?” ಎಂಬ ಪ್ರಶ್ನೆಯನ್ನು ಜನರ ಮುಂದಿಟ್ಟಿದ್ದಾರೆ.

ಸಿಲಿಂಡರ್‌ ತುಂಬಿಸಲು ಕಾಸಿಲ್ಲದೆ ಎಷ್ಟೋ ಕುಟುಂಬಗಳು ಸೌದೆ ಒಲೆಯನ್ನು ನೋಡುತ್ತಿವೆ. ಗ್ಯಾಸ್ ತುಂಬಿಸಲು ಒಡೆವೆಯನ್ನು ಒತ್ತೆ ಇಡುತ್ತಿದ್ದಾರೆ. ಹೀಗಾಗಿ ನನ್ನ ಬೇಡಿಕೆಯೊಂದೇ ಕನಿಷ್ಠ 150 ರೂಪಾಯಿಯಾದರೂ ಬೆಲೆ ಇಳಿಕೆಯಾಗಬೇಕಲ್ಲವೇ? ನಿಮ್ಮ ಉತ್ತರವನ್ನು ನಿರೀಕ್ಷೆ ಮಾಡುತ್ತಿದ್ದೇನೆ. ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟ್ಟರ್‌ನಲ್ಲಿ, ಇನ್‌ಸ್ಟಾದಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ” ಎಂದು ಕೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....