Homeಕರ್ನಾಟಕಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

- Advertisement -
- Advertisement -

ಚಾಮರಾಜನಗರ ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವತಿಯಿಂದ ಪರಿಹಾರದ ಚೆಕ್ ವಿತರಿಸಿದ್ದಾರೆ. ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ಆದರೆ, ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಯಿತು. ಇದನ್ನೆಲ್ಲ ಗಮನಿಸಿದ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ತಂಡ ಕಳುಹಿಸಿ ತನಿಖೆ ನಡೆಸಿದಾಗ ಒಟ್ಟು 36 ಮಂದಿ ಸತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ’ ಎಂದಿದ್ದಾರೆ.

’ಇಲ್ಲಿನ ಸಾವುಗಳು ಸರ್ಕಾರ ಮಾಡಿರುವ ಕೊಲೆ. ಈ ಕೊಲೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ವಿಪತ್ತು ನಿರ್ವಹಣಾ ನಿಧಿಯಿಂದ 4 ಲಕ್ಷ ಪರಿಹಾರ ಘೋಷಿಸಿ ನಂತರ ಹಿಂಪಡೆಯಿತು. ಆದರೆ ಸರ್ಕಾರದಿಂದ ಯಾರೂ ಇಲ್ಲಿಗೆ ಬಂದು ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಲಿಲ್ಲ. ಅವರ ಕಷ್ಟ ಕೇಳಲಿಲ್ಲ. ಈ ಕೊಲೆಗಳಿಗೆ ಸರ್ಕಾರ ಹಾಗೂ ಚುನಾವಣಾ ಆಯೋಗವೇ ಕಾರಣ ಎಂದು ವಿವಿಧ ನ್ಯಾಯಾಲಯಗಳು ಹೇಳಿವೆ. ಇಷ್ಟಾದರೂ ಸರ್ಕಾರ ಇದಕ್ಕೆ ಕಾರಣರಾದ ಅಧಿಕಾರಿ, ಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದರೆ ಈ ಸರ್ಕಾರ ಬದುಕಿದೆಯಾ, ಸತ್ತಿದೆಯಾ ಎಂಬುದನ್ನು ಜನರೇ ತೀರ್ಮಾನಿಸಬೇಕು’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆಗೆ 28 ವೈದ್ಯರು ಬಲಿ, ಇನ್ನು ಸಿಗದ ಪರಿಹಾರ

’ವಿರೋಧ ಪಕ್ಷದ ಜವಾಬ್ದಾರಿ ಅರಿತು ನಾವು ಈ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲ 36 ಸಂತ್ರಸ್ತರ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೇನೆ. ಇವರನ್ನು ಸರ್ಕಾರ ಭೇಟಿ ಮಾಡುತ್ತದೆ ಎಂದು ಕಾದುನೋಡಿದೆ. ಆದರೆ ಅವರು ಭೇಟಿ ಮಾಡಲಿಲ್ಲ. ನಮ್ಮ ಮನಸ್ಸು ತಡೆಯಲಾಗದೆ ಇವರ ಕಷ್ಟ ಕೇಳಿ, ಪಕ್ಷದ ಪರವಾಗಿ 1 ಲಕ್ಷ ಪರಿಹಾರ ನೀಡಿ, ಅವರಿಗೆ ಧೈರ್ಯ ತುಂಬಲು ನಾವು ಇಲ್ಲಿಗೆ ಬಂದಿದ್ದೇವೆ’ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

’ಮುಖ್ಯಮಂತ್ರಿ ಯಡಿಯೂರಪ್ಪನವರು ಇಲ್ಲಿಗೆ ಬಂದು ಇವರನ್ನು ಭೇಟಿ ಮಾಡಲು ಆಗದಿದ್ದರೆ, ಮಿಕ್ಕ ಸಚಿವರುಗಳಿಗೆ ಏನಾಗಿತ್ತು? ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಕೋವಿಡ್ ಉಸ್ತುವಾರಿ ಹೊತ್ತವರು ಯಾಕೆ ಬರಲಿಲ್ಲ? ಎಲ್ಲರೂ ಬೆಂಗಳೂರಿನಲ್ಲಿ ಪಾಲು ಬೇಕು ಅಂತಾರೆ. ಜನರ ದುಃಖ-ದುಮ್ಮಾನ ಅವರಿಗೆ ಬೇಕಿಲ್ಲ. ಕೋವಿಡ್ ನಿಂದ ಸತ್ತವರು 30 ಸಾವಿರ ಅಂತಾ ಸರ್ಕಾರ ಹೇಳುತ್ತಿದೆ. ಅದರೆ 3 ಲಕ್ಷ ಜನರ ಮರಣ ಪ್ರಮಾಣ ಪತ್ರ ಪಡೆಯಲಾಗಿದೆ. ಹೀಗಾಗಿ ಡೆತ್ ಆಡಿಟ್ ಆಗಬೇಕಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿಧಾನಸೌಧದಲ್ಲಿ ಧ್ವನಿ ಎತ್ತಲಿದೆ’ ಎಂದಿದ್ದಾರೆ.

’ಕೊರೊನಾದಿಂದ ಮೃತಪಟ್ಟವರಿಗೆ, ಸಮಸ್ಯೆ ಎದುರಿಸಿದವರಿಗೆ ಧೈರ್ಯ ತುಂಬುವ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಮನೆ, ಮನೆಗೆ ಹೋಗಿ ಕೋವಿಡ್ ನಿಂದ ಮೃತಪಟ್ಟವರು, ಉದ್ಯೋಗ ಕಳೆದುಕೊಂಡವರು, ಸಂಕಷ್ಟಕ್ಕೆ ಸಿಲುಕಿದವರ ಮಾಹಿತಿ ಸಂಗ್ರಹಿಸಲಿದ್ದಾರೆ. ಅವರಿಗೆ ಪರಿಹಾರ ಕೊಡಿಸಲು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...