Homeಕರ್ನಾಟಕಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

- Advertisement -
- Advertisement -

ಚಾಮರಾಜನಗರ ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವತಿಯಿಂದ ಪರಿಹಾರದ ಚೆಕ್ ವಿತರಿಸಿದ್ದಾರೆ. ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ಆದರೆ, ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಯಿತು. ಇದನ್ನೆಲ್ಲ ಗಮನಿಸಿದ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ತಂಡ ಕಳುಹಿಸಿ ತನಿಖೆ ನಡೆಸಿದಾಗ ಒಟ್ಟು 36 ಮಂದಿ ಸತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ’ ಎಂದಿದ್ದಾರೆ.

’ಇಲ್ಲಿನ ಸಾವುಗಳು ಸರ್ಕಾರ ಮಾಡಿರುವ ಕೊಲೆ. ಈ ಕೊಲೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ವಿಪತ್ತು ನಿರ್ವಹಣಾ ನಿಧಿಯಿಂದ 4 ಲಕ್ಷ ಪರಿಹಾರ ಘೋಷಿಸಿ ನಂತರ ಹಿಂಪಡೆಯಿತು. ಆದರೆ ಸರ್ಕಾರದಿಂದ ಯಾರೂ ಇಲ್ಲಿಗೆ ಬಂದು ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಲಿಲ್ಲ. ಅವರ ಕಷ್ಟ ಕೇಳಲಿಲ್ಲ. ಈ ಕೊಲೆಗಳಿಗೆ ಸರ್ಕಾರ ಹಾಗೂ ಚುನಾವಣಾ ಆಯೋಗವೇ ಕಾರಣ ಎಂದು ವಿವಿಧ ನ್ಯಾಯಾಲಯಗಳು ಹೇಳಿವೆ. ಇಷ್ಟಾದರೂ ಸರ್ಕಾರ ಇದಕ್ಕೆ ಕಾರಣರಾದ ಅಧಿಕಾರಿ, ಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದರೆ ಈ ಸರ್ಕಾರ ಬದುಕಿದೆಯಾ, ಸತ್ತಿದೆಯಾ ಎಂಬುದನ್ನು ಜನರೇ ತೀರ್ಮಾನಿಸಬೇಕು’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆಗೆ 28 ವೈದ್ಯರು ಬಲಿ, ಇನ್ನು ಸಿಗದ ಪರಿಹಾರ

’ವಿರೋಧ ಪಕ್ಷದ ಜವಾಬ್ದಾರಿ ಅರಿತು ನಾವು ಈ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲ 36 ಸಂತ್ರಸ್ತರ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೇನೆ. ಇವರನ್ನು ಸರ್ಕಾರ ಭೇಟಿ ಮಾಡುತ್ತದೆ ಎಂದು ಕಾದುನೋಡಿದೆ. ಆದರೆ ಅವರು ಭೇಟಿ ಮಾಡಲಿಲ್ಲ. ನಮ್ಮ ಮನಸ್ಸು ತಡೆಯಲಾಗದೆ ಇವರ ಕಷ್ಟ ಕೇಳಿ, ಪಕ್ಷದ ಪರವಾಗಿ 1 ಲಕ್ಷ ಪರಿಹಾರ ನೀಡಿ, ಅವರಿಗೆ ಧೈರ್ಯ ತುಂಬಲು ನಾವು ಇಲ್ಲಿಗೆ ಬಂದಿದ್ದೇವೆ’ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

’ಮುಖ್ಯಮಂತ್ರಿ ಯಡಿಯೂರಪ್ಪನವರು ಇಲ್ಲಿಗೆ ಬಂದು ಇವರನ್ನು ಭೇಟಿ ಮಾಡಲು ಆಗದಿದ್ದರೆ, ಮಿಕ್ಕ ಸಚಿವರುಗಳಿಗೆ ಏನಾಗಿತ್ತು? ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಕೋವಿಡ್ ಉಸ್ತುವಾರಿ ಹೊತ್ತವರು ಯಾಕೆ ಬರಲಿಲ್ಲ? ಎಲ್ಲರೂ ಬೆಂಗಳೂರಿನಲ್ಲಿ ಪಾಲು ಬೇಕು ಅಂತಾರೆ. ಜನರ ದುಃಖ-ದುಮ್ಮಾನ ಅವರಿಗೆ ಬೇಕಿಲ್ಲ. ಕೋವಿಡ್ ನಿಂದ ಸತ್ತವರು 30 ಸಾವಿರ ಅಂತಾ ಸರ್ಕಾರ ಹೇಳುತ್ತಿದೆ. ಅದರೆ 3 ಲಕ್ಷ ಜನರ ಮರಣ ಪ್ರಮಾಣ ಪತ್ರ ಪಡೆಯಲಾಗಿದೆ. ಹೀಗಾಗಿ ಡೆತ್ ಆಡಿಟ್ ಆಗಬೇಕಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿಧಾನಸೌಧದಲ್ಲಿ ಧ್ವನಿ ಎತ್ತಲಿದೆ’ ಎಂದಿದ್ದಾರೆ.

’ಕೊರೊನಾದಿಂದ ಮೃತಪಟ್ಟವರಿಗೆ, ಸಮಸ್ಯೆ ಎದುರಿಸಿದವರಿಗೆ ಧೈರ್ಯ ತುಂಬುವ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಮನೆ, ಮನೆಗೆ ಹೋಗಿ ಕೋವಿಡ್ ನಿಂದ ಮೃತಪಟ್ಟವರು, ಉದ್ಯೋಗ ಕಳೆದುಕೊಂಡವರು, ಸಂಕಷ್ಟಕ್ಕೆ ಸಿಲುಕಿದವರ ಮಾಹಿತಿ ಸಂಗ್ರಹಿಸಲಿದ್ದಾರೆ. ಅವರಿಗೆ ಪರಿಹಾರ ಕೊಡಿಸಲು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...