Homeಕರ್ನಾಟಕಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

- Advertisement -
- Advertisement -

ಚಾಮರಾಜನಗರ ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವತಿಯಿಂದ ಪರಿಹಾರದ ಚೆಕ್ ವಿತರಿಸಿದ್ದಾರೆ. ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ಆದರೆ, ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಯಿತು. ಇದನ್ನೆಲ್ಲ ಗಮನಿಸಿದ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ತಂಡ ಕಳುಹಿಸಿ ತನಿಖೆ ನಡೆಸಿದಾಗ ಒಟ್ಟು 36 ಮಂದಿ ಸತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ’ ಎಂದಿದ್ದಾರೆ.

’ಇಲ್ಲಿನ ಸಾವುಗಳು ಸರ್ಕಾರ ಮಾಡಿರುವ ಕೊಲೆ. ಈ ಕೊಲೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ವಿಪತ್ತು ನಿರ್ವಹಣಾ ನಿಧಿಯಿಂದ 4 ಲಕ್ಷ ಪರಿಹಾರ ಘೋಷಿಸಿ ನಂತರ ಹಿಂಪಡೆಯಿತು. ಆದರೆ ಸರ್ಕಾರದಿಂದ ಯಾರೂ ಇಲ್ಲಿಗೆ ಬಂದು ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಲಿಲ್ಲ. ಅವರ ಕಷ್ಟ ಕೇಳಲಿಲ್ಲ. ಈ ಕೊಲೆಗಳಿಗೆ ಸರ್ಕಾರ ಹಾಗೂ ಚುನಾವಣಾ ಆಯೋಗವೇ ಕಾರಣ ಎಂದು ವಿವಿಧ ನ್ಯಾಯಾಲಯಗಳು ಹೇಳಿವೆ. ಇಷ್ಟಾದರೂ ಸರ್ಕಾರ ಇದಕ್ಕೆ ಕಾರಣರಾದ ಅಧಿಕಾರಿ, ಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದರೆ ಈ ಸರ್ಕಾರ ಬದುಕಿದೆಯಾ, ಸತ್ತಿದೆಯಾ ಎಂಬುದನ್ನು ಜನರೇ ತೀರ್ಮಾನಿಸಬೇಕು’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆಗೆ 28 ವೈದ್ಯರು ಬಲಿ, ಇನ್ನು ಸಿಗದ ಪರಿಹಾರ

’ವಿರೋಧ ಪಕ್ಷದ ಜವಾಬ್ದಾರಿ ಅರಿತು ನಾವು ಈ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲ 36 ಸಂತ್ರಸ್ತರ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೇನೆ. ಇವರನ್ನು ಸರ್ಕಾರ ಭೇಟಿ ಮಾಡುತ್ತದೆ ಎಂದು ಕಾದುನೋಡಿದೆ. ಆದರೆ ಅವರು ಭೇಟಿ ಮಾಡಲಿಲ್ಲ. ನಮ್ಮ ಮನಸ್ಸು ತಡೆಯಲಾಗದೆ ಇವರ ಕಷ್ಟ ಕೇಳಿ, ಪಕ್ಷದ ಪರವಾಗಿ 1 ಲಕ್ಷ ಪರಿಹಾರ ನೀಡಿ, ಅವರಿಗೆ ಧೈರ್ಯ ತುಂಬಲು ನಾವು ಇಲ್ಲಿಗೆ ಬಂದಿದ್ದೇವೆ’ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

’ಮುಖ್ಯಮಂತ್ರಿ ಯಡಿಯೂರಪ್ಪನವರು ಇಲ್ಲಿಗೆ ಬಂದು ಇವರನ್ನು ಭೇಟಿ ಮಾಡಲು ಆಗದಿದ್ದರೆ, ಮಿಕ್ಕ ಸಚಿವರುಗಳಿಗೆ ಏನಾಗಿತ್ತು? ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಕೋವಿಡ್ ಉಸ್ತುವಾರಿ ಹೊತ್ತವರು ಯಾಕೆ ಬರಲಿಲ್ಲ? ಎಲ್ಲರೂ ಬೆಂಗಳೂರಿನಲ್ಲಿ ಪಾಲು ಬೇಕು ಅಂತಾರೆ. ಜನರ ದುಃಖ-ದುಮ್ಮಾನ ಅವರಿಗೆ ಬೇಕಿಲ್ಲ. ಕೋವಿಡ್ ನಿಂದ ಸತ್ತವರು 30 ಸಾವಿರ ಅಂತಾ ಸರ್ಕಾರ ಹೇಳುತ್ತಿದೆ. ಅದರೆ 3 ಲಕ್ಷ ಜನರ ಮರಣ ಪ್ರಮಾಣ ಪತ್ರ ಪಡೆಯಲಾಗಿದೆ. ಹೀಗಾಗಿ ಡೆತ್ ಆಡಿಟ್ ಆಗಬೇಕಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿಧಾನಸೌಧದಲ್ಲಿ ಧ್ವನಿ ಎತ್ತಲಿದೆ’ ಎಂದಿದ್ದಾರೆ.

’ಕೊರೊನಾದಿಂದ ಮೃತಪಟ್ಟವರಿಗೆ, ಸಮಸ್ಯೆ ಎದುರಿಸಿದವರಿಗೆ ಧೈರ್ಯ ತುಂಬುವ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಮನೆ, ಮನೆಗೆ ಹೋಗಿ ಕೋವಿಡ್ ನಿಂದ ಮೃತಪಟ್ಟವರು, ಉದ್ಯೋಗ ಕಳೆದುಕೊಂಡವರು, ಸಂಕಷ್ಟಕ್ಕೆ ಸಿಲುಕಿದವರ ಮಾಹಿತಿ ಸಂಗ್ರಹಿಸಲಿದ್ದಾರೆ. ಅವರಿಗೆ ಪರಿಹಾರ ಕೊಡಿಸಲು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...